ವಿದೇಶಕ್ಕೆ ಹೋಗಿ ಗೋಮಾಂಸ ತಿನ್ನಲು ಕಲಿಯುತ್ತಾರೆ: ಕೇಂದ್ರ ಸಚಿವರ ವಿವಾದ
ಬೇಗುಸರಾಯ್, ಜನವರಿ 2: ವಿದೇಶಕ್ಕೆ ತೆರಳುವ ಭಾರತದ ಮಕ್ಕಳಲ್ಲಿ ಹೆಚ್ಚಿನವರು ಗೋಮಾಂಸ ಭಕ್ಷಣೆಯನ್ನು ಶುರುಮಾಡುತ್ತಾರೆ. ಏಕೆಂದರೆ ಅವರಿಗೆ ನಮ್ಮ ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಮೌಲ್ಯಗಳ ಬಗ್ಗೆ ಕಲಿಸುತ್ತಿಲ್ಲ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದರು.
ಬಿಹಾರದ ಬೇಗುಸರಾಯ್ನಲ್ಲಿ ಬುಧವಾರ ಶ್ರೀಮದ್ ಭಗವದ್ ಕಥಾ ಜ್ಞಾಪನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವಿವಾದಾತ್ಮಕ ಹೇಳಿಕೆ ನೀಡಿದರು.
'ಶಾಲೆಗಳಲ್ಲಿ ಭಗವದ್ಗೀತೆಯನ್ನು ಕಲಿಸಿಕೊಡಬೇಕು. ನಾವು ನಮ್ಮ ಮಕ್ಕಳನ್ನು ಮಿಷನರಿ ಶಾಲೆಗಳಿಗೆ ಕಳಿಸುತ್ತಿದ್ದೇವೆ. ಅವರಲ್ಲಿ ಹೆಚ್ಚಿನವರು ಐಐಟಿಯಲ್ಲಿ ಓದಿ ನಂತರ ಎಂಜಿನಿಯರ್ಗಳಾಗುತ್ತಾರೆ. ವಿದೇಶಕ್ಕೆ ಹೋಗುತ್ತಾರೆ. ಅವರಲ್ಲಿ ಹೆಚ್ಚಿನವರು ಗೋಮಾಂಸ ತಿನ್ನುತ್ತಾರೆ. ಏಕೆ? ಏಕೆಂದರೆ ಅವರಿಗೆ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ಕಲಿಸಿಲ್ಲ. ನಂತರ ಅವರ ಪೋಷಕರು ತಮ್ಮ ಮಕ್ಕಳು ತಮ್ಮನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸುತ್ತಾರೆ' ಎಂಬುದಾಗಿ ಗಿರಿರಾಜ್ ಸಿಂಗ್ ಹೇಳಿದರು.

ಶಾಲೆಗಳಲ್ಲಿ ಭಗವದ್ಗೀತೆ ಭೋದನೆಯನ್ನು ಜಾರಿಗೊಳಿಸುವ ಅಗತ್ಯವಿದೆ ಎಂದು ಗಿರಿರಾಜ್ ಸಿಂಗ್ ಪ್ರತಿಪಾದಿಸಿದರು.
'ಹೀಗಾಗಿ ಶಾಲೆಗಳಲ್ಲಿ ಭಗವದ್ಗೀತಾದ ಶ್ಲೋಕಗಳನ್ನು ಪಾಠವಾಗಿ ಕಲಿಸಿಕೊಡಬೇಕು. ಸಮೀಕ್ಷೆಯೊಂದರ ಪ್ರಕಾರ, ಸುಮಾರು 100 ಮನೆಗಳಲ್ಲಿ 15 ಮನೆಗಳಲ್ಲಿ ಮಾತ್ರ ಹನುಮಾನ್ ಚಾಲೀಸ, ಭಗವದ್ಗೀತೆ ಮತ್ತು ರಾಮಾಯಣದ ಪುಸ್ತಕಗಳು ಇರುವುದು ಕಂಡುಬಂದಿದೆ. ಹೀಗಾಗಿ ನಾವು ಮಕ್ಕಳ ಮೇಲೆ ಆಪಾದನೆ ಹೊರಿಸುವುದರಲ್ಲಿ ಅರ್ಥವಿಲ್ಲ' ಎಂದರು.
ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್, ಸಂಸ್ಕೃತಿ ಉಳಿದರೆ ಮಾತ್ರ ಭಾರತ ಉಳಿಯಲು ಸಾಧ್ಯ ಎಂದು ಹೇಳಿದರು.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications