ಲೈಂಗಿಕ ಕಿರುಕುಳ: 3 ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರಕ್ಕೆ ತಡೆ
ಪಾಟ್ನಾ, ಅ.7: ಬಿಹಾರ ವಿಧಾನಸಭೆ ಚುನಾವಣೆ ಬಿಸಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎನ್ಡಿಎ ವಿರುದ್ಧ ಈ ಬಾರಿ ಉತ್ತಮ ಪ್ರದರ್ಶನ ನೀಡುವ ಉತ್ಸಾಹದಲ್ಲಿರುವ ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಗೆ ಆಘಾತವಾಗಿದೆ. ಮೂವರು ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಭಾರಿ ಆಕ್ಷೇಪ ಕೇಳಿ ಬಂದಿದೆ. ಹೀಗಾಗಿ ನಾಮಪತ್ರ ಖಚಿತಪಡಿಸಿಕೊಂಡಿದ್ದ ಮೂವರು ಕಾಂಗ್ರೆಸ್ಸಿಗರಿಗೆ ಹಿನ್ನಡೆಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಮೂವರ ನಾಮಪತ್ರವನ್ನು ತಡೆ ಹಿಡಿದಿದೆ.
ಆದಷ್ಟು ಕ್ರಿಮಿನಲ್ ಹಿನ್ನೆಲೆ ಇಲ್ಲದ ಅಭ್ಯರ್ಥಗಳನ್ನು ಈ ಬಾರಿ ಚುನಾವಣಾ ಕಣದಲ್ಲಿ ಇಳಿಸಲು ಕಾಂಗ್ರೆಸ್ ಮುಂದಾಗಿದೆ. ಕೆಲವರು ಮುಖಂಡರ ಮೇಲೆ ಲೈಂಗಿಕ ಕಿರುಕುಳ ಕೇಸ್ ಗಳು ದಾಖಲಾಗಿವೆ. ಅಭ್ಯರ್ಥಗಳ ಪಟ್ಟಿಯನ್ನು ಅಳೆದು ತೂಗಿ ಅಂತಿಮ ಗೊಳಿಸಲಾಗುತ್ತಿದ್ದು, ರಾಜ್ಯ ಉಸ್ತುವಾರಿಗಳ ಕೈಗೆ ತಲುಪಿಸಲಾಗಿದೆ.
ಅತ್ಯಾಚಾರಿಗಳಿಗೆ ಪಕ್ಷಗಳು ಟಿಕೆಟ್ ನೀಡಬಾರದು ಹಾಗೂ ಸ್ಪರ್ಧಿಸಲು ಬಿಡಬಾರದು ಎಂದು ಕಾಂಗ್ರೆಸ್ ಮುಖಂಡರಾದ ಸುಷ್ಮಿತಾ ದೇವ್ ಹೇಳಿದ್ದನ್ನು ಇಲ್ಲಿಸ್ಮರಿಸಬಹುದು. ಇಂಥ ಅಭ್ಯರ್ಥಿಗಳ ಆಯ್ಕೆ ವಿರುದ್ಧ ದನಿಯೆತ್ತಲು ವಿಟೋ ಶಕ್ತಿಯನ್ನು ನೀಡಬೇಕು ಎಂದಿದ್ದರು. ಅದರಂತೆ, ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ ಮೂವರು ಅಭ್ಯರ್ಥಿಗಳ ವಿರುದ್ಧ ಇಂಥ ಪ್ರಕರಣಗಳಿದ್ದು ಅವರ ಹೆಸರನ್ನು ಅಭ್ಯರ್ಥಿಗಳ ಅಂತಿಮ ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಹೆಚ್ಚಿದೆ.

ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ನಲ್ಲಿ ಆರ್ ಜೆಡಿ, ಕಾಂಗ್ರೆಸ್ ಅಲ್ಲದೆ ಎಡಪಕ್ಷಗಳಿವೆ, ಕ್ರಮವಾಗಿ 144, 70 ಹಾಗೂ 29 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ.
243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.
2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ. ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.
-
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications