ಎನ್ಆರ್ಸಿ ಜಾರಿಯಿಲ್ಲ: ಬಿಹಾರ ಸರ್ಕಾರ ನಿರ್ಣಯ
ಪಟ್ನಾ, ಫೆಬ್ರವರಿ 27: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಜಾರಿಗೆ ತರುವುದಿಲ್ಲ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು (ಎನ್ಪಿಆರ್) ಒಂದು ತಿದ್ದುಪಡಿಯೊಂದಿಗೆ 2010ರ ಮಾದರಿಯಲ್ಲಿಯೇ ಜಾರಿಗೆ ತರಬೇಕು ಎಂದು ಬಿಹಾರ ವಿಧಾನಸಭೆ ಅವಿರೋಧವಾಗಿ ನಿರ್ಣಯ ಕೈಗೊಂಡಿದೆ. ಎನ್ಡಿಎ ಸರ್ಕಾರದ ಆಡಳಿತವಿರುವ ರಾಜ್ಯದಲ್ಲಿ ಈ ರೀತಿ ನಿರ್ಣಯ ತೆಗೆದುಕೊಂಡಿರುವುದು ಇದೇ ಮೊದಲು.
ವಿರೋಧಪಕ್ಷದ ನಾಯಕ ತೇಜಸ್ವಿ ಯಾದವ್ ಮತ್ತು ಇತರರು ಮಂಡಿಸಿದ ಸಿಎಎ, ಎನ್ಆರ್ಸಿ, ಎನ್ಪಿಆರ್ ವಿರುದ್ಧ ನಿಲುವಳಿ ಸೂಚನೆ ಕುರಿತು ಪ್ರತಿಕ್ರಿಯಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಎನ್ಪಿಆರ್ ಅರ್ಜಿಯಲ್ಲಿನ ವಿವಾದಾಸ್ಪದ ಸಂಗತಿಗಳನ್ನು ಕೈಬಿಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ತಿಳಿಸಿದರು.
ಜತೆಗೆ ಅರ್ಜಿಯಲ್ಲಿ ತೃತೀಯ ಲಿಂಗಿಗಳ ಕಾಲಂಅನ್ನು ಅಳವಡಿಸುವಂತೆ ತಮ್ಮ ಸರ್ಕಾರ ಕೇಳಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಹಾರದಲ್ಲಿ ಜೆಡಿಯು ಮಿತ್ರಪಕ್ಷವಾಗಿರುವ ಬಿಜೆಪಿಯ ಯಾವ ಸದಸ್ಯರೂ ಸದನದಲ್ಲಿ ಹಾಜರಿರಲಿಲ್ಲ ಎನ್ನಲಾಗಿದೆ.

ಎನ್ಆರ್ಸಿ/ಎನ್ಪಿಆರ್ಅನ್ನು ಅನುಷ್ಠಾನಗೊಳಿಸದೆ ಇರಲು ಬಿಹಾರ ವಿಧಾನಸಭೆ ಅವಿರೋಧವಾಗಿ ನಿರ್ಣಯ ಅಂಗೀಕರಿಸಿದೆ ಎಂದು ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದರು.
ಎನ್ಪಿಆರ್ ಕುರಿತಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಂದಲೂ ಪ್ರತಿಕ್ರಿಯೆ ನೀಡಿದೆ. ಈ ಸಂದರ್ಭವನ್ನು ಎನ್ಆರ್ಸಿ ಕುರಿತಾದ ತಮ್ಮ ಸರ್ಕಾರದ ನಿಲುವು ಪ್ರದರ್ಶಿಸಲು ಬಳಸಿಕೊಂಡಿರುವುದಾಗಿ ನಿತೀಶ್ ಕುಮಾರ್ ತಿಳಿಸಿದರು.

'ಎನ್ಪಿಆರ್ ಮಾದರಿಯು 2010ರಲ್ಲಿ ಹೇಗಿತ್ತೋ ಹಾಗೆಯೇ ಇರಲಿ ಎಂದು ಕೇಂದ್ರ ಸರ್ಕಾರಕ್ಕೆ ಬಿಹಾರ ಸರ್ಕಾರ ತಿಳಿಸಿದೆ. ಒಂದೇ ಒಂದು ಬದಲಾವಣೆಯೆಂದರೆ ಅದರಲ್ಲಿ ತೃತೀಯಲಿಂಗಿಗಳ ಕಾಲಂ ಅಳವಡಿಸಬೇಕಿದೆ. ಬಿಹಾರಕ್ಕೆ ಎನ್ಆರ್ಸಿ ಅಗತ್ಯವಿಲ್ಲವೆಂದೂ ನಾವು ಅವರಿಗೆ ತಿಳಿಸಿದ್ದೇವೆ' ಎಂದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications