ಬಿಹಾರದಲ್ಲಿ ಕ್ವಾರಂಟೈನ್ ಅವಧಿ ಮುಗಿಸಿದವರಿಗೆ ಕಾಂಡೋಮ್ ವಿತರಣೆ
ಪಾಟ್ನಾ, ಜೂನ್ 2: ಕೊರೊನಾ ವೈರಸ್ ಭೀತಿಯಿಂದ ದೇಶದ ಪ್ರಮುಖ ನಗರಗಳಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರು ರಾಜ್ಯಗಳಿಗೆ ಮರಳುತ್ತಿದ್ದಾರೆ. ಬಿಹಾರ್ ರಾಜ್ಯಕ್ಕೂ ಸಾವಿರಾರು ಕಾರ್ಮಿಕರು ಹಿಂತಿರುಗುತ್ತಿದ್ದು, ರಾಜ್ಯಕ್ಕೆ ಬಂದವರೆನ್ನೆಲ್ಲಾ ಕ್ವಾರಂಟೈನ್ ಮಾಡಲಾಗಿತ್ತು.
Recommended Video
ಇದೀಗ, ರಾಜ್ಯಕ್ಕೆ ಬರುವ ವಲಸೆ ಕಾರ್ಮಿಕರಿಗೆ ಕ್ವಾರಂಟೈನ್ ಅವಧಿ ಮುಗಿದ ಬಳಿಕ ಕಾಂಡೋಮ್ ಮತ್ತು ಗರ್ಭನಿರೋಧಕ ಮಾತ್ರೆಗಳನ್ನು ನೀಡಲು ಬಿಹಾರ್ ಸರ್ಕಾರ ಮುಂದಾಗಿದೆ.
ಕೊರೊನಾ ಲಾಕ್ಡೌನ್ ಬಳಿಕ ರಾಜ್ಯದಲ್ಲಿ ಜನಸಂಖ್ಯೆ ಹೆಚ್ಚಾಗಬಹುದು ಎಂಬ ಆತಂಕದಿಂದ ಬಿಹಾರ್ ಸರ್ಕಾರ ಇಂತಹ ಯೋಜನೆ ಕೈಗೊಂಡಿದೆ. ಜನಸಂಖ್ಯೆ ನಿಯಂತ್ರಣಕ್ಕಾಗಿ ಕುಟುಂಬ ಯೋಜನೆ ಅಡಿ ಹೊಸ ಅಭಿಯಾನಗಳಿಗೆ ಬಿಹಾರ್ ಸರ್ಕಾರ ಚಾಲನೆ ನೀಡಿದೆ. ಮುಂದೆ ಓದಿ.....

ಕ್ವಾರಂಟೈನ್ ಮುಗಿಸಿದವರಿಗೆ ಕಾಂಡೋಮ್ ಕಡ್ಡಾಯ
ಬಿಹಾರ್ ರಾಜ್ಯ ಆರೋಗ್ಯ ಇಲಾಖೆ ಕುಟುಂಬಕ್ಕೆ ಯೋಜನೆಯನ್ನು ಉತ್ತೇಜಿಸುವ ಅಭಿಯಾನ ಆರಂಭಿಸಿದೆ. ಹೀಗಾಗಿ, ಹೊರರಾಜ್ಯಗಳಿಂದ ಬಿಹಾರಕ್ಕೆ ಮರಳುವ ವಲಸೆ ಕಾರ್ಮಿಕರು ಕ್ವಾರಂಟೈನ್ ಗೆ ಒಳಗಾಗಬೇಕು. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಅವರಿಗೆ ಕುಟುಂಬ ಯೋಜನೆ ಕುರಿತು ವಿವರಿಸಿ ಕಾಂಡೋಮ್ ಮತ್ತು ಗರ್ಭನಿರೋಧಕ ಕಿಟ್ ನೀಡುತ್ತಿದೆ.

ಡೋರ್ ಟು ಡೋರ್ ಸ್ಕ್ರೀನಿಂಗ್ ಸಮಯದಲ್ಲೂ ವಿತರಣೆ
ಕೊರೊನಾ ವೈರಸ್ ಭೀತಿಯಿಂದ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಸ್ಕ್ರೀನಿಂಗ್ ಮಾಡುತ್ತಿದ್ದಾರೆ. ಈ ವೇಳೆಯೂ ಜನರಿಗೆ ಕಾಂಡೋಮ್ ಮತ್ತು ಗರ್ಭನಿರೋಧಕ ಕಿಟ್ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿ ತಿಳಿಸಿದ್ದಾರೆ. ಗೋಪಾಲ್ಗುಂಜ್, ಜಮುಯಿ, ಸಮಸ್ತಿಪುರ, ಸುಪಾಲ್, ಸರನ್, ರೋಹ್ತಾಸ್ ಮತ್ತು ಪೂರ್ವ ಚಂಪಾರನ್ ಮುಂತಾದ ಜಿಲ್ಲೆಗಳಲ್ಲಿ ಈಗಾಗಲೇ ವಿತರಣೆ ಆರಂಭಿಸಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ.

20,000 ಕಿಟ್ ವಿತರಿಸಲಾಗಿದೆ
'ಗೋಪಾಲ್ ಗುಂಜ್ ಜಿಲ್ಲೆಯಲ್ಲಿ ಈಗಾಗಲೇ 20,000ಕ್ಕೂ ಹೆಚ್ಚು ಗರ್ಭನಿರೋಧಕ ಪ್ಯಾಕೆಟ್ಗಳನ್ನು ವಿತರಿಸಲಾಗಿದೆ ಮತ್ತು ಉಳಿದ 7,000 ವಲಸಿಗರು ಸಹ ಕ್ವಾರಂಟೈನ್ನಿಂದ ಬಿಡುಗಡೆಯಾಗುವ ಸಮಯದಲ್ಲಿ ಕಿಟ್ ಪಡೆಯಲಿದ್ದಾರೆ' ಎಂದು ಗೋಪಾಲ್ಗುಂಜ್ ಸಿವಿಲ್ ಸರ್ಜನ್ ಟಿ.ಎನ್. ಸಿಂಗ್ ತಿಳಿಸಿದ್ದಾರೆ. ಸಮಸ್ತಿಪುರ ಜಿಲ್ಲೆಯ ಬ್ಲಾಕ್ ಮಟ್ಟದಲ್ಲೂ ಕುಟುಂಬ ಕಲ್ಯಾಣ ಅಧಿಕಾರಿಗಳು ಕ್ವಾರಂಟೈನ್ ಅವಧಿ ಮುಗಿಸಿ ಹೊರ ಹೋಗುವ ಜನರಿಗೆ ಕಾಂಡೋಮ್ ಮತ್ತು ಗರ್ಭನಿರೋಧಕಗಳನ್ನು ವಿತರಿಸುತ್ತಿದ್ದಾರೆ.

ಬಿಹಾರ್ನಲ್ಲಿ ಕೊರೊನಾ ವಿವರ
ಬಿಹಾರದಲ್ಲಿ ಇದುವರೆಗೂ 4049 ಜನರಿಗೆ ಕೊರೊನಾ ವೈರಸ್ ಅಂಟಿಕೊಂಡಿದೆ. 1741 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 2285 ಜನರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅಂದ್ಹಾಗೆ, ಬಿಹಾರದಲ್ಲಿ 2011ನೇ ಜನಗಣತಿ ಪ್ರಕಾರ 10 ಕೋಟಿ ಜನಸಂಖ್ಯೆ ಹೊಂದಿದೆ. ಸುಮಾರು 14 ಲಕ್ಷ ವಲಸೆ ಕಾರ್ಮಿಕರು ಲಾಕ್ಡೌನ್ ವೇಳೆ ಬಿಹಾರ್ ರಾಜ್ಯಕ್ಕೆ ಮರಳಿದ್ದಾರೆ ಎಂಬ ಮಾಹಿತಿ ಇದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications