"ಜನ್ಮದಿನ ಶುಭಾಶಯ"ದ ಹಿಂದಿದೆಯಾ ರಾಜಕೀಯ ಲೆಕ್ಕಾಚಾರ?
ಪಾಟ್ನಾ, ನವೆಂಬರ್.09: ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುವುದಕ್ಕೂ ಮುನ್ನ ದಿನ ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರಿಗೆ ಲೋಕಜನಶಕ್ತಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹುಟ್ಟುಹಬ್ಬದ ಶುಭಾಷಯ ಕೋರಿದ್ದಾರೆ.
ನವೆಂಬರ್.09ರಂದು ರಾಷ್ಟ್ರೀಯ ಜನತಾ ದಳ ಪಕ್ಷದ ಮುಖ್ಯಸ್ಥ ತೇಜಸ್ವಿ ಯಾದವ್ 32ನೇ ವಸಂತಕ್ಕೆ ಕಾಲಿಟ್ಟದ್ದು, ಶುಭಾಷಯಗಳ ಮಹಾಪೂರವೇ ಹರಿದು ಬಂದಿದೆ. ಈ ಮಧ್ಯೆ ಚಿರಾಗ್ ಪಾಸ್ವಾನ್ ಅವರ ಟ್ವೀಟ್ ರಾಜಕೀಯ ಲೆಕ್ಕಾಚಾರಕ್ಕೆ ನಾಂದಿ ಹಾಡಿದೆ.
"ನಿಮಗೆ ಹುಟ್ಟುಹಬ್ಬದ ಶುಭಾಷಯಗಳು. ಆ ದೇವರು ನಿಮ್ಮನ್ನು ದೀರ್ಘಾಯುಷ್ಯಿ ಆಗಿರುವಂತೆ ಆಶೀರ್ವದಿಸಲಿ. ನೀವು ಅಂದುಕೊಂಡ ಯಶಸ್ವಿ ಜೀವನವು ನಿಮ್ಮದಾಗಲಿ. ಇಂದು ನಿಮ್ಮ ಹುಟ್ಟುಹಬ್ಬವಾಗಿದ್ದು, ದೇವರ ಆಶೀರ್ವಾದ ನಿಮ್ಮ ಮೇಲಿರಲಿ" ಎಂದು ಚಿರಾಗ್ ಪಾಸ್ವಾನ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಚಿರಾಗ್ ಪಾಸ್ವಾನ್ ಸಂದೇಶಕ್ಕೆ ಧನ್ಯವಾದ:
ತಮಗೆ ಜನ್ಮದಿನದ ಶುಭಾಷಯ ಕೋರಿದ ಚಿರಾಗ್ ಪಾಸ್ವಾನ್ ಅವರಿಗೆ ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಧನ್ಯವಾದ ತಿಳಿಸಿದ್ದಾರೆ. ವಿಧಾನಸಭಾ ಚುನಾವಣಾ ಪ್ರಚಾರದ ಕಣದಲ್ಲಿ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡ ನಾಯಕರು ಅಸಲಿಗೆ ಆಪ್ತ ಗೆಳೆಯರು. ಎರಡೂ ಕುಟುಂಬಗಳ ನಡುವೆ ಉತ್ತಮ ಸ್ನೇಹ ಸಂಬಂಧವಿದೆ. ರಾಜಕೀಯ ಪ್ರವೇಶಕ್ಕೂ ಮೊದಲು ಕ್ರೀಡೆಯಲ್ಲಿ ಇದೇ ತೇಜಸ್ವಿ ಯಾದವ್ ಹಾಗೂ ಚಿರಾಗ್ ಪಾಸ್ವಾನ್ ಸ್ನೇಹಿತರಾಗಿದ್ದರು.
ತೇಜಸ್ವಿ ಯಾದವ್ ತಂದೆ ಲಾಲೂ ಪ್ರಸಾದ್ ಯಾದವ್ ಹಾಗೂ ಚಿರಾಗ್ ಪಾಸ್ವಾನ್ ಅವರ ತಂದೆ ರಾಮ್ ವಿಲಾಸ್ ಪಾಸ್ವಾನ್ ಕೂಡಾ ಉತ್ತಮ ಸ್ನೇಹಿತರಾಗಿದ್ದವರು. ಬಿಹಾರದಲ್ಲಿ ನಡೆದ ಚಳುವಳಿ ಮತ್ತು ಹೋರಾಟಗಳಲ್ಲಿ ಪರಸ್ಪರ ಇಬ್ಬರು ನಾಯಕರು ಕೈಜೋಡಿಸಿದ ಇತಿಹಾಸವೂ ಇದೆ.
ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರೋಧಿ ಅಲೆಯಲ್ಲಿ ಮುಂದಿನ ಮುಖ್ಯಮಂತ್ರಿ ಗದ್ದುಗೆ ಏರಲು ತೇಜಸ್ವಿ ಯಾದವ್ ತುದಿಗಾಲ ಮೇಲೆ ನಿಂತಿದ್ದಾರೆ. ಕಾಂಗ್ರೆಸ್ ಜೊತೆಗೆ ಕೈಜೋಡಿಸಿರುವ ಸ್ನೇಹಿತನಿಗೆ ಆಪತ್ತಿನ ಕಾಲದಲ್ಲಿ ಚಿರಾಗ್ ಪಾಸ್ವಾನ್ ಕೂಡಾ ಬೆಂಬಲ ನೀಡುತ್ತಾರೆಯೇ ಎಂಬ ಪ್ರಶ್ನೆಗಳು ಬಿಹಾರದ ರಾಜಕೀಯ ವಲಯಗಳಲ್ಲಿ ಚರ್ಚೆ ಆಗುತ್ತಿವೆ.
2020ರ ವಿಧಾನಸಭಾ ಚುನಾವಣೆಗೆ ಈಗಾಗಲೇ ಮೂರು ಹಂತಗಳಲ್ಲಿ ಮತದಾನ ನಡೆದಿದೆ. ಅಕ್ಟೋಬರ್.28ರ ಮೊದಲ ಹಂತದಲ್ಲಿ ಶೇ.55.69ರಷ್ಟು ಮತದಾನ ನಡೆದಿದೆ. ನವೆಂಬರ್.03ರ ಎರಡನೇ ಹಂತದಲ್ಲಿ ಶೇ.53.51ರಷ್ಟು ಮತದಾನ ನಡೆದಿದೆ. ಶನಿವಾರ 3ನೇ ಹಂತದಲ್ಲಿ ಶೇ.51ರಷ್ಟು ಮತದಾನ ನಡೆದಿದ್ದು, ನವೆಂಬರ್.10ರಂದು ಫಲಿತಾಂಶ ಹೊರಬೀಳಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications