Video: ಬಿಹಾರದ ರೈತರಿಗೆ ಭತ್ತದ ಲೆಕ್ಕ ಹೇಳಿಕೊಟ್ಟ ರಾಹುಲ್ ಗಾಂಧಿ
ಪಾಟ್ನಾ, ನವೆಂಬರ್.03: ಬಿಹಾರದ ರೈತರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮತವನ್ನು ನೀಡಿಯೇ ದೊಡ್ಡ ತಪ್ಪು ಮಾಡಿದರೇ ಎಂದು ಸಂಸದ ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಟಿಹಾರ್ ನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭರ್ಜರಿ ಪ್ರಚಾರ ನಡೆಸಿದರು. ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಮತ್ತು ಬಿಹಾರ ಸರ್ಕಾರದ ವಿರುದ್ಧ ಕಿಡಿ ಕಾರಿದರು.
#WATCH: In Chhattisgarh farmers get Rs 2,500 per quintal for paddy, here you get Rs 700. What mistake did you make? You voted for Nitish ji and Modi ji. Now is the time to rectify the mistake: Congress leader Rahul Gandhi in Katihar#BiharElections pic.twitter.com/ga24GQ5Lxl
— ANI (@ANI) November 3, 2020
"ನಿಮ್ಮದೇ ಪಕ್ಕದಲ್ಲಿರುವ ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಸರ್ಕಾರವು ರೈತರು ಬೆಳೆದ ಭತ್ತಕ್ಕೆ ಒಂದು ಕ್ವಿಂಟಾಲ್ ಗೆ 2500 ರೂಪಾಯಿ ನೀಡುತ್ತಿದೆ. ಆದರೆ ಬಿಹಾರದಲ್ಲಿ ಮಾತ್ರ ಏಕೆ ಅಷ್ಟೊಂದು ಹಣವು ರೈತರಿಗೆ ಸಿಗುತ್ತಿಲ್ಲ" ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ, ನಿತೀಶ್ ರಿಗೆ ಮತ ನೀಡಿದ್ದೇ ತಪ್ಪು:
ಛತ್ತೀಸ್ ಗಢದಲ್ಲಿ ಒಂದು ಕ್ವಿಂಟಾಲ್ ಭತ್ತಕ್ಕೆ 2500 ರೂಪಾಯಿ ಸಿಗುತ್ತಿದೆ. ಮತ್ತೆ ಇಲ್ಲಿ ಏಕೆ ಹಾಗೆ ಆಗುತ್ತಿಲ್ಲ. ನಿಮ್ಮ ಬಳಿಯೂ ಭೂಮಿಯಿದೆ. ನೀರು ಇದೆ. ನೀವೂ ಕೂಡಾ ಅದೇ ಭತ್ತ ಬೆಳೆದಿದ್ದೀರಿ. ಹಾಗಿದ್ದಲ್ಲಿ ನಿಮಗೆ ಏಕೆ ಆ ಬೆಲೆಯು ಸಿಗುತ್ತಿಲ್ಲ. ಛತ್ತೀಸ್ ಗಢದಲ್ಲಿ ಕಾಂಗ್ರೆಸ್ 2500 ರೂಪಾಯಿ ಕೊಟ್ಟು ಖರೀದಿಸುತ್ತಿರುವ ಭತ್ತವನ್ನು ಬಿಹಾರದಲ್ಲಿ ಮಾತ್ರ ಏಕೆ ಕೇವಲ 700 ರೂಪಾಯಿಗೆ ಖರೀದಿಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದರು.
ಅಲ್ಲದೇ ಬಿಹಾರದ ರೈತರು ಮಾಡಿರುವ ತಪ್ಪಾದರೂ ಏನು ಎಂದು ರಾಹುಲ್ ಗಾಂಧಿ ಕೇಳಿದರು. ನಂತರ ತಮ್ಮ ಪ್ರಶ್ನೆಗೆ ತಾವೇ ಉತ್ತರಿಸಿದರು. ಅರೇ, ನೀವು ಮಾಡಿರುವ ತಪ್ಪು ಬೇರೇನೂ ಅಲ್ಲ. ಬಿಹಾರದ ರೈತರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸಿಎಂ ನಿತೀಶ್ ಕುಮಾರ್ ಅವರಿಗೆ ಮತವನ್ನು ನೀಡಿದ್ದೀರಿ. ಈ ಬಾರಿ ಅಂಥ ತಪ್ಪನ್ನು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ರಾಹುಲ್ ಗಾಂಧಿ ಕರೆ ನೀಡಿದರು.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications