'ನಾನು ಸಿಂಹದ ಮಗ' : ಚಿರಾಗ್ ಪಾಸ್ವಾನ್ ಎಚ್ಚರಿಕೆ
ಪಾಟ್ನಾ, ಜೂ.16: ಚಿಕ್ಕಪ್ಪನ ನೇತೃತ್ವದ ಲೋಕ ಜನಶಕ್ತಿ ಪಕ್ಷದಲ್ಲಿ (ಎಲ್ಜೆಪಿ) ದಂಗೆಯ ನಂತರ ತಾನು ಉಳಿಯಲು ಹೋರಾಡುತ್ತಿರುವ ಚಿರಾಗ್ ಪಾಸ್ವಾನ್, ಬಂಡುಕೋರ ಗುಂಪಿನ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ಧ ಎಂದು ಹೇಳಿದ್ದಾರೆ. "ನಾನು ರಾಮ್ ವಿಲಾಸ್ ಮಗ, ಸಿಂಹದ ಮಗ" ಎಂದು ಎಚ್ಚರಿಕೆ ನೀಡಿದ್ದಾರೆ.
ಬಿಕ್ಕಟ್ಟು ಸ್ಫೋಟಗೊಂಡ ನಂತರ ತಮ್ಮ ಮೊದಲ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಲ್ಜೆಪಿ ನಾಯಕ ಚಿರಾಗ್, ಬಿಹಾರ ಚುನಾವಣೆಗೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಿಂದ ಪ್ರತ್ಯೇಕವಾಗಿ ಸ್ಪರ್ಧಿಸುವಂತಹ ನಿರ್ಧಾರಗಳನ್ನು ಸಮರ್ಥಿಸಿಕೊಂಡರು. ಇದು ತನ್ನ ಚಿಕ್ಕಪ್ಪ ಪಶುಪತಿ ಕುಮಾರ್ ಪರಾಸ್ ಜೊತೆಗಿನ ದ್ವೇಷದ ಪರಿಣಾಮ ಎಂದು ಹೇಳಿದ್ದಾರೆ.
"ನನ್ನ ತಂದೆಯನ್ನು ಕಳೆದುಕೊಂಡಾಗ ಅಲ್ಲ, ನನ್ನ ಚಿಕ್ಕಪ್ಪ ನನ್ನನ್ನು ತೊರೆದ ನಂತರ ನಾನಿಂದು ಅನಾಥನಾಗಿದ್ದೇನೆ," ಎಂದು ಭಾವಾನಾತ್ಮಕ ಮಾತುಗಳನ್ನು ಮಾತನಾಡಿದ ಚಿರಾಗ್, "ನಾನು ಅನಾರೋಗ್ಯಕ್ಕೆ ಒಳಗಾಗಿದ್ದ ಸಂದರ್ಭದಲ್ಲಿ ಈ ದಂಗೆಯನ್ನು ಬೇರೆಯವರು ರೂಪಿಸಿ, ಕಾರ್ಯಗತಗೊಳಿಸಿದರು," ಎಂದಿದ್ದಾರೆ.

ಬಿಹಾರ ರಾಜಕಾರಣದಲ್ಲಿ ನಡೆದ ದಿಢೀರ್ ಬೆಳವಣಿಗೆಯೊಂದರಲ್ಲಿ ಚಿರಾಗ್ ಪಾಸ್ವಾನ್ರನ್ನು ಲೋಕ ಜನಶಕ್ತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಲಾಗಿದೆ. ಸೂರಜ್ ಬಾನ್ ಸಿಂಗ್ರನ್ನು ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಸ್ಥಾನಕ್ಕೆ ನೇಮಿಸಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಸುವ ಅಧಿಕಾರವನ್ನು ಸೂರಜ್ ಬಾನ್ ಸಿಂಗ್ಗೆ ನೀಡಲಾಗಿದೆ.
ಸೋಮವಾರ ಬಿಹಾರದ ಲೋಕ ಜನಶಕ್ತಿ ಪಕ್ಷದ ಆರು ಸಂಸದರ ಪೈಕಿ ಐದು ಸಂಸದರು ಚಿರಾಗ್ ಪಾಸ್ವಾನ್ ಚಿಕ್ಕಪ್ಪ( ರಾಮ್ ವಿಲಾಸ್ ಪಾಸ್ವಾನ್ ಸಹೋದರ) ಪಶುಪತಿ ಕುಮಾರ್ ಪಾರಸ್ ಅನ್ನು ಬೆಂಬಲಿಸಿದ್ದರು. ಚಿರಾಗ್ ಪಾಸ್ವಾನ್ ವಿರುದ್ಧ ದಂಗೆ ಎದ್ದಿರುವ ಐದು ಸಂಸದರನ್ನು ದಿಢೀರ್ ಬೆಳವಣಿಗೆಯೊಂದರಲ್ಲಿ ಪಕ್ಷದಿಂದಲೇ ಉಚ್ಛಾಟಿಸಲಾಗಿದೆ.
"ನಿನ್ನೆ ಮಧ್ಯಾಹ್ನದವರೆಗೆ ನನ್ನ ತಾಯಿ ಮತ್ತು ನಾನು ಚಿಕ್ಕಪ್ಪನನ್ನು ಸಂಪರ್ಕಿಸಲು ಪ್ರಯತ್ನ ಮಾಡಿದ್ದೇವೆ. ಚಿಕ್ಕಪ್ಪ ನನ್ನ ಬಳಿ ಕೇಳಿದ್ದರೆ, ನಾನೇ ಅವರನ್ನು ಪಕ್ಷದ ಸಂಸದೀಯ ಮಂಡಳಿಯ ಮುಖ್ಯಸ್ಥರನ್ನಾಗಿ ಮಾಡುತ್ತಿದ್ದೆ," ಎಂದಿದ್ದಾರೆ ಪಾಸ್ವಾನ್.
(ಒನ್ಇಂಡಿಯಾ ಸುದ್ದಿ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications