ಸೀಟು ಹಂಚಿಕೆ: ನಡ್ಡಾಗೆ ಮಹತ್ವದ ಸಲಹೆ ಕೊಟ್ಟ ಪಾಸ್ವಾನ್
ಪಾಟ್ನಾ, ಸೆ. 18: ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದಲ್ಲೇ ಚುನಾವಣೆ ಎದುರಿಸಲಿದೆ ಎಂದು ಘೋಷಿಸಿದ ಬಳಿಕ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಹಾರದ ಮತ್ತೊಂದು ಮಿತ್ರಪಕ್ಷದೊಡನೆ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಲೋಕಜನ ಶಕ್ತಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು ಎಲ್ ಜೆಪಿ ಬೇಡಿಕೆಗಳನ್ನು ಜೆಪಿ ನಡ್ಡಾ ಮುಂದಿಟ್ಟಿದ್ದಾರೆ. ಅದರಲ್ಲಿ ಪ್ರಮುಖವಾದದ್ದು, ಬಿಜೆಪಿ ಅಭ್ಯರ್ಥಿಗಳು ಬಿಹಾರದಲ್ಲಿ ಜೆಡಿಯುಗಿಂತ ಕಡಿಮೆ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಹಾಗೂ ಎಲ್ ಜೆಪಿಗೆ ಇನ್ನೂ ಹೆಚ್ಚಿನ ಕ್ಷೇತ್ರಗಳ ಪಾಲು ಸಿಗಬೇಕು ಎಂಬುದು.
ಸದ್ಯಕ್ಕೆ 143 ಸ್ಥಾನಕ್ಕೆ ಅಭ್ಯರ್ಥಿಗಳು ಸಿದ್ಧ ಎಂದಿರುವ ಎಲ್ ಜೆಪಿ ಈಗ ನಡ್ಡಾ ಮುಂದೆ ಇನ್ನಷ್ಟು ಕ್ಷೇತ್ರಗಳ ಬೇಡಿಕೆ ಇಟ್ಟಿದೆ. ಒಂದು ವೇಳೆ ಜೆಡಿಯುಗೆ ಹೆಚ್ಚಿನ ಸ್ಥಾನಗಳು ಲಭಿಸಿದರೆ, ಜೆಡಿಯು ಅಭ್ಯರ್ಥಿ ವಿರುದ್ಧ ಎಲ್ ಜೆಪಿ ಅಭ್ಯರ್ಥಿಗಳು ಪೈಪೋಟಿಗೆ ನಿಲ್ಲಲಿದ್ದಾರೆ ಎಂದು ಪಾಸ್ವಾನ್ ಸ್ಪಷ್ಟವಾಗಿ ಹೇಳಿದ್ದಾರೆ. ಜೊತೆಗೆ ಜೆಡಿಯುಗಿಂತ ಬಿಜೆಪಿ ಹೆಚ್ಚಿನ ಸ್ಥಾನದಲ್ಲಿ ಸ್ಪರ್ಧಿಸಬಾರದು ಎಂದು ಬೇಡಿಕೆ ಮುಂದಿಟ್ಟಿದ್ದಾರೆ.

ಯುವ ಸಮುದಾಯಕ್ಕೆ ಚಿರಾಗ್ ಭರವಸೆ
ಕೊವಿಡ್ 19 ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳಿಗೆ ಉದ್ಯೋಗ ಅರಸಿ ವಲಸೆ ಹೋಗಿದ್ದ ಯುವ ಸಮುದಾಯಕ್ಕೆ ಚಿರಾಗ್ ಭರವಸೆ ನೀಡಿದ್ದು, ಎಲ್ಲರೂ ಬಿಹಾರದಲ್ಲೆ ನೆಲೆಗೊಳ್ಳಲು ಸಿದ್ಧ ಎಂದಿದ್ದಾರೆ. ನಿತೀಶ್ ಸರ್ಕಾರ ಸರಿಯಾಗಿ ಕಾಳಜಿ ವಹಿಸಿದ್ದರೆ ಬೇರೆ ರಾಜ್ಯಕ್ಕೆ ವಲಸೆ ಹೋಗುವ ಪ್ರಮೇಯವೇ ಇರುತ್ತಿರಲಿಲ್ಲ ಎಂದು ಚಿರಾಗ್ ಎಲ್ಲರಿಗೂ ಮನದಟ್ಟಾಗುವಂತೆ ಮಾಡಿದ್ದಾರೆ. ದಲಿತ-ಮುಸ್ಲಿಂ ಹಾಗೂ ಶ್ರಮಿಕ ವರ್ಗದವರಿಗೆ ನಿತೀಶ್ ಸರ್ಕಾರದ ಮೇಲೆ ಉದ್ಯೋಗ ಕುರಿತಂತೆ ಇದ್ದ ನಿರೀಕ್ಷೆ ಹುಸಿಯಾಗಿದೆ ಎಂದು ಎಲ್ ಜೆಪಿ ಆರೋಪಿಸಿದೆ.

ಚಿರಾಗ್ ಹಾಗೂ ನಿತೀಶ್ ನಡುವಿನ ತಿಕ್ಕಾಟ
ಸೀಟು ಹಂಚಿಕೆ ಹಾಗೂ ಅಭ್ಯರ್ಥಿಗಳನ್ನು ಯಾವ ಕ್ಷೇತ್ರಗಳಲ್ಲಿ ಕಣಕ್ಕಿಳಿಸಬೇಕು ಎಂಬ ಸಮಸ್ಯೆ ಚಿರಾಗ್ ಹಾಗೂ ನಿತೀಶ್ ನಡುವಿನ ತಿಕ್ಕಾಟಕ್ಕೆ ಮೂಲ ಕಾರಣವಾಗಿದೆ. 2010ರ ವಿಧಾನಸಭೆಯಲ್ಲಿ ಇದ್ದ ಸೀಟು ಹಂಚಿಕೆ ಅನುಪಾತದಂತೆ ಈ ಬಾರಿಯೂ ಸೀಟು ಹಂಚಿಕೆಯಾಗಲಿ ಎಂದು ಜೆಡಿಯು ಹಠ ಹಿಡಿದಿದೆ. ಈಗ ಬಿಜೆಪಿ ವರಿಷ್ಠರು ಸೀಟು ಹಂಚಿಕೆ, ಜಾತಿ ಸೆಂಟಿಮೆಂಟು, ಹಿಂದುಳಿದ, ಶೋಷಿತ, ಅಲ್ಪಸಂಖ್ಯಾತರು ಎಲ್ಲರ ಪ್ರಾತಿನಿಧ್ಯ ಪರಿಗಣಿಸಿ ಜೆಡಿಯು ಹಾಗೂ ಎಲ್ ಜೆಪಿ ನಡುವಿನ ಕಿತ್ತಾಟವನ್ನು ಮುಂದಿಟ್ಟುಕೊಂಡು ಸೀಟು ಹಂಚಿಕೆ ಸಾಹಸಕ್ಕೆ ಬಿಜೆಪಿ ಇಳಿದಿದೆ. ಜೆಡಿಯು ವಿರುದ್ಧ 143 ಎಲ್ ಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧ ಚಿರಾಗ್ ಘೋಷಿಸಿದ್ದಾರೆ.

ಎಲ್ ಜೆಪಿ ಅಭಿಮತ
ಕುತ್ತಿಗೆ ತನಕ ನೀರು ಬಂದಿದೆ ತೇಲಿಸುವುದು ಮುಳುಗಿಸುವುದು ನಿರ್ಧರಿಸಬೇಕಿದೆ. ಮೈತ್ರಿಧರ್ಮಕ್ಕೆ ಎಲ್ ಜೆಪಿ ಬದ್ಧವಾಗಿದ್ದು, ಬಿಜೆಪಿ ಜೊತೆ ಜೊತೆಗೆ ಕಣಕ್ಕಿಳಿಯಲಿದೆ. ಜೆಡಿಯು ವಿರುದ್ಧ ಮಾತ್ರ ಬಿಜೆಪಿ ಅಭ್ಯರ್ಥಿಗಳನ್ನು ಇಳಿಸಬೇಕು ಹಾಗೂ ಎಲ್ ಜೆಪಿಗೆ ಹೆಚ್ಚಿನ ಕ್ಷೇತ್ರ ಸಿಗಬೇಕು ಎಂದು ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.
Recommended Video

ಎಲ್ ಜೆಪಿ ಮೈತ್ರಿ ತೊರೆಯಲು ಬಿಜೆಪಿಗೂ ಸಾಧ್ಯವಿಲ್ಲ
ಜೆಡಿಯು ವಿರುದ್ಧ ಎಲ್ ಜೆಪಿ ಅಭ್ಯರ್ಥಿ ಕಣಕ್ಕಿಳಿದರೆ ಮೈತ್ರಿ ಹಾಗೂ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ ಎಂಬುದು ಬಿಜೆಪಿಗೂ ಗೊತ್ತಿದ್ದರೂ ನಿತೀಶ್ ರನ್ನೇ ಮುಂದಿಟ್ಟು ಬಿಹಾರ ಯುದ್ಧ ಗೆಲ್ಲಲು ಬಿಜೆಪಿ ಮುಂದಾಗಿದೆ. ಎಲ್ ಜೆಪಿಗೆ ರಾಮ್ ವಿಲಾಸ್ ಪಾಸ್ವಾನ್ ಅವರು ಕೇಂದ್ರ ಸಚಿವರಾಗಿ ಉಳಿದುಕೊಳ್ಳಬೇಕಿದೆ. ಚುನಾವಣೆ ಹತ್ತಿರ ಇರುವುದರಿಂದ ಮೈತ್ರಿ ಉಳಿಸಿಕೊಳ್ಳುವುದು ಮೂರು ಪಕ್ಷಗಳಿಗೂ ಬೇಕಿದೆ. ಬಿಹಾರದಲ್ಲಿ ಶೇ 17ರಷ್ಟು ದಲಿತ ಮತಗಳಿವೆ. ಎಲ್ ಜೆಪಿ ಇಲ್ಲದೆ ಬಿಜೆಪಿಗೆ ಹೆಚ್ಚಿನ ಕ್ಷೇತ್ರದಲ್ಲಿ ಜಯ ಕಷ್ಟ ಎಂಬುದು ನಡ್ಡಾಗೂ ತಿಳಿದಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications