ಚಿರಾಗ್ ವಿರುದ್ಧ ಕ್ರಮದ ಬಗ್ಗೆ ಬಿಜೆಪಿ ನಿರ್ಧರಿಸಲಿ: ನಿತೀಶ್ ಕುಮಾರ್
ಪಟ್ನಾ, ನವೆಂಬರ್ 11: ತಾವು ಮುಖ್ಯಮಂತ್ರಿಯಾಗುವುದಾಗಿ ಎಲ್ಲಿಯೂ ಹೇಳಿಲ್ಲ. ಅದು ಎನ್ಡಿಎ ಮೈತ್ರಿಕೂಟದ ನಿರ್ಧಾರ ಎಂದು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಹೇಳಿದ್ದಾರೆ.
ಮಾಧ್ಯಮದೊಂದಿಗಿನ ಸಂವಾದದಲ್ಲಿ ಮಾತನಾಡಿದ ಅವರು, ಚಿರಾಗ್ ಪಾಸ್ವಾನ್ ಅವರ ಲೋಕಜನಶಕ್ತಿ ಪಕ್ಷವು (ಎಲ್ಜೆಪಿ) ಅನೇಕ ಕ್ಷೇತ್ರಗಳಲ್ಲಿ ಜೆಡಿಯುದ ಮುನ್ನಡೆಗೆ ಹಾನಿ ಮಾಡಿದೆ ಎಂದು ಒಪ್ಪಿಕೊಂಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿಯ ಮಿತ್ರಪಕ್ಷವಾಗಿರುವ ಎಲ್ಜೆಪಿ ವಿರುದ್ಧದ ಎಲ್ಲ ಸಂಬಂಧಗಳನ್ನು ಬಿಜೆಪಿ ಕಡಿದುಕೊಳ್ಳುವಂತೆ ಒತ್ತಾಯಿಸುತ್ತೀರಾ ಎಂಬ ಪ್ರಶ್ನೆಗೆ, ಅದು ಬಿಜೆಪಿಗೆ ಬಿಟ್ಟ ನಿರ್ಧಾರವಾಗಿದೆ ಎಂದಿದ್ದಾರೆ.
ಚುನಾವಣೆಯಲ್ಲಿ ಮತಗಳಿಕೆ ಹಾಗೂ ಕ್ಷೇತ್ರಗಳನ್ನು ಗೆಲುವುದರಲ್ಲಿ ಜೆಡಿಯು ಸಾಧನೆ ಕುಸಿದಿದೆ. ಇದರಲ್ಲಿ ಎಲ್ಜೆಪಿ ನಿತೀಶ್ ಕುಮಾರ್ ಹಾಗೂ ಜೆಡಿಯು ವಿರುದ್ಧ ಸತತ ಪ್ರಚಾರ ಮತ್ತು ಆರೋಪಗಳನ್ನು ಮಾಡಿದ್ದೇ ಕಾರಣ ಎಂದು ಆರೋಪಿಸಲಾಗಿದೆ.

ಎಲ್ಜೆಪಿ ವಿರುದ್ಧ ಯಾವುದಾದರೂ ಕ್ರಮ ತೆಗೆದುಕೊಳ್ಳುವುದಿದ್ದರೆ ಬಿಜೆಪಿ ಅದನ್ನು ತೆಗೆದುಕೊಳ್ಳಬೇಕು. ಎನ್ಡಿಎದಲ್ಲಿ ಎಲ್ಜೆಪಿಯನ್ನು ಮತ್ತೆ ಸೇರಿಸಿಕೊಳ್ಳಬೇಕೋ ಬೇಡವೋ ಎನ್ನುವುದನ್ನು ಬಿಜೆಪಿಯೇ ನಿರ್ಧರಿಸಬೇಕು ಎಂದು ನಿತೀಶ್ ಹೇಳಿದರು.
'ನಾವು ಇಡೀ ಎನ್ಡಿಎಗಾಗಿ ಪ್ರಚಾರ ಮಾಡಿದ್ದು ಸತ್ಯ. ಆದರೆ ಕೆಲವು ಪಕ್ಷಗಳು ತಮ್ಮ ಬಳಿ ಅಭ್ಯರ್ಥಿಗಳನ್ನು ಹೊಂದಿರದೆ ಇದ್ದರೂ ನಮ್ಮ ಮತಗಳನ್ನು ಕಡಿತ ಮಾಡಲು ಜನರನ್ನು ಹುಡುಕಿದ್ದವು. ಈ ಪ್ರಯತ್ನಗಳು ಕಣ್ಣಿಗೆ ಕಾಣುವಂತಿದ್ದವು. ಮಾಧ್ಯಮಗಳೂ ಅದರ ಬಗ್ಗೆ ವರದಿ ಮಾಡುತ್ತಿದ್ದವು. ನಮ್ಮ ವಿಶ್ಲೇಷಣೆ ಕೂಡ ನಡೆಯುತ್ತಿದೆ' ಎಂದು ನಿತೀಶ್ ತಿಳಿಸಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications