ಬಿಹಾರ ಪ್ರಜೆಗಳ ಮತದಲ್ಲಿ ಬದಲಾವಣೆಯ ಶಕ್ತಿ: ತೇಜಸ್ವಿ ಯಾದವ್
ಪಾಟ್ನಾ, ನವೆಂಬರ್.03: ಬಿಹಾರದಲ್ಲಿ ನಡೆಯುತ್ತಿರುವ 17 ಜಿಲ್ಲೆಗಳ 94 ವಿಧಾನಸಭಾ ಕ್ಷೇತ್ರಗಳ ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಜೆಗಳು ಭಾಗವಹಿಸುವ ಬಗ್ಗೆ ಮಹಾಘಟಬಂಧನ್ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಾಟ್ನಾದ 160ನೇ ಮತಗಟ್ಟೆಗೆ ತೆರಳಿದ ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ತಮ್ಮ ಹಕ್ಕು ಚಲಾಯಿಸಿದರು. ಈ ವೇಳೆ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ತೇಜಸ್ವಿ ಯಾದವ್ ಅವರ ತಾಯಿ ರಾಬ್ರಿ ದೇವಿ ಸಹ ಜೊತೆಗಿದ್ದರು.
ಬಿಹಾರದಲ್ಲಿ ಬದಲಾವಣೆ ಬಯಸುತ್ತಿರುವ ಮತದಾರರು ಈ ನಿಟ್ಟಿನಲ್ಲಿ ತಮ್ಮ ಮತದಾನದ ಮೂಲಕ ಬದಲಾವಣೆ ತರುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಬಾರಿ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಲಿದ್ದಾರೆ ಎಂದು ಹೇಳಿದರು.

ಎರಡನೇ ಹಂತದಲ್ಲಿ 94 ಕ್ಷೇತ್ರಗಳಿಗೆ ಮತದಾನ:
ಎರಡನೇ ಹಂತದಲ್ಲಿ 17 ಜಿಲ್ಲೆಗಳ 94 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 2.85 ಕೋಟಿ ಜನ ಮತದಾರರು ಈ ಬಾರಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಬಿಹಾರ ಎರಡನೇ ಹಂತದ ಚುನಾವಣೆಯ ಕಣದಲ್ಲಿ 1463 ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆಯುತ್ತಿದೆ. ಈ ಪೈಕಿ 1316 ಪುರುಷ ಅಭ್ಯರ್ಥಿಗಳಾಗಿದ್ದರೆ, 146 ಮಹಿಳಾ ಅಭ್ಯರ್ಥಿಗಳಾಗಿದ್ದು, ಒಬ್ಬ ತೃತೀಯ ಲಿಂಗಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
2ನೇ ಹಂತದಲ್ಲಿ ಒಟ್ಟು 2,85,50,285 ಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, 1,50,33,034 ಪುರುಷರು ಮತ್ತು 1,35,16,271 ಮಹಿಳಾ ಮತದಾರರು ಹಾಗೂ 980 ತೃತೀಯ ಲಿಂಗದ ಮತದಾರರು ಮತದಾನ ಮಾಡಲಿದ್ದಾರೆ. ಮೂರನೇ ಹಂತದಲ್ಲಿ 15 ಜಿಲ್ಲೆಗಳ 78 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ನವೆಂಬರ್.10ರಂದು ಎಲ್ಲ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶವು ಹೊರ ಬೀಳಲಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications