ಬಿಹಾರ ಸೋಲು: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಭಿನ್ನಮತ ಭುಗಿಲು
ಪಾಟ್ನಾ, ನವೆಂಬರ್ 13: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಕುರಿತು ಚರ್ಚಿಸಲು ಕಾಂಗ್ರೆಸ್ ಶುಕ್ರವಾರ ಪಾಟ್ನಾದ ಪಕ್ಷದ ರಾಜ್ಯ ಕೇಂದ್ರ ಕಚೇರಿಯ ಸದ್ಭಾವನಾ ಭವನದಲ್ಲಿ ತನ್ನ ನಾಯಕರ ಶಾಸಕಾಂಗ ಸಭೆ ಕರೆದಿತ್ತು.
ಕಾಂಗ್ರೆಸ್ ಬಿಹಾರ ಘಟಕದ ಮುಖ್ಯಸ್ಥ ಮದನ್ ಮೋಹನ್ ಝಾ ಮತ್ತು ಛತ್ತೀಸಗಢ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಭಾಗವಹಿಸಿದ್ದ ಸಭೆಯು ವಾಗ್ವಾದಕ್ಕೆ ಸಾಕ್ಷಿಯಾಯಿತು.
ಬಿಹಾರದಲ್ಲಿ ಕಾಂಗ್ರೆಸ್ ಶಾಸಕ ಪಕ್ಷದ ನಾಯಕ ಯಾರು ಎಂಬ ಚರ್ಚೆಯ ವೇಳೆ ಮಹಾರಾಜ್ ಗಂಜ್ ಶಾಸಕ ವಿಜಯ್ ಶಂಕರ್ ದುಬೆ ಮತ್ತು ಶಾಸಕ ವಿಕ್ರಮ್ ಸಿದ್ಧಾರ್ಥ್ ನಡುವೆ ಜಗಳವಾಗಿದೆ.

ಶಾಸಕ ಸಿದ್ಧಾರ್ಥ್ ಅವರ ಬೆಂಬಲಿಗರು ವಿಜಯ್ ಶಂಕರ್ ದುಬೆ ಅವರನ್ನು "ಕಳ್ಳ' ಎಂದು ಕರೆದಿದ್ದಾರೆ, ಇದು ಮಹಾರಾಜ್ ಗಂಜ್ ಶಾಸಕರ ಬೆಂಬಲಿಗರಿಗೆ ಕೋಪವನ್ನುಂಟು ಮಾಡಿದೆ. ಇಬ್ಬರು ಶಾಸಕರ ಬೆಂಬಲಿಗರ ನಡುವೆ ನಿಂದನೀಯ ಮಾತುಗಳು ಕೇಳಿಬರಲು ಕಾರಣವಾಯಿತು ಮತ್ತು ಇದೇ ವೇಳೆ ಕೈ-ಕೈ ಮೀಲಾಯಿಸುವ ಸನ್ನಿವೇಶ ಸೃಷ್ಠಿಯಾಯಿತು.
ಇತ್ತೀಚಿಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ಜೆಡಿ ನೇತೃತ್ವದ ಮಹಾಘಟಬಂಧನ್ ನಲ್ಲಿ ಕಾಂಗ್ರೆಸ್ 70 ಸ್ಥಾನಗಳಿಗೆ ಸ್ಪರ್ಧಿಸಿತ್ತು. ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಮುಖ್ಯಮಂತ್ರಿಯನ್ನಾಗಿ ಬಿಂಬಿಸಿತ್ತು. ಆರ್ಜೆಡಿ ಪಕ್ಷವು ಬಿಹಾರದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ, ಕಾಂಗ್ರೆಸ್ ಸ್ಪರ್ಧಿಸಿದ 70 ಸ್ಥಾನಗಳಲ್ಲಿ ಕೇವಲ 19 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು.
ಕಾಂಗ್ರೆಸ್ ಪಕ್ಷದ ನಾಯಕರು ಬಿಹಾರದಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆಯನ್ನು ಈ ತರಹದ ಅಸಹ್ಯ ಚುನಾವಣಾ ಪ್ರದರ್ಶನಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ತನ್ನ ಸ್ವಂತ ಬಲದ ಮೇಲೆ ಇನ್ನೂ 10-15 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದ್ದರೆ, ಮಹಾಘಟಬಂಧನ್ 243 ಸದಸ್ಯರ ಬಿಹಾರ ವಿಧಾನಸಭೆಯಲ್ಲಿ 122 ಸಂಖ್ಯೆಯನ್ನು ಸುಲಭವಾಗಿ ದಾಟಬಹುದಿತ್ತು ಎಂದು ಕೆಲವರು ಹೇಳಿದರು.
ಚುನಾವಣಾ ಆಯೋಗದ ಪ್ರಕಾರ 2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು ಮತಗಳ ಶೇ.9.5 ರಷ್ಟು ಕಾಂಗ್ರೆಸ್ ಗಳಿಸಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications