ಒಂದೇ ಕಾಲಿನಲ್ಲಿ ಶಾಲೆಗೆ ಹೋಗುತ್ತಿದ್ದ ಬಿಹಾರದ ಬಾಲಕಿಗೆ ಕೃತಕ ಕಾಲು ನೀಡಿ ನೆರವು
ಜಮುಯಿ ಮೇ 28: ಇತ್ತೀಚೆಗಷ್ಟೇ ವೈರಲ್ ಆಗಿರುವ ವಿಡಿಯೋದಲ್ಲಿ ಒಂದೇ ಕಾಲಿನಲ್ಲಿ ಜಿಗಿಯುತ್ತಾ ಶಾಲೆಗೆ ಹೋಗುತ್ತಿದ್ದ ಬಿಹಾರದ 10 ವರ್ಷದ ಬಾಲಕಿಯೊಬ್ಬಳಿಗೆ ಕೃತಕ ಕಾಲು ನೆರವಿನಿಂದ ನಡೆಯುವಂತಾಗಿದೆ.
ಬಿಹಾರದ ಜಮುಯಿ ಜಿಲ್ಲೆಯ ಸೀಮಾ ಎಂಬ ಹುಡುಗಿ ಶಾಲಾ ಸಮವಸ್ತ್ರದಲ್ಲಿ ಒಂದೇ ಕಾಲಿನಲ್ಲಿ ಜಿಗುತ್ತಾ ಶಾಲೆಗೆ ಹೋಗುವ ದೃಶ್ಯ ವೈರಲ್ ಆಗುವುದರೊಂದಿಗೆ ನೋಡುಗರ ಮನ ಕರಗಿಸಿತ್ತು. ಈ ಬಾಲಕಿಯ ಅಭ್ಯಾಸದ ಮೇಲಿನ ಆಸಕ್ತಿಗೆ ಮಾರು ಹೋದ ಜನ ಇವಳಿಗೆ ಸಹಾಯ ಮಾಡಿದ್ದಾರೆ. ಛತ್ತೀಸ್ಗಢ ಕೇಡರ್ನ 2009-ಬ್ಯಾಚ್ ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಸೀಮ ಈಗ ಪ್ರಾಸ್ಥೆಟಿಕ್ ಕಾಲು ಅಥವಾ ಕೃತಕ ಕಾಲನ್ನು ಧರಿಸಿದ್ದಾರೆ ಎಂದು ಫೋಟೋವನ್ನು ಶೇರ್ ಮಾಡಿದ್ದಾರೆ. ಜೊತೆಗೆ ಶರಣ್ ಜೀವನವನ್ನು ಸುಧಾರಿಸುವಲ್ಲಿ "ಸಾಮಾಜಿಕ ಮಾಧ್ಯಮದ ಶಕ್ತಿ" ಎಂದು ಶ್ಲಾಘಿಸಿದ್ದಾರೆ.
‘सोशल मीडिया’ की ताक़त.❤️ pic.twitter.com/ztAxcBr7QZ
— Awanish Sharan (@AwanishSharan) May 27, 2022
ಎರಡು ವರ್ಷಗಳ ಹಿಂದೆ ಅಪಘಾತವೊಂದರಲ್ಲಿ ಸೀಮಾ ಕಾಲು ಕಳೆದುಕೊಂಡಿದ್ದಳು. ಆದಾಗ್ಯೂ, ಅವಳು ತನ್ನ ಅಧ್ಯಯನವನ್ನು ಮುಂದುವರಿಸಲು ಬಯಸಿದ್ದಳು. ಆದ್ದರಿಂದ ಅವಳು ತನ್ನ ಹಳ್ಳಿಯ ಶಾಲೆಗೆ ಪ್ರತಿನಿತ್ಯ ಒಂದು ಕಿಲೋಮೀಟರ್ ಜಿಗಿಯಬೇಕಾಗಿತ್ತು, ಅಸಮವಾದ ಹೊಲಗಳು ಮತ್ತು ಕಿರಿದಾದ ಪ್ರದೇಶಗಳನ್ನು ಹಾದು ಹೋಗಬೇಕಾಗಿತ್ತು. ಸೀಮಾ ಶಾಲೆಗೆ ಹೋಗುತ್ತಿರುವ ವಿಡಿಯೊವನ್ನು ಸುದ್ದಿವಾಹಿನಿಗಳು ಸೇರಿದಂತೆ ಅನೇಕ ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳು ಹಂಚಿಕೊಂಡಿವೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಜನರ ಗಮನ ಸೆಳೆದಿತ್ತು.

अब यह अपने एक नहीं दोनो पैरों पर क़ूद कर स्कूल जाएगी।
— sonu sood (@SonuSood) May 25, 2022
टिकट भेज रहा हूँ, चलिए दोनो पैरों पर चलने का समय आ गया। @SoodFoundation 🇮🇳 https://t.co/0d56m9jMuA
ವಿಡಿಯೊವನ್ನು ಹಂಚಿಕೊಂಡ ಬಿಹಾರ ಸಚಿವ ಡಾ ಅಶೋಕ್ ಚೌಧರಿ ಅವರು ಹಿಂದಿಯಲ್ಲಿ ತಮ್ಮ ರಾಜ್ಯದ ಮಕ್ಕಳು ಅಡೆತಡೆಗಳನ್ನು ಮೆಟ್ಟಿ ನಿಲ್ಲಲು ಬಯಸುತ್ತಾರೆ ಎಂಬ "ಹೆಮ್ಮೆ" ಇದೆ ಎಂದು ಹೇಳಿ ವಿಡಿಯೋ ಹಂಚಿಕೊಂಡಿದ್ದರು. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟ್ಯಾಗ್ ಮಾಡಿದ ಅವರು, "ಅಗತ್ಯವಾದ ಸಹಾಯ" ಈಗಾಗಲೇ ಸೀಮಾವನ್ನು ತಲುಪಿದೆ ಎಂದು ಹೇಳಿದ್ದಾರೆ.
ಸೀಮಾ ಅವರ ಕಥೆಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಜಮುಯಿ ಜಿಲ್ಲಾ ಅಧಿಕಾರಿಗಳು ಅವರಿಗೆ ತ್ರಿಚಕ್ರ ವಾಹನವನ್ನು ನೀಡಿದ್ದಾರೆ. ನಟ-ಪರೋಪಕಾರಿ ಸೋನು ಸೂದ್ ಕೂಡ ಸೀಮಾಗೆ ಸಹಾಯ ಮಾಡಲು ಮುಂದೆ ಬಂದರು. ಟ್ವೀಟ್ನಲ್ಲಿ, ಸೀಮಾ ಈಗ ಒಂದಲ್ಲ ಎರಡು ಕಾಲುಗಳ ಮೇಲೆ ನಡೆಯುವ ಮೂಲಕ ಶಾಲೆಗೆ ಹೋಗುತ್ತಾರೆ ಎಂದು ಹೇಳಿದ್ದಾರೆ. "ನಾನು ಟಿಕೆಟ್ ಕಳುಹಿಸುತ್ತಿದ್ದೇನೆ, ಎರಡೂ ಕಾಲುಗಳ ಮೇಲೆ ನಡೆಯುವ ಸಮಯ ಸೀಮಾಗೆ ಬಂದಿದೆ" ಎಂದು ಅವರು ತಮ್ಮ ಎನ್ಜಿಒ ಸೂದ್ ಫೌಂಡೇಶನ್ ಅನ್ನು ಟ್ಯಾಗ್ ಮಾಡಿದ್ದರು. ಸದ್ಯ ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಶಿಕ್ಷಣ ಇಲಾಖೆಯಿಂದ ಕೃತಕ ಅಂಗವನ್ನು ಒದಗಿಸಲಾಗಿದೆ.
-
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications