ಬಿಹಾರದ ಸರಕಾರಿ ಆಸ್ಪತ್ರೆ ಹಾಸಿಗೆ ಮೇಲೆ ಮಲಗ್ತವೆ ನಾಯಿಗಳು, ದೂರಿತ್ತರು ರೋಗಿಗಳು
ಸರಕಾರಿ ಆಸ್ಪತ್ರೆ ಹಾಸಿಗೆಗಳ ಮೇಲೆ ನಾಯಿಗಳು ಮಲಗ್ತವೆ: ಬಿಹಪಾಟ್ನಾ (ಬಿಹಾರ), ಜನವರಿ 17: ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲ, ಇಂಥಿಂಥ ವ್ಯವಸ್ಥೆಗಳಿಲ್ಲ, ಅದಿಲ್ಲ-ಇದಿಲ್ಲ ಎಂದು ದೂರು ಹೇಳಿಕೊಳ್ಳುವುದನ್ನು ನೀವು ನೋಡಿರಬಹುದು ಹಾಗೂ ಕೇಳಿರಬಹುದು. ಆದರೆ ಬಿಹಾರದ ನಾವಡದ ಸರಕಾರಿ ಆಸ್ಪತ್ರೆಯೊಂದರಲ್ಲಿ ರೋಗಿಗಳ ದೂರು ವಿಭಿನ್ನವಾಗಿದೆ. ರೋಗಿಗಳಿಗೆ ಅಂತ ಇರುವ ಹಾಸಿಗೆ ಮೇಲೆ ನಾಯಿಗಳು ಬಂದು ಮಲಗುತ್ತವೆ ಎಂದು ಅಲವತ್ತುಕೊಂಡಿದ್ದಾರೆ.
ಆಸ್ಪತ್ರೆಯಲ್ಲಿ ಮಂಚದ ಮೇಲೆ ಪವಡಿಸುವ ನಾಯಿಗಳು, ಬೆಡ್ ಶೀಟ್ ನ ಕೂಡ ಬಳಸುತ್ತವೆ ಎಂಬುದು ಸಾರ್ವಜನಿಕರ ಆಕ್ಷೇಪ. ಆಸ್ಪತ್ರೆಯ ಅಧಿಕಾರಿಗಳು ನಮಗೆ ಬೆಡ್ ಶೀಟ್ ನೀಡುವುದಕ್ಕೆ ನಿರಾಕರಿಸುತ್ತಾರೆ. ಆದರೆ ನಾಯಿಗಳು ಅದೇ ಬೆಡ್ ಶೀಟ್ ಗಳಿಂದ ಬೆಚ್ಚಗೆ ಇರುತ್ತವೆ ಎಂದು ದೂರು ಹೇಳಿಕೊಂಡಿದ್ದಾರೆ ರೋಗಿಗಳು.

ಇದಕ್ಕೆ ಯಾರು ಕಾರಣರೋ ಅವರನ್ನು ಕಂಡು ಹಿಡಿಯುತ್ತೇವೆ ಎಂದು ಆಸ್ಪತ್ರೆ ಅಧಿಕಾರಿಗಳು ಹೇಳಿದ್ದಾರೆ. ಇದು ಹೇಗೆ ಆಗುತ್ತದೆ ಹಾಗೂ ಯಾರು ಇದಕ್ಕೆ ಕಾರಣರು ಎಂಬುದನ್ನು ಕಂಡು ಹಿಡಿಯುತ್ತೇವೆ ಎಂದು ಈ ಸರಕಾರಿ ಆಸ್ಪತ್ರೆಯ ಉಸ್ತುವಾರಿಗಳ ಪೈಕಿ ಒಬ್ಬರಾದ ಉಮೇಶ್ ಚಂದ್ರ ಹೇಳಿದ್ದಾರೆ.

ಕಳೆದ್ ವರ್ಷ ಜುಲೈನಲ್ಲಿ ನಳಂದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಆಗಿದ್ದ ಅನಾಹುತವನ್ನು ಒಮ್ಮೆ ಸ್ಮರಿಸಬೇಕಿದೆ. ಆ ಆಸ್ಪತ್ರೆಯು ಪಾಟ್ನಾದಲ್ಲಿರುವ ಎರಡನೇ ಅತಿ ದೊಡ್ಡ ಸರಕಾರಿ ಆಸ್ಪತ್ರೆ. ಭಾರೀ ಮಳೆ ಬಂದ ಪರಿಣಾಮ ಆಸ್ಪತ್ರೆ ಒಳಗೆ ನೀರು ನುಗ್ಗಿತ್ತು. ಐಸಿಯು ಒಳಗೆಲ್ಲ ನೀರು ತುಂಬಿಕೊಂಡು, ಮೀನುಗಳು ಈಜಾಡುವುದು ಕಂಡುಬಂದಿತ್ತು.
ಬಿಹಾರದಲ್ಲಿ ಜೆಡಿಯು ಹಾಗೂ ಬಿಜೆಪಿ ನೇತೃತ್ವದ ಮೈತ್ರಿ ಸರಕಾರ ಅಧಿಕಾರದಲ್ಲಿ ಇದ್ದು, ಜೆಡಿಯುನ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ ಆಗಿದ್ದಾರೆ.
ರದಲ್ಲಿ ಹೀಗೂ ದೂರು
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications