ನಿತೀಶ್ ಜೊತೆ ಕೈಜೋಡಿಸದಂತೆ ಇತರೆ ಪಕ್ಷಗಳ ಮೇಲೆ ಬಿಜೆಪಿ ಒತ್ತಡ ಹಾಕಲು ಯತ್ನಿಸಿತ್ತು: ಜೆಡಿಯು ಆರೋಪ
ಪಟ್ನಾ, ಆಗಸ್ಟ್ 11: ತರಾತುರಿಯಲ್ಲಿ ಬಿಜೆಪಿ ಜೊತೆ ಸಂಬಂಧ ಕಡಿದುಕೊಂಡು ನಿತೀಶ್ ಕುಮಾರ್ ರಾಷ್ಟ್ರೀಯ ಜನತಾದಳ, ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚನೆ ಮಾಡತ್ತಿದ್ದಾರೆ. 8ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿಯವರೆಗು ಮಿತ್ರರಾಗಿದ್ದ ಬಿಜೆಪಿ-ಜೆಡಿಯು ಈಗ ಪರಮ ವೈರಿಗಳಂತೆ ಒಬ್ಬರ ಮೇಲೊಬ್ಬರು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.
ಬಿಜೆಪಿ ನಮ್ಮನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ, ಬಿಜೆಪಿ ಜನರನ್ನು ಹೇಗೆ ನಡೆಸಿಕೊಳ್ಳತ್ತದೆ ಎಂಬುದು ನಿಮ್ಮ ಮುಂದಿದೆ ಎಂದು ನಿತೀಶ್ ಕುಮಾರ್ ಹೇಳಿದ್ದರು.
ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿಯ ಕೇಂದ್ರ ಸಚಿವ ಗಿರಿರಾಜ್ ಸಿಂಗ್, "ನಾವು ಎಲ್ಲಾ ಸಮ್ಮಿಶ್ರ ಧರ್ಮವನ್ನು ಅನುಸರಿಸಿದ್ದೇವೆ, ಅದಕ್ಕೆ ದ್ರೋಹ ಬಗೆದವರು ನಿತೀಶ್ ಕುಮಾರ್" ಎಂದು ಕಿಡಿ ಕಾರಿದ್ದಾರೆ.

ನಿತೀಶ್ ಕುಮಾರ್ ಹೊಸ ಮೈತ್ರಿಯನ್ನು ರಚಿಸುವುದನ್ನು ತಡೆಯಲು ಹತಾಶರಾಗಿರುವ ಬಿಜೆಪಿ, ಇತರ ಪಕ್ಷಗಳು ನಿತೀಶ್ ಕುಮಾರ್ ಅವರ ಜೊತೆ ಒಪ್ಪಂದಕ್ಕೆ ಸಹಿಹಾಕದಂತೆ ಮಾಡಲು ಪ್ರಯತ್ನಿಸಿದೆ ಎಂದು ಸಂಯುಕ್ತ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷ ಲಾಲನ್ ಸಿಂಗ್ ಆರೋಪಿಸಿದ್ದಾರೆ.
"ಬಿಜೆಪಿ ಮುಖಂಡರು ಆರ್ಜೆಡಿ ನಾಯಕರಿಗೆ ಕರೆ ಮಾಡಿ, ಮೂರು-ನಾಲ್ಕು ದಿನಗಳು ಕಾಯಿರಿ ಆಮೇಲೆ ನೀವು ನಿತೀಶ್ ಕುಮಾರ್ ಅವರ ಜೊತೆ ಹೋಗಬಹುದು ಎಂದು ಹೇಳಿದ್ದಾರೆ. ಆದರೆ ಬಿಜೆಪಿಯವರಿಗೆ ಇನ್ನು ಮುಂದೆ ಏಜೆಂಟ್ ಇಲ್ಲ. ಅವರಿಗೆ ಒಬ್ಬ ಏಜೆಂಟ್ ಮಾತ್ರ ಇದ್ದರು ಮತ್ತು ನಿತೀಶ್ ಕುಮಾರ್ ಅವರನ್ನು ತೆಗೆದುಹಾಕಿದ್ದಾರೆ" ಎಂದು ಆರ್ ಸಿಪಿ ಸಿಂಗ್ ರಾಜೀನಾಮೆ ನೀಡಿರುವುದನ್ನು ಉಲ್ಲೇಖಿಸಿ ಲಾಲನ್ ಸಿಂಗ್ ಹೇಳಿದರು.
ನಿತೀಶ್ ಕುಮಾರ್ ಅವರಿಗೆ ಕರೆ ಮಾಡಿದ್ದ ಅಮಿತ್ ಶಾ
ಜುಲೈ 7ರವರೆಗೆ ಕೇಂದ್ರ ಸಚಿವ ಸಂಪುಟದಲ್ಲಿ ಜೆಡಿಯುನ ಏಕೈಕ ಪ್ರತಿನಿಧಿಯಾಗಿದ್ದ ಆರ್ಸಿಪಿ ಸಿಂಗ್ ಬಗ್ಗೆ ನಿತೀಶ್ ಕುಮಾರ್ ತೀವ್ರ ಅಸಮಾಧಾನ ಹೊಂದಿದ್ದರು. ಅಮಿತ್ ಶಾ ನಿಷ್ಠರಾಗಿದ್ದಕ್ಕೆ, ಅವರು ಜೆಡಿಯುಗೆ ರಾಜೀನಾಮೆ ನೀಡಬೇಕಾಯಿತು. ಆರ್ಸಿಪಿ ಸಿಂಗ್ ವಿರುದ್ಧ ಜೆಡಿಯು ರಾಷ್ಟ್ರಾಧ್ಯಕ್ಷ ಲಲನ್ ಸಿಂಗ್ ಭ್ರಷ್ಟಾಚಾರದ ಆರೋಪ ಹೊರಿಸಿದ್ದರು. ಅವರು ಜೆಡಿಯು ಶಾಸಕರನ್ನು ಬಿಜೆಪಿಗೆ ಪಕ್ಷಾಂತರಗೊಳ್ಳಲು ಪ್ರೇರೇಪಿಸುತ್ತಿದ್ದರು ಎಂದು ಆರೋಪ ಕೇಳಿಬಂದಿದೆ.
ನಿತೀಶ್ ಕುಮಾರ್ ಅಸಮಾಧಾನಗೊಂಡಿದ್ದಾರೆ ಎಂಬುದು ಸ್ಪಷ್ಟವಾದ ನಂತರ ಬಿಜೆಪಿಯು ಅವರನ್ನು ಸಮಾಧಾನಗೊಳಿಸಲು, ಅವರು ಅಂದುಕೊಂಡಂತೆ ಯಾವುದೇ ಪಕ್ಷಾಂತರ ಚಟುವಟಿಕೆ ನಡೆಯುತ್ತಿಲ್ಲ ಎಂದು ಸಾಬೀತುಪಡಿಸಲು ಪ್ರಯತ್ನಿಸಿದೆ.

"ಎರಡು ದಿನಗಳ ಹಿಂದಷ್ಟೇ ಅಮಿತ್ ಶಾ ಅವರು ನಿತೀಶ್ ಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿದ್ದರು. ಚಿಂತೆ ಮಾಡುವಂತದ್ದು ಏನೂ ಇಲ್ಲ ಎಂದು ಹೇಳಿದ್ದರು" ಎಂದು ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.
"ಇತರ ಪಕ್ಷಗಳು ನಾಶವಾಗುತ್ತವೆ, ಬಿಜೆಪಿ ಮಾತ್ರ ಉಳಿಯುತ್ತದೆ" ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಒಂದು ವಾರದ ಹಿಂದೆ ಹೇಳಿಕೆ ನೀಡಿದ್ದು, ನಿತೀಶ್ ಕುಮಾರ್ ಅವರನ್ನು ಕೆರಳಿಸಿತ್ತು. ಸದ್ಯ ಬಿಜೆಪಿಗೆ ಮೈತ್ರಿಗೆ ಗೌರವ ಕೊಡದ ನಿತೀಶ್ ಕುಮಾರ್ ತಂತ್ರಕ್ಕೆ ಪ್ರತಿತಂತ್ರ ಹೂಡುವುದು ಮುಖ್ಯವಾಗಿದೆ.
Recommended Video
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications