ಬಿಹಾರದಲ್ಲಿ ನೂತನ ಸರ್ಕಾರದ ಮೊದಲ ಅಧಿವೇಶನ: ವಿಶೇಷತೆಗಳು ಇಲ್ಲಿವೆ
ಪಾಟ್ನಾ, ನವೆಂಬರ್.23: ಬಿಹಾರದಲ್ಲಿ ನೂತನ ಸಚಿವರ ಸಂಪುಟ ರಚನೆ ಬೆನ್ನಲ್ಲೇ ಅಧಿವೇಶನ ಆರಂಭವಾಗಲಿದೆ. ಸೋಮವಾರದಿಂದ ರಾಜ್ಯದಲ್ಲಿ ನೂತನ ಸರ್ಕಾರದ ಮೊದಲ ಅಧಿವೇಶನವು ಆರಂಭವಾಗಲಿದ್ದು, ಐದು ದಿನಗಳವರೆಗೂ ಕಲಾಪ ನಡೆಯಲಿದೆ.
ನವೆಂಬರ್.23 ಅಥವಾ 24ರಂದು ವಿಧಾನಸಭಾ ಸಭಾಪತಿಯಾಗಿ ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ವಿಧಾನಸಭೆಯ ಸಭಾಪತಿ ಸ್ಧಾನಕ್ಕೆ ನವೆಂಬರ್.25ರಂದು ಚುನಾವಣೆ ನಡೆಯಲಿದೆ.
ಬಿಹಾರ ರಾಜ್ಯಪಾಲ ಫಾಗು ಚೌಹಾನ್ ನ.26ರಂದು ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಧಿವೇಶನದ ಕೊನೆಯ ದಿನ ನವೆಂಬರ್.27ರಂದು ವಿಧಾನಸಭೆಯ ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರಿಗೆ ಧನ್ಯವಾದಗಳು ತಿಳಿಸಲಾಗುತ್ತದೆ. ಇದರ ಮಧ್ಯೆ ಕಲಾಪಗಳಲ್ಲಿ ಯಾವ ವಿಷಯಗಳು ಚರ್ಚೆ ಆಗಬಹುದು ಎನ್ನುವುದರ ಕುರಿತು ಮಾಹಿತಿ ಇಲ್ಲಿದೆ.

ಬಿಹಾರ ಮೊದಲ ಅಧಿವೇಶನದ ಪ್ರಮುಖ ವಿಷಯಗಳು:
- ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ದೃಷ್ಟಿಯಿಂದ ಈ ಬಾರಿ ಬಿಹಾರ ವಿಧಾನಸಭೆಯ ಸಭೆಗಳನ್ನು ಸೆಂಟ್ರಲ್ ಹಾಲ್ನಲ್ಲಿ ನಡೆಸುವುದಕ್ಕೆ ತೀರ್ಮಾನಿಸಲಾಗಿದೆ.
- ವಿಧಾನಸಭಾ ಸಭಾಂಗಣದಲ್ಲಿ ಬಿಹಾರ ವಿಧಾನ ಪರಿಷತ್ತಿನ ಸಭೆ ನಡೆಯಲಿದೆ. ಮಾನ್ಸೂನ್ ಅಧಿವೇಶನದ ಸಂದರ್ಭದಲ್ಲೂ ಕೂಡಾ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದಾಗಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಅಧಿವೇಶನಗಳನ್ನು ಕೂಡಾ ಬದಲಾಯಿಸಲಾಗಿತ್ತು.
- ಅಧಿವೇಶನದಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಇತರರ ಕುಳಿತುಕೊಳ್ಳುವ ಆಸನ ವ್ಯವಸ್ಥೆಗಳಲ್ಲಿ ದೈಹಿಕ ಅಂತರವನ್ನು ಕಾಪಾಡಿಕೊಳ್ಳಲಾಗಿದೆ.
- ಉಭಯ ಸದನಗಳಲ್ಲಿ ಹಾಜರಾಗುವ ಪ್ರತಿಯೊಬ್ಬ ಸದಸ್ಯರು ಕೂಡಾ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications