ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಎಲ್ಲ ರೈತರ ಸಾಲ ಮನ್ನಾ: ರಾಹುಲ್
Recommended Video

ಪಾಟ್ನಾ, ಫೆಬ್ರವರಿ 3: ಕಾಂಗ್ರೆಸ್ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಬಡವರಿಗೆ ಕನಿಷ್ಠ ಆದಾಯ ಖಾತ್ರಿ ಬಗ್ಗೆ ಈಗಾಗಲೇ ಘೋಷಣೆ ಮಾಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದರೆ ದೇಶದ ಎಲ್ಲ ರೈತರ ಸಾಲ ಮನ್ನಾ ಮಾಡುವುದಾಗಿ ಭಾನುವಾರ ಘೋಷಣೆ ಮಾಡಿದ್ದಾರೆ.
ಸಾಲ ಮನ್ನಾದ ಭರವಸೆಯು ಈ ಹಿಂದೆ ರಾಜಸ್ತಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ ಗಢದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಏರಲು ಸಹಕಾರಿಯಾಗಿತ್ತು. "ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಎಲ್ಲ ರೈತರ ಸಾಲ ಮನ್ನಾ ಮಾಡಲಾಗುವುದು" ಎಂದು ಬಿಹಾರದ ಪಾಟ್ನಾದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಹೇಳಿದರು.
ಈ ಸಭೆಯಲ್ಲಿ ಕಾಂಗ್ರೆಸ್ ನ ಮಿತ್ರ ಪಕ್ಷಗಳ ನಾಯಕರಾದ ತೇಜಸ್ವಿ ಯಾದವ್, ಶರದ್ ಯಾದವ್ ಮತ್ತಿತರ ನಾಯಕರು ಇದ್ದರು. "ಮೋದಿ ಜೀ ಬಿಹಾರದ ರೈತರು ಹಾಗೂ ದೇಶದ ಇತರ ಭಾಗದ ರೈತರನ್ನು ಅವಮಾನಿಸಿದ್ದಾರೆ. ನೀವು ರೈತರನ್ನು ಅವಮಾನಿಸಿದರೆ, ಆ ನಂತರ ಅದಕ್ಕೆ ರೈತರು ಉತ್ತರ ನೀಡುತ್ತಾರೆ. ಈಗಾಗಲೇ ರೈತರು ಕಾಂಗ್ರೆಸ್ ಬೇಕು, ಬಿಜೆಪಿ ಬೇಡ ಎಂದು ಹೇಳುತ್ತಿದ್ದಾರೆ ಎಂದರು ರಾಹುಲ್.

ಫೆಬ್ರವರಿ ಒಂದನೇ ತಾರೀಕು ಮಧ್ಯಂತರ ಬಜೆಟ್ ಮಂಡಿಸಿದ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ, ಸಣ್ಣ ಪ್ರಮಾಣದ ರೈತರಿಗೆ ಎರಡು ಸಾವಿರ ರುಪಾಯಿಯಂತೆ ಮೂರು ಕಂತಿನಲ್ಲಿ, ವರ್ಷಕ್ಕೆ ಆರು ಸಾವಿರ ರುಪಾಯಿಯನ್ನು ನೇರವಾಗಿ ಖಾತೆಗೆ ವರ್ಗಾವಣೆ ಮಾಡುವ ಯೋಜನೆ ತಂದಿದೆ. ಇದರಿಂದ ಸರಕಾರದ ಮೇಲೆ ವಾರ್ಷಿಕ ಎಪ್ಪತ್ತೈದು ಸಾವಿರ ಕೋಟಿ ರುಪಾಯಿ ವೆಚ್ಚದ ಹೊರೆ ಆಗಲಿದೆ.
ಆದರೆ, ಈ ಆರು ಸಾವಿರ ರುಪಾಯಿ ರೈತರಿಗೆ ನೀಡುವುದು 'ಕಡ್ಲೇಕಾಯಿ ಬೀಜ' ಕೊಟ್ಟಂಗೆ. ಯಾವುದಕ್ಕೂ ಸಾಲುವುದಿಲ್ಲ ಎಂದು ವಿಪಕ್ಷ ಕಾಂಗ್ರೆಸ್ ಟೀಕೆ ಮಾಡಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications