ಬದಲಾಯ್ತು ಬಿಹಾರ ಫಲಿತಾಂಶದ ಟ್ರೆಂಡ್: ಆರ್ಜೆಡಿಯಲ್ಲಿ ಚಿಗುರಿದ ಕನಸು
ನವದೆಹಲಿ, ನವೆಂಬರ್ 10: ಮತ ಎಣಿಕೆ ಆರಂಭವಾದ ಸಂದರ್ಭದಿಂದಲೂ ಸರ್ಕಾರ ರಚನೆಗೆ ಅಗತ್ಯವಿರುವಷ್ಟು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಎನ್ಡಿಎಗೆ, ಸಂಜೆ ವೇಳೆಗೆ ಹಿನ್ನಡೆಯಾಗಲು ಶುರುವಾಗಿದೆ. 122 ಮ್ಯಾಜಿಕ್ ಸಂಖ್ಯೆಗಿಂತಲೂ ಅಧಿಕ ಕ್ಷೇತ್ರಗಳಲ್ಲಿ ನಿಚ್ಚಳ ಮುನ್ನಡೆಯನ್ನು ಎನ್ಡಿಎ ಕಾಯ್ದುಕೊಂಡಿತ್ತು. ಇದೇ ರೀತಿಯಲ್ಲಿ ಸಾಗಿದರೆ ಮಹಾಘಟಬಂಧನ ಎರಡನೆಯ ಸ್ಥಾನಕ್ಕೆ ಬರಲಿದೆ ಎನ್ನಲಾಗುತ್ತಿತ್ತು. ಆದರೆ ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಸೂರ್ಯಮುಳುಗಿದ ಬಳಿಕ ಮತ್ತಷ್ಟು ಕಾವೇರಿದೆ.
Recommended Video
100-110 ಕ್ಷೇತ್ರಗಳಲ್ಲಿಯೇ ತನ್ನ ಮುನ್ನಡೆಯನ್ನು ಇರಿಸಿಕೊಂಡಿದ್ದ ಮಹಾಘಟಬಂಧನ ಮತ್ತೆ ಚಿಗುರಿದ ಸೂಚನೆ ನೀಡಿದೆ. ತನ್ನ ಮುನ್ನಡೆ ಅಂತರವನ್ನು ಅದು ಹೆಚ್ಚಿಸಿಕೊಳ್ಳುತ್ತಿದೆ. ಸಂಜೆ ಏಳು ಗಂಟೆಯವರೆಗಿನ ಮತ ಎಣಿಕೆ ಲೆಕ್ಕಾಚಾರದಲ್ಲಿ ಅದು ಸುಮಾರು 115-116 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಇನ್ನೊಂದೆಡೆ ಎನ್ಡಿಎ ಮೈತ್ರಿಕೂಟ ಕೆಲವು ಕ್ಷೇತ್ರಗಳಲ್ಲಿ ಹಿನ್ನಡೆಯ ಆಘಾತ ಅನುಭವಿಸಿದೆ. ಹೀಗಾಗಿ ಎನ್ಡಿಎ ಬಲವು 118-120ಕ್ಕೆ ಇಳಿದಿದೆ.
25 ಸುತ್ತುಗಳ ಮತ ಎಣಿಕೆಕೆ ಮುಗಿದ ಬಳಿಕ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದ ಐದು ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿದೆ. ಎನ್ಡಿಎ ಭಾಗವಾಗಿರುವ ಜೆಡಿಯು ಕೆಲವು ಕ್ಷೇತ್ರಗಳನ್ನು ಕಳೆದುಕೊಳ್ಳುವ ಭೀತಿ ಎದುರಿಸಿದೆ.

ಎನ್ಡಿಎ 9 ಕ್ಷೇತ್ರಗಳಲ್ಲಿ 1,000 ಮತಗಳಿಗಿಂತ ಕಡಿಮೆ ಮುನ್ನಡೆ ಪಡೆದಿದ್ದರೆ, ಮಹಾಮೈತ್ರಿಕೂಟವು 11 ಕ್ಷೇತ್ರಗಳಲ್ಲಿ 1,000ಕ್ಕೂ ಕಡಿಮೆ ಮತಗಳಿಂದ ಮುನ್ನಡೆ ಪಡೆದುಕೊಂಡಿದೆ. ಈ ಕ್ಷೇತ್ರಗಳಲ್ಲಿ ಯಾವುದೇ ಕ್ಷಣದಲ್ಲಿ ಫಲಿತಾಂಶ ಬದಲಾಗಬಹುದು.
ಆರ್ಜೆಡಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. 56 ಕ್ಷೇತ್ರಗಳಲ್ಲಿ ಅದು ಜಯಗಳಿಸಿದ್ದು, 22ರಲ್ಲಿ ಮುನ್ನಡೆ ಸಾಧಿಸಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications