5 ಕೋಟಿಗೂ ಅಧಿಕ ಜನರಿಂದ ಮಾನವ ಸರಪಳಿ: ಬಿಹಾರದಲ್ಲಿ ವಿಶ್ವದಾಖಲೆ
ಪಾಟ್ನಾ, ಜನವರಿ 20: ನೀರು, ಅರಣ್ಯ ರಕ್ಷಣೆ ಹಾಗೂ ಸಾಮಾಜಿಕ ಪಿಡುಗುಗಳ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಬಿಹಾರದಲ್ಲಿ ಐದು ಕೋಟಿಗೂ ಅಧಿಕ ಜನರು 18 ಸಾವಿರ ಕಿ.ಮೀಗೂ ಹೆಚ್ಚು ದೂರದವರೆಗೆ ಮಾನವ ಸರಪಳಿ ನಿರ್ಮಿಸಿ ಲಿಮ್ಕಾ ವಿಶ್ವದಾಖಲೆ ಸೃಷ್ಟಿಸಿದ್ದಾರೆ.
Recommended Video
ಸತತ ಮೂರನೇ ವರ್ಷ ಆಯೋಜನೆ ಮಾಡುತ್ತಿರುವ ಇಂತಹ ಒಂದು ಅಭೂತಪೂರ್ವ ಜಾಗೃತಿ ಕಾರ್ಯಕ್ರಮದಲ್ಲಿ ಬರೋಬ್ಬರಿ 5.16 ಕೋಟಿ ಜನರು ಸುಮಾರು 18 ಸಾವಿರದ 34 ಕಿ.ಮೀ ಮಾನವ ಸರಪಳಿ ನಿರ್ಮಿಸಿ ಲಿಮ್ಕಾ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಸುಮಾರು 57.76 ಲಕ್ಷ ವಿದ್ಯಾರ್ಥಿಗಳು, 43,445 ಕೈದಿಗಳು ಸೇರಿ ರಾಜ್ಯಾದ್ಯಂತ ಕೋಟ್ಯಂತರ ಜನರು ಈ ಮಾನವ ಸರಪಳಿಯಲ್ಲಿ ಭಾಗಿಯಾಗಿದ್ದರು. ಬೆಳಗ್ಗೆ 11.30ರಿಂದ 12 ಗಂಟೆಯವರೆಗೆ ನಡೆದ ಈ ವಿಶ್ವದಾಖಲೆಯ ಮಾನವ ಸರಪಳಿಯು ಇಲ್ಲಿಯವರೆಗೆ ಅತಿ ಹೆಚ್ಚು ಜನರನ್ನು ಒಳಗೊಂಡ ಜನಜಾಗೃತಿಯ ಸರಪಳಿ ಎನಿಸಿಕೊಂಡಿದೆ.

2017ರಲ್ಲಿ 3.5 ಕೋಟಿ ಜನರು 11,292 ಕಿ.ಮೀ ಹಾಗೂ 2018ರಲ್ಲಿ ಸುಮಾರು 4 ಕೋಟಿ ಜನರು, 14 ಸಾವಿರ ಕಿ.ಮೀ ಮಾನವ ಸರಪಳಿ ನಿರ್ಮಿಸಿದ್ದರು. ಈ ಬಾರಿಯ ಸರಪಳಿಯು ಹಿಂದಿನ ದಾಖಲೆಗಳನ್ನು ಮುರಿದಿದ್ದು, ಖುದ್ದು ಮುಖ್ಯಂಮಂತ್ರಿ ನಿತೀಶ್ ಕುಮಾರ್ , ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಭಾಗಿಯಾಗಿದ್ದರು.
ಕಾರ್ಯಕ್ರಮ ಆಯೋಜನೆಗಾಗಿ ಏಳು ಹೆಲಿಕಾಪ್ಟರ್, ನೂರಕ್ಕೂ ಅಧಿಕ ಡ್ರೋಣ್ ಗಳನ್ನು ಬಳಸಲಾಗಿತ್ತು. ರಾಜ್ಯಾದ್ಯಂತ ಅಭೂತಪೂರ್ವ ಪ್ರತಿಕ್ರಿಯೆಗೆ ಕಾರಣವಾದ ಈ ಅಭಿಯಾನದಲ್ಲಿ ಇಬ್ಬರು ಶಿಕ್ಷಕರು ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications