ಮೈತ್ರಿಯಲ್ಲಿ ಒಡಕು: ಬಿಹಾರ ಸಿಎಂ ನಿತೀಶ್ ಕುಮಾರ್ ಇಂದ ಬಿಜೆಪಿ ದೂರ
ಪಾಟ್ನಾ, ಅಕ್ಟೋಬರ್ 08: ಬಿಹಾರದ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಬಹಿರಂಗವಾಗಿಯೇ ಬಿಜೆಪಿಯು ಸಿಎಂ ನಿತೀಶ್ ಕುಮಾರ್ ಮತ್ತು ಜೆಡಿಯುನಿಂದ ಅಂತರ ಕಾಯ್ದುಕೊಂಡಿದೆ.
ಇಂದು ನಡೆದ ದಸರಾ ಕಾರ್ಯಕ್ರಮದಲ್ಲಿ ಸಿಎಂ ನಿತೀಶ್ ಕುಮಾರ್ ಸೇರಿದಂತೆ ಜೆಡಿಯು ಪಕ್ಷದ ಪ್ರಮುಖರು ಭಾಗವಹಿಸಿದ್ದರು. ಆದರೆ ಉಪಮುಖ್ಯಮಂತ್ರಿ ಬಿಜೆಪಿಯ ಸುಶೀಲ್ ಮೋದಿ ಅವರು ಸಮಾರಂಭಕ್ಕೆ ಗೈರಾಗಿದ್ದರು.
ಸುಶೀಲ್ ಮೋದಿ ಮಾತ್ರವೇ ಅಲ್ಲದೆ, ಸ್ಥಳೀಯ ಬಿಜೆಪಿ ಶಾಸಕ, ಸಂಸದರೂ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಬಿಜೆಪಿಯ ಸ್ಥಳೀಯ ಮುಖಂಡರು, ಕಾರ್ಯಕರ್ತರೂ ಸಹ ಕಾರ್ಯಕ್ರಮದಲ್ಲಿ ಹಾಜರಿರಲಿಲ್ಲ, ಈ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದಲೇ ಆಯೋಜಿಸಲಾಗಿತ್ತು.

ಬಿಜೆಪಿ-ಜೆಡಿಯು ಒಟ್ಟಿಗೆ ಸರ್ಕಾರ ರಚಿಸಿತ್ತು
ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಒಟ್ಟಿಗೆ ಸರ್ಕಾರ ರಚಿಸಿದ್ದು, ನಿತೀಶ್ ಕುಮಾರ್ ಸಿಎಂ ಆಗಿ ಹಾಗೂ ಬಿಜೆಪಿಯ ಸುಶೀಲ್ ಮೋದಿ ಡಿಸಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲೋಕಸಭೆ ಚುನಾವಣೆ ಸಮಯದಲ್ಲಿ ತಿದ್ದ ಕಲಹವು ಈಗ ಬಹಿರಂಗವಾಗಿದ್ದು, ಮೈತ್ರಿ ಪಕ್ಷಗಳಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಖಾತ್ರಿಯಾಗಿದೆ.

ಲಾಲೂ ಜೊತೆ ಚುನಾವಣೆ ಎದುರಿಸಿದ್ದ ನಿತೀಶ್ ಕುಮಾರ್
ಬಿಹಾರದಲ್ಲಿ 2015 ರಲ್ಲಿ ವಿಧಾನಸಭೆ ಚುನಾವಣೆ ಆದಾಗ ಲಾಲೂಪ್ರಸಾದ್ ಯಾದವ್ ಅವರ ಆರ್ಜೆಡಿ, ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಕಾಂಗ್ರೆಸ್ ಪಕ್ಷ ಒಟ್ಟಾಗಿ ಚುನಾವಣೆ ಎದುರಿಸಿ ಅಧಿಕಾರಕ್ಕೆ ಬಂದು ಕೆಲ ಕಾಲ ಸರ್ಕಾರವನ್ನೂ ನಡೆಸಲಾಯಿತು. ಆದರೆ ನಂತರ ನಡೆದ ಬೆಳವಣಿಗೆಯಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಬಿಜೆಪಿ ಜೊತೆ ಕೈಜೋಡಿಸಿ ಅಧಿಕಾರ ಹಿಡಿದರು. ಈಗ ಮತ್ತೆ ಜೆಡಿಯು-ಬಿಜೆಪಿ ನಡುವೆ ಮೈತ್ರಿಯಲ್ಲಿ ಅಸಮಾಧಾನ ತಲೆದೂರಿದೆ.

ಲೋಕಸಭೆ ಚುನಾವಣೆಯಲ್ಲಿ ಜೆಡಿಯು-ಬಿಜೆಪಿ ಮೈತ್ರಿ
ಕೆಲವು ತಿಂಗಳ ಹಿಂದೆ ನಡೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಯು-ಬಿಜೆಪಿ ಮೈತ್ರಿ ಮಾಡಿಕೊಂಡು ಬಿಹಾರದಲ್ಲಿ ಚುನಾವಣೆ ಎದುರಿಸಿ 40 ರಲ್ಲಿ 39 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಆದರೆ ಈಗ ಈ ಎರಡೂ ಪಕ್ಷಗಳಲ್ಲಿ ಅಸಮಾಧಾನ ತಲೆದೂರಿದ್ದು, ಮುಂದಿನ ವರ್ಷ ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಪರಸ್ಪರ ಟೀಕಾಪ್ರಹಾರ ಮೇರೆ ಮೀರಿದೆ
ಬಿಜೆಪಿ ಮತ್ತು ಜೆಡಿಯು ನಾಯಕರ ಮಧ್ಯೆ ಪರಸ್ಪರ ಟೀಕಾಪ್ರಹಾರ ಮುಗಿಲುಮುಟ್ಟಿದೆ. ಇಂದಿನ ಕಾರ್ಯಕ್ರಮದಲ್ಲಿ ಬಿಜೆಪಿಯು ದೂರ ಉಳಿಯುತ್ತಿರುವುದನ್ನು ಜೆಡಿಯು ಮುಖಂಡರು ಪ್ರಶ್ನೆ ಮಾಡಿದ್ದು, ಜೆಡಿಯು ಮುಖಂಡ ಅಲೋಕ್ ಕುಮಾರ್ ಟ್ವೀಟ್ ಮಾಡಿ, 'ರಾವಣ ವಧೆ ಕಾರ್ಯಕ್ರಮಕ್ಕೆ ಏಕೆ ಬಂದಿಲ್ಲ, ನಿಮಗೆ ರಾವಣನನ್ನು ಸೆದೆಬಡಿಯುವ ಆಸೆ ಇಲ್ಲವೇ?' ಎಂದು ಪ್ರಶ್ನೆ ಮಾಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications