ಬಿಹಾರ ಚುನಾವಣೆಯಲ್ಲಿ ನೋಟಾ ಬಟನ್ ಒತ್ತಿದವರೆಷ್ಟು ಮಂದಿ?
ಪಾಟ್ನಾ, ನ. 11: ಕೊವಿಡ್19 ಸಂಕಷ್ಟದ ನಡುವೆ ಕೇಂದ್ರ ಚುನಾವಣಾ ಆಯೋಗವು ಬಿಹಾರದಲ್ಲಿ ವಿಧಾನಸಭೆ ಚುನಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. 243 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ 3755 ಅಭ್ಯರ್ಥಿಗಳ ಚುನಾವಣಾ ಭವಿಷ್ಯ ಹೊರ ಬಂದಿದ್ದು, ಎನ್ಡಿಎ ಸರಳ ಬಹುಮತ ಪಡೆದುಕೊಂಡಿದೆ.
ಬಿಹಾರ ವಿಧಾನಸಭಾ ಚುನಾವಣೆಗೆ ಮೂರು ಹಂತಗಳಲ್ಲಿ ಮತದಾನ ನಡೆಸಲಾಯಿತು ಅಕ್ಟೋಬರ್ 28ರ ಮೊದಲ ಹಂತದಲ್ಲಿ ಶೇ.55.69ರಷ್ಟು ಮತದಾನ ನಡೆದಿದೆ. ನವೆಂಬರ್ 03ರ ಎರಡನೇ ಹಂತದಲ್ಲಿ ಶೇ.53.51ರಷ್ಟು ಮತದಾನ ನಡೆದಿದೆ. 3ನೇ ಹಂತದಲ್ಲಿ ಶೇ.51ರಷ್ಟು ಮತದಾನ ದಾಖಲಾಗಿತ್ತು. ಒಟ್ಟಾರೆ 4 ಕೋಟಿ ಮತದಾರರು ಮತಚಲಾಯಿಸಿದ್ದರು. ಈ ಪೈಕಿ ನೋಟಾ ಬಟನ್ ಒತ್ತಿದವರೆಷ್ಟು ಎಂದರೆ ಬರೋಬ್ಬರಿ 7 ಲಕ್ಷ ಮಂದಿ.
ಇವಿಎಂನಲ್ಲಿರುವ ಅಭ್ಯರ್ಥಿಗಳ ಪೈಕಿ ಯಾರಿಗೂ ಮತ ಹಾಕಲು ಇಚ್ಛಿಸದೆ None off the above ಆಯ್ಕೆಯನ್ನು 7 ಲಕ್ಷ ಮಂದಿ ಮಾಡಿದ್ದಾರೆ ಎಂದು ಚುನಾವಣಾ ಆಯೋಗವು ಅಂಕಿ ಅಂಶ ನೀಡಿದೆ. ಸುಮಾರು 7,06,252 ಮತದಾರರು (ಶೇ 1.7) ನೋಟಾ ಆಯ್ಕೆ ಮಾಡಿಕೊಂಡಿದ್ದಾರೆ

2013ರಿಂದ ಇವಿಎಂನಲ್ಲಿ ನೋಟಾ ಬಟನ್ ಅಳವಡಿಸಲಾಗಿದೆ. ಇದು ಮತಯಂತ್ರದ ಕೊನೆ ಆಯ್ಕೆ ಬಟನ್ ಆಗಿರಬೇಕು ಎಂದು ಸುಪ್ರೀಂಕೋರ್ಟ್ ಸೂಚನೆಯನ್ನು ಪಾಲಿಸಲಾಗುತ್ತಿದೆ. ನೋಟಾ ಬರುವುದಕ್ಕೂ ಮುನ್ನ ಬ್ಯಾಲೆಟ್ ಪತ್ರ ಬಳಸಿ ಮತ ಮುದ್ರೆ ಒತ್ತುವ ಪ್ರಕ್ರಿಯೆ ಜಾರಿಯಲ್ಲಿತ್ತು. ಆಗ ಕೂಡಾ 49 ಒ ಅರ್ಜಿ ನಮೂನೆ ಕೇಳಿ ಪಡೆದು ಅರ್ಜಿ ತುಂಬಿ ಯಾವುದೇ ಅಭ್ಯರ್ಥಿಗೆ ಮತ ಹಾಕುತ್ತಿಲ್ಲ ಎಂದು ದಾಖಲು ಮಾಡಬಹುದಾಗಿತ್ತು. ಈ ಬಾರಿ ಬಿಹಾರದಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚಿನ ನೋಟಾ ಮತಗಳು ದಾಖಲಾಗಿರುವುದು ವಿಶೇಷ.
ಈ ಮತದಾನ ಮಾಡಬೇಕಾದರೆ ಯಾವ ಕಾರಣಕ್ಕಾಗಿ ಯಾವ ಅಭ್ಯರ್ಥಿಯೂ ಹಿಡಿಸಿಲ್ಲ ಎಂದು ನಮೂದಿಸಬೇಕು ಮತದಾರನ ಹೆಸರು ವಿಳಾಸವನ್ನು ಚುನಾವಣಾ ಆಯೋಗ ಗುಪ್ತವಾಗಿರಿಸುತ್ತದೆ. ಒಂದು ವೇಳೆ ಫಾರ್ಮ್ 49 ಬಳಸಿ ಶೇ.40ಕ್ಕಿಂತ ಅಧಿಕ ಮತ ಬಿದ್ದರೆ ಮರು ಚುನಾವಣೆ ಮಾಡಬೇಕಾಗುತ್ತದೆ. ಆದರೆ, ಮರು ಚುನಾವಣೆ, ಅಭ್ಯರ್ಥಿಯ ಅನರ್ಹತೆ ಬಗ್ಗೆ ಸುಪ್ರೀಂಕೋರ್ಟ್ ವ್ಯತಿರಿಕ್ತ ತೀರ್ಪು ನೀಡಿದ್ದು, ನೋಟಾ ಪ್ರಮುಖ ಅಸ್ತ್ರವಾಗದೇ ಬಡವನ ಕೋಪ ದವಡೆಗೆ ಮೂಲ ಎಂಬಂತೆ ಆಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications