ಬಿಹಾರದಲ್ಲಿ ಸಿಎಂ ನಿತೀಶ್ ಕುಮಾರ್ ರಿಗೆ ಪ್ರಧಾನಿ ಫುಲ್ ಮಾರ್ಕ್ಸ್!
ಪಾಟ್ನಾ, ಸಪ್ಟೆಂಬರ್.13: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎನ್ನುವ ಸೂಚನೆ ಸಿಕ್ಕಿದೆ. ಆ ಮೂಲಕ ಎಲ್ಲ ಅನುಮಾನಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಂತ್ಯ ಹಾಡಿದ್ದಾರೆ.
900 ಕೋಟಿ ರೂಪಾಯಿಗಿಂತ ಹೆಚ್ಚಿನ ಮೌಲ್ಯದ ಮೂರು ಪೆಟ್ರೋಲಿಯಂ ವಲಯದ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ಮೋದಿ, "ನಾವು ಬಿಹಾರದಲ್ಲಿ" ಸುಶಾಸನ್ "(ಉತ್ತಮ ಆಡಳಿತ) ವನ್ನು ಖಚಿತಪಡಿಸಿಕೊಳ್ಳಬೇಕು.
ಕಳೆದ 15 ವರ್ಷಗಳಲ್ಲಿ ನಡೆದಿರುವ ಉತ್ತಮ ಕಾರ್ಯಗಳು ಅದೇ ರೀತಿಯಲ್ಲಿ ಮುಂದುವರಿಯಬೇಕಿದೆ. "ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು "ಹೊಸ ಭಾರತ, ಹೊಸ ಬಿಹಾರದತ್ತ ನಮ್ಮ ಗುರಿಯಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಲಾಲೂ ಪ್ರಸಾದ್ ಯಾದವ್ ವಿರುದ್ಧ ಮೋದಿ ವಾಗ್ದಾಳಿ
ಕಾಂಗ್ರೆಸ್, ಆರ್ ಜೆಡಿ ಹಾಗೂ ಲಾಲೂ ಪ್ರಸಾದ್ ಯಾದವ್ ಹೆಸರು ಉಲ್ಲೇಖಿಸದೇ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. ಬಿಹಾರದಲ್ಲಿ ಮೊದಲಿನಿಂದಲೂ ಅಭಿವೃದ್ಧಿ ಮತ್ತು ಆರ್ಥಿಕ ಪ್ರಗತಿ ಎನ್ನುವುದು ಬಾಯಿ ಮಾತಿಗಷ್ಟೇ ಸೀಮಿತವಾಗಿದೆ. ರಸ್ತೆ ಅಭಿವೃದ್ಧಿ ಬಗ್ಗೆ ಪ್ರಶ್ನೆ ಮಾಡಿದರೆ ವಾಹನಗಳೇ ಇಲ್ಲದೇ ಕಾಲಿನಲ್ಲಿ ಓಡಾಡುವ ಜನರಿಗೆ ರಸ್ತೆಗಳ ಅಗತ್ಯವೇನಿದೆ ಎನ್ನುವಂತೆ ಮರು ಪ್ರಶ್ನೆ ಹಾಕುತ್ತಿದ್ದರು ಎಂದು ಮೋದಿ ಕಿಡಿ ಕಾರಿದ್ದಾರೆ.

ಬಿಹಾರದಲ್ಲಿ 'ಸುಶಾಸನ್' ಬಗ್ಗೆ ಉಲ್ಲೇಖಿಸಿದ ಮೋದಿ
ಕಳೆದ 15 ವರ್ಷಗಳಿಂದ ಬಿಹಾರದಲ್ಲಿ ಎನ್ ಡಿಎ ಮೈತ್ರಿ ಸರ್ಕಾರವು ಉತ್ತಮ ಆಡಳಿತವನ್ನು ನೀಡುತ್ತಾ ಬಂದಿದೆ. ರಾಜ್ಯದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಯಾಗಿದೆ. ಹೊಸ ವೈದ್ಯಕೀಯ, ತಾಂತ್ರಿಕ, ಕಾನೂನು ಸಂಸ್ಥೆಗಳು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳನ್ನು ತೆರೆಯಲಾಗಿದೆ. ಈ ಅಭಿವೃದ್ಧಿ ಕಾರ್ಯ ಮುಂದುವರಿಸುವಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಮುಖರಾಗಿದ್ದಾರೆ ಎಂದು ಮೋದಿ ತಿಳಿಸಿದರು.

ಮಿತ್ರಪಕ್ಷದಿಂದಲೇ ನಿತೀಶ್ ಕುಮಾರ್ ವಿರುದ್ಧ ಸಮರ
ಬಿಹಾರದಲ್ಲಿ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ಜಾಹೀರಾತಿನ ಮೂಲಕ ಸಿಎಂ ನಿತೀಶ್ ಕುಮಾರ್ ವಿರುದ್ಧ ಪರೋಕ್ಷ ತಂತ್ರ ಹೆಣೆಯುತ್ತಿದ್ದರು. ಬಿಹಾರವೇ ಮೊದಲು, ಬಿಹಾರಿಗಳೇ ಮೊದಲು ಎಂಬ ಶೀರ್ಷಿಕೆ ಅಡಿಯಲ್ಲಿ ಈ ಮೊದಲು ಜಾಹೀರಾತು ನೀಡಲಾಗಿತ್ತು. "ಅವರು ನಮ್ಮನ್ನು ಆಳಲು ಹೋರಾಡುತ್ತಿದ್ದಾರೆ, ಬಿಹಾರಕ್ಕೆ ಹೆಮ್ಮೆ ತರಲು ನಾನು ಹೋರಾಡುತ್ತಿದ್ದೇನೆ" ಎಂದು ಉಪ ಶೀರ್ಷಿಕೆಯನ್ನು ಬರೆಯಿಸಲಾಗಿದ್ದು, ಚಿರಾಗ್ ಪಾಸ್ವಾನ್ ರನ್ನು ಸಿಎಂ ಅಭ್ಯರ್ಥಿ ಎನ್ನುವಂತೆ ಬಿಂಬಿಸಲಾಗುತ್ತಿತ್ತು.

30 ವಿಧಾನಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಎಲ್ ಜೆಪಿ
ಕಳೆದ 2015ರಲ್ಲಿ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಲೋಕಜನಶಕ್ತಿ ಪಕ್ಷವು ತೀವ್ರ ಮುಖಭಂಗ ಅನುಭವಿಸಿತ್ತು. ರಾಜ್ಯದಲ್ಲಿ ಸ್ಪರ್ಧಿಸಿದ 55 ಕ್ಷೇತ್ರಗಳ ಪೈಕಿ ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಈ ಹಿನ್ನೆಲೆ ಮುಂಬರುವ ಚುನಾವಣೆಯಲ್ಲಿ ಕನಿಷ್ಠ 25 ರಿಂದ 30 ಕ್ಷೇತ್ರಗಳಿಗೆ ಬೇಡಿಕೆಯಿಡುವ ಸಾಧ್ಯತೆಗಳಿವೆ. ಇದರ ನಡುವೆ ಎನ್ ಡಿಟಿವಿಗೆ ಪ್ರತಿಕ್ರಿಯೆ ನೀಡಿರುವ ಎಲ್ ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್, "ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ನಾಯಕರಾಗಿ ನಿತೀಶ್ ಕುಮಾರ್ ರನ್ನು ಆಯ್ಕೆ ಮಾಡುವುದರಿಂದ ಯಾವುದೇ ಸಮಸ್ಯೆ ಇಲ್ಲ" ಎಂದು ಹೇಳಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications