ಮಹಾಘಟಬಂಧನಕ್ಕೆ ವಾಪಸ್ ಬನ್ನಿ: ನಿತೀಶ್ಗೆ ರಾಬ್ರಿ ದೇವಿ ಆಹ್ವಾನ
ಪಟ್ನಾ, ಜೂನ್ 4: ಲೋಕಸಭೆ ಚುನಾವಣೆಯ ಬೆನ್ನಲ್ಲೇ ಬಿಜೆಪಿ ಜತೆ ಮುನಿಸಿಕೊಂಡಿರುವ ಬಿಹಾರ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್ ಕುಮಾರ್ ಅವರಿಗೆ ಮಹಾಘಟಬಂಧನಕ್ಕೆ ಮರಳಿ ಸೇರ್ಪಡೆಯಾಗುವಂತೆ ಆರ್ಜೆಡಿ ನಾಯಕಿ ರಾಬ್ರಿ ದೇವಿ ಆಹ್ವಾನ ನೀಡಿದ್ದಾರೆ.
ಮಹಾ ಮೈತ್ರಿಕೂಟಕ್ಕೆ ವಾಪಸ್ ಬರುವಂತೆ ಆರ್ಜೆಡಿ ನಾಯಕರೊಬ್ಬರು ನಿತೀಶ್ ಕುಮಾರ್ ಅವರಿಗೆ ಸಲಹೆ ನೀಡಿದ್ದರು. ಅದಕ್ಕೆ ಪೂರಕವಾಗಿ ಮಾತನಾಡಿರುವ ರಾಬ್ರಿ ದೇವಿ, ಒಂದು ವೇಳೆ ನಿತೀಶ್ ಮಹಾ ಮೈತ್ರಿಕೂಟಕ್ಕೆ ವಾಪಸ್ ಬಂದರೆ ತಮ್ಮ ಅಭ್ಯಂತರವೇನೂ ಇಲ್ಲ ಎಂದಿದ್ದಾರೆ.
ಆದರೆ, ಈ ಸಂಬಂಧ ಯಾವುದೇ ನಿರ್ಧಾರವನ್ನು ಆರ್ಜೆಡಿ ಪಕ್ಷದ ಹಿರಿಯ ಮುಖಂಡರು ತೆಗೆದುಕೊಳ್ಳುತ್ತಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ವಿರುದ್ಧ ಹೋರಾಡಲು ನಿತೀಶ್ ಕುಮಾರ್ ಅವರು ಬಿಜೆಪಿಯೇತರ ಪಕ್ಷಗಳೊಂದಿಗೆ ಕೈಜೋಡಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ರಘುವಂಶ್ ಪ್ರಸಾದ್ ಸಿಂಗ್ ಹೇಳಿಕೆ ನೀಡಿದ್ದರು.
ಲೋಕಸಭೆ ಚುನಾವಣೆಯ ಬಳಿಕ ಸರ್ಕಾರ ರಚಿಸಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದಿಂದ ಜೆಡಿಯುಗೆ ಕೇವಲ ಒಂದು ಸಚಿವ ಸ್ಥಾನದ ಆಫರ್ ನೀಡಲಾಗಿತ್ತು. ಇದನ್ನು ನಿತೀಶ್ ತಿರಸ್ಕರಿಸಿದ್ದರು. ಬಳಿಕ ಬಿಹಾರದಲ್ಲಿ ಸಂಪುಟ ವಿಸ್ತರಣೆ ಮಾಡಿದ್ದ ನಿತೀಶ್, ಎಂಟು ಆರ್ಜೆಡಿ ಶಾಸಕರಿಗೆ ಸಚಿವ ಸ್ಥಾನ ನೀಡಿದ್ದರೆ, ಬಿಜೆಪಿಗೆ ಕೇವಲ ಒಂದು ಸ್ಥಾನ ನೀಡಿದ್ದರು. ಇದು ಎರಡೂ ಪಕ್ಷಗಳ ಮೈತ್ರಿಯಲ್ಲಿ ಒಡಕು ಮೂಡಿಸಲಿದೆ ಎಂದು ಹೇಳಲಾಗುತ್ತಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications