Get Updates
Get notified of breaking news, exclusive insights, and must-see stories!

ಬಿಹಾರ ಶಿಕ್ಷಕರ ಪ್ರತಿಭಟನೆ: ಆಕಾಂಕ್ಷಿಗೆ ಥಳಿಸಿದ ಎಡಿಎಂ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ

ಪಾಟ್ನಾ ಸೆಪ್ಟೆಂಬರ್ 3: ಕಳೆದ ತಿಂಗಳು ಪ್ರತಿಭಟನೆಯ ವೇಳೆ ಶಿಕ್ಷಕ ಉದ್ಯೋಗ ಆಕಾಂಕ್ಷಿಯೊಬ್ಬರಿಗೆ ಥಳಿಸಿದ ಆರೋಪದ ಮೇಲೆ ಪಾಟ್ನಾ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ಕೆಕೆ ಸಿಂಗ್ ವಿರುದ್ಧ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.

ಪಾಟ್ನಾ ಡಿಡಿಸಿ ಮತ್ತು ಸಿಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (ಎಸ್‌ಪಿ) ಅವರು ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಡಾ ಚಂದ್ರಶೇಖರ್ ಸಿಂಗ್ ಅವರಿಗೆ ಜಂಟಿ ವರದಿಯನ್ನು ಸಲ್ಲಿಸಿದ್ದಾರೆ, ಅವರು ಈಗ ವರದಿಯನ್ನು ಬಿಹಾರ ಸರ್ಕಾರದ ಸಾಮಾನ್ಯ ಆಡಳಿತ ಇಲಾಖೆಗೆ (ಜಿಎಡಿ) ರವಾನಿಸಿದ್ದಾರೆ.

ಆಗಸ್ಟ್ 22 ರಂದು, ಉದ್ಯೋಗಕ್ಕಾಗಿ ಒತ್ತಾಯಿಸಿ ಪಾಟ್ನಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಮತ್ತು ಬಿಹಾರ ಶಿಕ್ಷಕರ ಅರ್ಹತಾ ಪರೀಕ್ಷೆ (BTET) ಅರ್ಹ ಅಭ್ಯರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಈ ಮಧ್ಯೆ, ಎಡಿಎಂ ಕೆಕೆ ಸಿಂಗ್ ಅವರು ಪ್ರತಿಭಟನಾಕಾರ ಮತ್ತು ಮಹತ್ವಾಕಾಂಕ್ಷಿ ಶಿಕ್ಷಕ ಅನಿಸುರ್ ರೆಹಮಾನ್ ಅವರನ್ನು ಲಾಠಿಯಿಂದ ಅಮಾನುಷವಾಗಿ ಥಳಿಸಿದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಪ್ರತಿಭಟನಾಕಾರನ ಮೇಲೆ ಹಲ್ಲೆಯ ತನಿಖೆ

ಪ್ರತಿಭಟನಾಕಾರನ ಮೇಲೆ ಹಲ್ಲೆಯ ತನಿಖೆ

ಈ ವಿಡಿಯೋ ವೈರಲ್ ಆಗಿದ್ದು, ಎಡಿಎಂ ವಿರುದ್ಧ ಕ್ರಮಕ್ಕೆ ಕೂಗು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಈ ಬಗ್ಗೆ ತನಿಖೆ ನಡೆಸುವಂತೆ ಪಾಟ್ನಾ ಡಿಎಂ ಡಾ.ಚಂದ್ರಶೇಖರ್ ಸಿಂಗ್ ಅವರಿಗೆ ಸೂಚಿಸಿದ್ದರು.

ಈ ಕುರಿತು ತನಿಖೆ ನಡೆಸಿ ಎರಡು ದಿನಗಳಲ್ಲಿ ವರದಿ ಸಲ್ಲಿಸಲು ಪಾಟ್ನಾ ಡಿಎಂ ಡಿಡಿಸಿ ಮತ್ತು ಸಿಟಿ ಎಸ್ಪಿ ಜಂಟಿ ತಂಡವನ್ನು ರಚಿಸಿದ್ದರು. ಎರಡು ದಿನಗಳ ನಂತರ ತನಿಖೆಯು ಅನಿರ್ದಿಷ್ಟವಾಗಿ ಉಳಿದಾಗ, ತನಿಖಾ ತಂಡವು ತನ್ನ ತನಿಖೆಯನ್ನು ಪೂರ್ಣಗೊಳಿಸಲು ಇನ್ನೂ ಐದು ದಿನಗಳನ್ನು ಕೋರಿತು.

ಶುಕ್ರವಾರ (ಸೆಪ್ಟೆಂಬರ್ 2) ಡಿಎಂಗೆ ವರದಿ ಸಲ್ಲಿಸಲಾಗಿದ್ದು, ಮುಂದಿನ ಕ್ರಮಕ್ಕಾಗಿ ಜಿಎಡಿಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಆದಾಗ್ಯೂ, ತನಿಖಾ ವರದಿಯಲ್ಲಿ ಎಡಿಎಂ ತಪ್ಪಿತಸ್ಥರೆಂದು ಕಂಡುಬಂದಿದೆಯೇ ಮತ್ತು ರಾಜ್ಯ ಸರ್ಕಾರವು ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ.

ರಾಷ್ಟ್ರಧ್ವಜ ಹಿಡಿದ ಪ್ರತಿಭಟನಾಕರನ ಮೇಲೆ ಲಾಠಪ್ರಯೋಗ

ರಾಷ್ಟ್ರಧ್ವಜ ಹಿಡಿದ ಪ್ರತಿಭಟನಾಕರನ ಮೇಲೆ ಲಾಠಪ್ರಯೋಗ

ಆಗಸ್ಟ್ 23ರಂದು ಶಿಕ್ಷಕರ ನೇಮಕಾತಿ ವಿಳಂಬವನ್ನು ವಿರೋಧಿಸಿ ನೂರಾರು ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೋಲಿಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಪ್ರತಿಭಟನೆ ವೇಳೆ ಪ್ರತಿಭಟನಾಕಾರನೊಬ್ಬ ನೆಲದ ಮೇಲೆ ಮಲಗಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟಿಸುತ್ತಿದ್ದಾಗ ಅಧಿಕಾರಿಗಳು ಆತನನ್ನು ಥಳಿಸುತ್ತಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


ಪಾಟ್ನಾದ ದಕ್ ಬಾಂಗ್ಲಾ ಚೌರಾದಲ್ಲಿ ಪ್ರತಿಭಟನೆ ನಡೆದಿದ್ದು ವೀಡಿಯೊದಲ್ಲಿ, ಪಾಟ್ನಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೆ.ಕೆ ಸಿಂಗ್, ನೆಲದ ಮೇಲೆ ಮಲಗಿ ಕೈಯಲ್ಲಿ ರಾಷ್ಟ್ರಧ್ವಜವನ್ನು ಹಿಡಿದಿದ್ದ ವ್ಯಕ್ತಿಯನ್ನು ಥಳಿಸಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಬಳಿಕ ಧ್ವಜವನ್ನು ವ್ಯಕ್ತಿಯ ಕೈಯಿಂದ ಪೊಲೀಸರು ಕಿತ್ತುಕೊಂಡಿದ್ದರು.

ಪ್ರತಿಭಟನಾಕಾರರನ್ನು ಚದುರಿಸಲು ಜಲಫಿರಂಗಿ ಬಳಕೆ

ಸಿಟಿಇಟಿ, ಬಿಟಿಇಟಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರಾಥಮಿಕ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆಗಳನ್ನು ನಿಯೋಜಿಸಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಜಲಫಿರಂಗಿಗಳನ್ನು ಬಳಸಲಾಯಿತು.

ನಾವು ನೇಮಕಾತಿಗಾಗಿ 2019ರಿಂದ ಕಾಯುತ್ತಿದ್ದೇವೆ. ಕಳೆದ 3 ವರ್ಷಗಳಿಂದ ಸರ್ಕಾರ ಕೇವಲ ಭರವಸೆಯನ್ನು ಮಾತ್ರ ನೀಡುತ್ತಿದೆ. ಸರ್ಕಾರ ರಚನೆಗೂ ಮುನ್ನ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮೊದಲ ಸಂಪುಟದಲ್ಲಿಯೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದರು. ಆದರೆ ಇಲ್ಲಿಯವರೆಗೂ ಏನೂ ಆಗಿಲ್ಲ ಎಂದು ಪ್ರತಿಭಟನಾಕಾರರು ಕಿಡಿ ಕಾರಿದ್ದಾರೆ.

ನಿತೀಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆ

ನಿತೀಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆ

ರಾಜ್ಯದಲ್ಲಿ 20 ಲಕ್ಷ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆ ಮಾಡಿದ್ದ ಶಿಕ್ಷಕ ಅಭ್ಯರ್ಥಿಯನ್ನು ಅಮಾನವೀಯವಾಗಿ ಥಳಿಸಲಾಗಿದೆ. ಬಿಹಾರ ಸರ್ಕಾರ ಹಾಗೂ ಅಧಿಕಾರಿಗಳು ಆತನ ಮುಖದಲ್ಲಿ ರಕ್ತ ಬರುವಂತೆ ಮಾಡಿದ್ದಲ್ಲದೇ ತ್ರಿವರ್ಣ ಧ್ವಜಕ್ಕೂ ಅವಮಾನ ಮಾಡಿದ್ದರು. ಇದು ಜೆಡಿಯು-ಆರ್‌ಜೆಡಿ ಸರ್ಕಾರದ ಅಸಲಿ ಮುಖ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದರು.

ಪ್ರತಿಭಟನೆಯನ್ನು ನಿಯಂತ್ರಣಕ್ಕೆ ತರಲು ಲಾಠಿಚಾರ್ಜ್ ಮಾಡಲಾಗಿತ್ತು. ಈ ವೇಳೆ ಎಸ್‌ಟಿಇಟಿ ಅಭ್ಯರ್ಥಿಯನ್ನು ಎಡಿಎಂ ಥಳಿಸಿರುವುದು ತಿಳಿದುಬಂದಿದೆ. ಈ ಘಟನೆ ಬಗ್ಗೆ ತನಿಖಾ ಸಮಿತಿಯನ್ನು ರಚಿಸಲಾಗಿತ್ತು. ಅವರು ತಪ್ಪಿತಸ್ಥರು ಎಂಬುದು ಕಂಡುಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+