ಮೇವು ಹಗರಣ; ಜಾರ್ಖಂಡ್ ಹೈಕೋರ್ಟ್ನಿಂದ ಲಾಲೂ ಪ್ರಸಾದ್ ಜಾಮೀನು ತಿರಸ್ಕಾರ
ಪಾಟ್ನಾ, ಫೆಬ್ರವರಿ 19: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ತಿರಸ್ಕರಿಸಿದ್ದು, ಎರಡು ತಿಂಗಳ ನಂತರ ಹೊಸ ಅರ್ಜಿ ಸಲ್ಲಿಸಲು ಸೂಚಿಸಿದೆ.
ಲಾಲು ಪ್ರಸಾದ್ ಅವರು ಮುಖ್ಯಮಂತ್ರಿಯಾಗಿದ್ದ 1992-93ರ ಅವಧಿಯಲ್ಲಿ ಚೈಬಾಸಾ ಖಜಾನೆಯಲ್ಲಿ 33.67 ಕೋಟಿ ಅವ್ಯವಹಾರ ಪ್ರಕರಣದಲ್ಲಿ 2017ರಿಂದಲೂ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ಸೇರಿ ಒಟ್ಟು 16 ಮಂದಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈ ಬಹುಕೋಟಿ ಮೇವು ಹಗರಣದಲ್ಲಿ ನಾಲ್ಕು ಪ್ರಕರಣಗಳನ್ನು ಎದುರಿಸುತ್ತಿರುವ ಲಾಲೂ ಪ್ರಸಾದ್ ಅವರಿಗೆ ಮೂರು ಪ್ರಕರಣದಲ್ಲಿ ಈಗಾಗಲೇ ಜಾಮೀನು ದೊರೆತಿದೆ. ಈ ಮುನ್ನ ಲಾಲೂ ಪ್ರಸಾದ್ ಆರೋಗ್ಯ ಕಾರಣದಿಂದ ಜಾರ್ಖಂಡ್ನ ರಾಂಚಿಯಲ್ಲಿರುವ ರಾಜೇಂದ್ರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಹದಗೆಟ್ಟ ಕಾರಣ ಈಚೆಗೆ ಅವರನ್ನು ದೆಹಲಿಯ ಏಮ್ಸ್ಗೆ ದಾಖಲಿಸಲಾಗಿತ್ತು.
ತಮ್ಮ ಶಿಕ್ಷೆಯ ಅವಧಿಯನ್ನು ಅರ್ಧ ಪೂರೈಸಿರುವುದಾಗಿ ಕೋರಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಜನವರಿ 29ಕ್ಕೆ ಅರ್ಜಿ ಕೈಗೆತ್ತಿಕೊಂಡಿದ್ದ ಜಾರ್ಖಂಡ್ ಹೈಕೋರ್ಟ್ ಫೆ.19ಕ್ಕೆ ವಿಚಾರಣೆ ಮುಂದೂಡಿದ್ದು, ಶುಕ್ರವಾರ ವಿಚಾರಣೆ ನಡೆಸಿದೆ. ಈ ಪ್ರಕರಣದಲ್ಲಿ ತಮಗೆ ಪೂರಕ ಆದೇಶ ದೊರೆತು ಜೈಲಿನಿಂದ ಬಿಡುಗಡೆಯಾಗುವುದಾಗಿ ಲಾಲೂ ಪ್ರಸಾದ್ ನಿರೀಕ್ಷಿಸಿದ್ದರು. ಆದರೆ ಜಾಮೀನು ತಿರಸ್ಕೃತಗೊಂಡಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications