ಫಲಿತಾಂಶ ಪ್ರಕಟ ರಾತ್ರಿಯಾಗಬಹುದು: ಚುನಾವಣಾ ಆಯೋಗ
ಪಟ್ನಾ, ನವೆಂಬರ್ 10: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಇದುವರೆಗೂ ಒಂದು ಕೋಟಿಯಷ್ಟು ಮತಗಳನ್ನು ಮಾತ್ರ ಎಣಿಕೆ ಮಾಡಲಾಗಿದೆ. ಅಪಾರ ಪ್ರಮಾಣದಲ್ಲಿ ಮತ ಎಣಿಕೆ ಇನ್ನೂ ಬಾಕಿ ಇದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
Recommended Video
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಹಾರದ ಮುಖ್ಯ ಚುನಾವಣಾ ಆಯುಕ್ತ ಎಚ್ ಆರ್ ಶ್ರೀನಿವಾಸ್, '50 ಸುತ್ತುಗಳಷ್ಟು ಮತ ಎಣಿಕೆ ಮಾಡಬೇಕಾದ ಅನೇಕ ಕ್ಷೇತ್ರಗಳಿವೆ. 4 ಕೋಟಿ 10 ಲಕ್ಷ ಮಂದಿ ಮತಚಲಾಯಿಸಿದ್ದಾರೆ. ನಾವು ಇದುವರೆಗೂ 95 ಲಕ್ಷ ಮತಗಳನ್ನು ಎಣಿಕೆ ಮಾಡಿದ್ದೇವೆ. ನಮ್ಮ ಮತ ಎಣಿಕೆಯು ಸಂಜೆಯ ಬಳಿಕವೂ ಮುಂದುವರಿಯಲಿದೆ' ಎಂದು ತಿಳಿಸಿದರು.
Live Updates: ಬಿಹಾರದಲ್ಲಿ ಮಹಾಘಟಬಂಧನ್ ವಿರುದ್ಧ ಎನ್ ಡಿಎ ಮುನ್ನಡೆ
ಇದುವರೆಗೂ ಮತ ಎಣಿಕೆ ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆದಿದೆ. ಒಟ್ಟು 30 ರಿಂದ 35 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. 20-25 ಸುತ್ತುಗಳ ಮತ ಎಣಿಕೆ ಇನ್ನೂ ಬಾಕಿ ಇದೆ. ಸುಮಾರು 166 ಕ್ಷೇತ್ರಗಳಲ್ಲಿ ಮತಗಳ ಅಂತರ 5000ಕ್ಕೂ ಕಡಿಮೆ ಇದೆ ಎಂದರು.

ಕಾನೂನಿಗೆ ಅನುಗುಣವಾಗಿ ಇಂದು ಬೆಳಿಗ್ಗೆ 8 ಗಂಟೆಯವೆರೆಗೆ ಸ್ವೀಕರಿಸಿದ ಎಲ್ಲ ಅಂಚೆ ಮತಪತ್ರಗಳನ್ನು ಮತ ಎಣಿಕೆಗೆ ಪರಿಗಣಿಸಲಾಗಿದೆ. ಇದರ ಅರ್ಥ ಬೆಳಿಗ್ಗೆ 8 ಗಂಟೆಯವರೆಗೆ ಎಲ್ಲ ಮತ ಎಣಿಕೆ ಕೇಂದ್ರಗಳಿಗೆ ಬಂದ ಅಂಚೆ ಮತಪತ್ರಗಳನ್ನು ಇಂದು ಎಣಿಕೆಗೆ ತೆಗೆದುಕೊಳ್ಳಬೇಕಿದೆ ಎಂದು ತಿಳಿಸಿದರು.
60ಕ್ಕೂ ಹೆಚ್ಚಿ ಕ್ಷೇತ್ರಗಳಲ್ಲಿ ಇಬ್ಬರು ಅಭ್ಯರ್ಥಿಗಳ ನಡುವಿನ ಅಂತರ 500 ಮತಗಳಿಗೂ ಕಡಿಮೆ ಇದೆ. ಈ ಮುಂಚೆ 25-26 ಸುತ್ತುಗಳಲ್ಲಿ ಎಣಿಕೆ ಮುಗಿಯುತ್ತಿತ್ತು. ಈಗ ಸುಮಾರು 35 ಸುತ್ತುಗಳಿಗೆ ಹೋಗಿದೆ. ಹೀಗಾಗಿ ರಾತ್ರಿಯವರೆಗೂ ಮತ ಎಣಿಕೆ ಮುಂದುವರಿಯಲಿದೆ ಎಂದರು.
#WATCH Live: Election Commission addresses the media in Delhi. https://t.co/OdkfEz10Zq
— ANI (@ANI) November 10, 2020
ಇವಿಎಂ ಹ್ಯಾಕ್ ಕುರಿತಾದ ಆರೋಪವನ್ನು ನಿರಾಕರಿಸಿದರು. ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಇವಿಎಂಗಳನ್ನು ಟ್ಯಾಂಪರ್ ಮಾಡಲಾಗದು. ಇವಿಎಂಗಳ ಗುಣಮಟ್ಟವನ್ನು ಸುಪ್ರೀಂಕೋರ್ಟ್ ಹಲವು ಬಾರಿ ಎತ್ತಿ ಹಿಡಿದಿದೆ. 2017ರಲ್ಲಿ ಇವಿಎಂ ಚಾಲೆಂಜ್ ಅನ್ನು ಕೂಡ ಚುನಾವಣಾ ಆಯೋಗ ಇರಿಸಿತ್ತು ಎಂದು ಸ್ಪಷ್ಟಪಡಿಸಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications