ತೇಜಸ್ವಿಗೆ ಬಲ ತಂದ ಎಡಪಕ್ಷಗಳು, 20ಕ್ಷೇತ್ರಗಳಲ್ಲಿ ಮುನ್ನಡೆ
ಪಾಟ್ನಾ, ನ. 10: ಬಿಹಾರ ಚುನಾವಣೆಯ ಮತ ಎಣಿಕೆ ಟ್ರೆಂಡ್ ನಲ್ಲಿ ಮೊದಲ ಹಂತದಲ್ಲಿ ಆರ್ ಜೆ ಡಿ ನೇತೃತ್ವದ ಮಹಾಘಟಬಂಧನ್ ಮುನ್ನಡೆ ಪಡೆದುಕೊಂಡಿತ್ತು. ಆದರೆ, ನಂತರ ಎನ್ಡಿಎ ಮುನ್ನಡೆ ಗಳಿಸಿದೆ. ಆದರೆ, ತೇಜಸ್ವಿ ಬಣಕ್ಕೆ ಎಡಪಕ್ಷಗಳು ಬಲ ತುಂಬಿದ್ದು, ಸುಮಾರು 20 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.
2020ರಲ್ಲಿ ಎಡಪಕ್ಷಗಳು 29 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಈ ಪೈಕಿ ಸಿಪಿಐ (ಎಂಎಲ್) 19 ಸೀಟುಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು, ಸಿಪಿಐ 6 ಮತ್ತು ಸಿಪಿಎಂ 4 ಸೀಟುಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಸದ್ಯದ ಟ್ರೆಂಡ್ ನಂತೆ(ಸಮಯ 2.15)
ಆರ್ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಕೂಟದಲ್ಲಿ ಸಿಪಿಐ, ಸಿಪಿಐ(ಎಂ),ಸಿಪಿಐ (ಎಂಎಲ್) ಪಕ್ಷಗಳಿವೆ.
ಅಜಿಯಾಂವ್, ಅರಾಹ್, ಅರ್ವಾಲ್, ಬಲರಾಂಪುರ್, ಬಿಭೂತಿಪುರ್, ದರೌಲಿ, ದರೌಂದಾ, ದಮರಾಂನ್, ಘೋಸಿ ,ಕರಾಕಟ್, ಮಾಂಝಿ, ಮತಿಹನಿ, ಪಾಲಿಗಂಜ್, ತರಾರಿ, ವಾರಿಸ್ನಗರ್, ಜಿರಾದಾಯಿ, ಬಚ್ವಾರಾ ಮತ್ತು ಬಾಖ್ರಿ ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿವೆ.
ಎಡಪಕ್ಷಗಳ ಭರ್ಜರಿ ಪ್ರದರ್ಶನ
ಕಳೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಮಂಕಾಗಿದ್ದ ಪ್ರಮುಖ ಪಕ್ಷಗಳಾ ಸಿಪಿಐ, ಸಿಪಿಐಎಂ ಮುಂತಾದ ಎಡಪಕ್ಷಗಳು ಈ ಬಾರಿ ಉತ್ತಮ ಫಲಿತಾಂಶ ನೀಡುವ ಸುಳಿವು ನೀಡಿವೆ. 2010ರಲ್ಲಿ ಸಿಪಿಐ ಒಂದು ಸ್ಥಾನ, 2015ರ ಚುನಾವಣೆಯಲ್ಲಿ ಸಿಪಿಐ(ಎಂಎಲ್ ) 3 ಸೀಟುಗಳನ್ನು ಗಳಿಸಿತ್ತು.
ಇಂಡಿಯಾ ಟುಡೇ ಮೈ ಆಕ್ಸಿಸ್ ಎಕ್ಸಿಟ್ ಪೋಲ್ ನಂತೆ ಸಿಪಿಐಎಂಎಲ್ 12 ರಿಂದ 16 ಸ್ಥಾನ ಗೆಲ್ಲುವ ನಿರೀಕ್ಷೆ ಹೊಂದಲಾಗಿದೆ. ಸದ್ಯ ಎನ್ಡಿಎ 122 ಮ್ಯಾಜಿಕ್ ನಂಬರ್ ದಾಟಿ ಮುನ್ನಡೆಯುತ್ತಿದ್ದು, ಮಹಾಘಟ್ಬಂಧನ್ ರೇಸ್ ನಲ್ಲಿ ಹಿಂದೆ ಉಳಿಯುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications