ಬಿಹಾರ: ಸಿಎಂ ಆಕಾಂಕ್ಷಿಗೆ 'ನೋಟಾ'ಕ್ಕಿಂತಲೂ ಕಡಿಮೆ ಮತ!
ಪಟ್ನಾ, ನವೆಂಬರ್ 11: ತಮ್ಮದೇ ರಾಜಕೀಯ ಸಂಘಟನೆ 'ಪ್ಲೂರಲ್ಸ್ ಪಾರ್ಟಿ' ಎಂಬ ಪಕ್ಷ ಸ್ಥಾಪಿಸಿ ಬಿಹಾರ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿಕೊಂಡಿದ್ದ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ನ ಮಾಜಿ ವಿದ್ಯಾರ್ಥಿ ಪುಷ್ಪಮ್ ಪ್ರಿಯಾ ಚೌಧರಿ (28) ತಾವು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಹೀನಾಯ ಸೋಲು ಅನುಭವಿಸಿದ್ದಾರೆ.
ಪುಷ್ಪಮ್ ಪ್ರಿಯಾ ಅವರು ಪಟ್ನಾ ಜಿಲ್ಲೆಯ ಬಂಕಿಪುರ ವಿಧಾನಸಭೆ ಕ್ಷೇತ್ರ ಮತ್ತು ಮಧುಬನಿ ಜಿಲ್ಲೆಯ ಬಿಸ್ಫಿ ವಿಧಾನಸಭೆ ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು. ಆದರೆ ಅವರು ಈ ಎರಡೂ ಕ್ಷೇತ್ರಗಳಲ್ಲಿ ಕೆಲವೇ ಮತಗಳನ್ನು ಪಡೆದುಕೊಂಡಿದ್ದಾರೆ. ಬಿಸ್ಫಿ ವಿಧಾನಸಭೆ ಕ್ಷೇತ್ರದಲ್ಲಿ 'ನೋಟಾ' ಆಯ್ಕೆಯಲ್ಲಿ ಬಿದ್ದ ಮತಗಳಿಗಿಂತಲೂ ಕಡಿಮೆ ಮತಗಳನ್ನು ಪಡೆದಿದ್ದಾರೆ.
ಬಂಕಿಪುರ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿದ್ದ ಬಿಜೆಪಿಯ ನಿತಿನ್ ನವೀನ್ ಮತ್ತು ನಟ, ರಾಜಕಾರಣಿ ಶತ್ರುಘ್ನನ್ ಸಿನ್ಹಾ ಮಗ, ಕಾಂಗ್ರೆಸ್ ಅಭ್ಯರ್ಥಿ ಲವ್ ಸಿನ್ಹಾ ಕಣಕ್ಕಿಳಿದಿದ್ದರು. ನಿತಿನ್ ನವೀನ್ ಸುಲಭದ ಗೆಲುವು ಸಾಧಿಸಿದ್ದಾರೆ.

ಬಿಸ್ಫಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರಿಭೂಷಣ್ ಠಾಕೂರ್ ಮತ್ತು ಆರ್ಜೆಡಿ ಶಾಸಕ ಡಾ ಫಯಾಜ್ ಅಹಮದ್ ಹಾಗೂ ಇತರರು ಕಣದಲ್ಲಿದ್ದರು. ಇಲ್ಲಿ 'ನೋಟಾ' ಮತಗಳಿಗಿಂತಲೂ ಕಡಿಮೆ ಮತಗಳನ್ನು ಪುಷ್ಪಮ್ ಪ್ರಿಯಾ ಪಡೆದಿದ್ದಾರೆ.
ಪುಷ್ಪಮ್ ಪ್ರಿಯಾ ಅವರು ಜೆಡಿಯುದ ಮಾಜಿ ಎಂಎಲ್ಸಿ ವಿನೋದ್ ಚೌಧರಿ ಅವರ ಮಗಳು. ಬಿಹಾರ ಚುನಾವಣೆಗೂ ಮುನ್ನ ತಾವು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪತ್ರಿಕೆಗಳ ಮೂಲಕ ಘೋಷಿಸಿಕೊಳ್ಳುವ ಮೂಲಕ ಅವರು ಕುತೂಹಲ ಮೂಡಿಸಿದ್ದರು. 'ಪ್ಲೂರಲ್ಸ್' ಎಂಬ ಪಕ್ಷ ಸ್ಥಾಪಿಸಿದ್ದ ಅವರು, ಎಂಜಿನಿಯರ್ಗಳು, ವೈದ್ಯರು, ಸಾಮಾಜಿಕ ಕಾರ್ಯಕರ್ತರು, ಶಿಕ್ಷಕರು, ಪ್ರೊಫೆಸರ್ಗಳನ್ನು ತಮ್ಮ ಅಭ್ಯರ್ಥಿಗಳನ್ನಾಗಿ ವಿವಿಧ ಕ್ಷೇತ್ರಗಳಲ್ಲಿ ಕಣಕ್ಕಿಳಿಸಿದ್ದರು. ಅವರೂ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು.
ಚುನಾವಣೆಯಲ್ಲಿ ತಮಗೆ ಹಿನ್ನಡೆಯಾಗುತ್ತಿದ್ದಂತೆಯೇ ಪುಷ್ಪಮ್ ಅವರು ವಿದ್ಯುನ್ಮಾನ ಮತ ಯಂತ್ರಗಳಲ್ಲಿ ದೋಷವಿದೆ ಎಂದು ಆರೋಪಿಸಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications