ಬಿಜೆಪಿ ದೊಡ್ಡ ಶತ್ರು, ನಾನು ಕೇಂದ್ರಕ್ಕೆ ತಲೆ ಬಾಗುವುದಿಲ್ಲ: ಲಾಲು ಪ್ರಸಾದ್ ಯಾದವ್
ಪಾಟ್ನಾ, ಸೆ.22: ಭಾರತೀಯ ಜನತಾ ಪಕ್ಷ ತನ್ನ ದೊಡ್ಡ ಶತ್ರುವಾಗಿದ್ದು, ಕೇಂದ್ರದ ಆಡಳಿತಾರೂಢ ಪಕ್ಷಕ್ಕೆ ನಾನು ಬಗ್ಗುವುದಿಲ್ಲ ಎಂದು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.
ಪಾಟ್ನಾದಲ್ಲಿ ನಡೆದ ಆರ್ಜೆಡಿ ರಾಜ್ಯ ಕೌನ್ಸಿಲ್ ಸಭೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, "ನಾನು ನನ್ನ ಸಿದ್ಧಾಂತದ ಜೊತೆಗೆ ದೃಢವಾಗಿ ನಿಲ್ಲುತ್ತೇನೆ. ಹಲವು ಪಕ್ಷಗಳು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಮಂಡಿಯೂರಿ ಬಿದ್ದಿವೆ. ಆದರೆ ನಾನು ತಲೆಬಾಗುವುದಿಲ್ಲ ಅಥವಾ ನಾನು ಎಂದಿಗೂ ಬಗ್ಗುವುದಿಲ್ಲ. ಬಿಜೆಪಿ ನಮ್ಮ ದೊಡ್ಡ ಶತ್ರುವಾಗಿದೆ. ನಾನು ತಲೆಬಾಗಿದ್ದರೆ ಇಷ್ಟು ದಿನ ಜೈಲಿನಲ್ಲಿ ಇರುತ್ತಿರಲಿಲ್ಲ" ಎಂದು ಹೇಳಿದ್ದಾರೆ.
ಬಿಹಾರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆದ ಕೂಡಲೇ ಬಿಜೆಪಿ ಜಂಗಲ್ ರಾಜ್ ಎಂಬ ಘೋಷಣೆಯನ್ನು ಆರಂಭಿಸಿತು ಎಂದು ಲಾಲು ಪ್ರಸಾದ್ ಯಾದವ್ ಹೇಳಿದರು.

"ಎಲ್ಲರೂ ಎಚ್ಚೆತ್ತುಕೊಳ್ಳಬೇಕು, 2024 ರಲ್ಲಿ ಬಿಜೆಪಿಯನ್ನು ಬೇರು ಸಮೇತ ಕಿತ್ತೊಗೆಯಬೇಕು. ಶೀಘ್ರದಲ್ಲೇ ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುತ್ತೇನೆ, ರಾಹುಲ್ ಗಾಂಧಿಯನ್ನೂ ಭೇಟಿ ಮಾಡುತ್ತೇನೆ' ಎಂದು ಆರ್ಜೆಡಿ ವರಿಷ್ಠರು ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮುಂಬರುವ ಸೀಮಾಂಚಲ್ ಭೇಟಿಯ ಕುರಿತು ಮಾತನಾಡಿದ ಯಾದವ್, ಬಿಜೆಪಿ ಮನಸ್ಸಿನಲ್ಲಿ ಕೆಲವು ಕೆಟ್ಟ ಉದ್ದೇಶವನ್ನು ಹೊಂದಿರಬೇಕು. ರಾಜಕೀಯ ಲಾಭ ಪಡೆಯಲು ಬಿಜೆಪಿ ಜನರನ್ನು ಒಡೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಅಮಿತ್ ಶಾ ಸೆಪ್ಟೆಂಬರ್ 23 ಮತ್ತು 24 ರಂದು ಬಿಹಾರಕ್ಕೆ ಎರಡು ದಿನಗಳು ಪ್ರವಾಸ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಜಯ್ ಜೈಸ್ವಾಲ್ ಶನಿವಾರ ಹೇಳಿದ್ದಾರೆ. ಈ ವೇಳೆ ಬಿಜೆಪಿಯ ಉನ್ನತ ನಾಯಕರು ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.

ಸೆಪ್ಟೆಂಬರ್ 24 ರಂದು ಅರಾರಿಯಾ, ಕಿಶನ್ಗಂಜ್, ಪೂರ್ಣಿಯಾ ಮತ್ತು ಕತಿಹಾರ್ನ ಪದಾಧಿಕಾರಿಗಳನ್ನು ಅಮಿತ್ ಶಾ ಭೇಟಿ ಮಾಡಲಿದ್ದಾರೆ ಎಂದು ಜೈಸ್ವಾಲ್ ಹೇಳಿದ್ದಾರೆ.
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಳೆದ ತಿಂಗಳು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಯಿಂದ ಬೇರ್ಪಟ್ಟು. ಆರ್ಜೆಡಿಯೊಂದಿಗೆ ಮತ್ತೆ ಕೈಜೋಡಿಸಿ ಮಹಾಘಟಬಂಧನ್ ಸರ್ಕಾರವನ್ನು ರಚಿಸಿದ್ದಾರೆ.
2020 ರಲ್ಲಿ ಬಿಹಾರದಲ್ಲಿ ಬಿಜೆಪಿ-ಜೆಡಿಯು ಪರಸ್ಪರ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಗೆದ್ದಾಗ ಮತ್ತು ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಗೆದ್ದರೂ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications