ಡುಮ್ಕಾ ಖಜಾನೆ ಪ್ರಕರಣ: ಡಿ.11ಕ್ಕೆ ಲಾಲೂ ಜಾಮೀನು ಅರ್ಜಿ ವಿಚಾರಣೆ
ರಾಂಚಿ, ನವೆಂಬರ್ 27: ಮೇವು ಹಗರಣದಲ್ಲಿ ಡುಮ್ಕ ಖಜಾನೆ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಜಾರ್ಖಂಡ್ ಹೈಕೋರ್ಟ್ ಡಿಸೆಂಬರ್ 11ಕ್ಕೆ ಮುಂದೂಡಿದೆ.
1992-93 ಚಾಯಿಬಾಸಾ ಖಜಾನೆಯಿಂದ 33.67 ಕೋಟಿ ರೂ. ಹಣವನ್ನು ಅಕ್ರಮವಾಗಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ಅಧ್ಯಕ್ಷ ಲಾಲೂ ಸೇರಿ ಒಟ್ಟು 16 ಮಂದಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು.
ಡುಮ್ಕಾ ಖಜಾನೆ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಗೆ 2. 7 ವರ್ಷಗಳ ಜೈಲು ಶಿಕ್ಷೆಗೊಳಗಾಗಿದ್ದು, ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದರು. ನಾಲ್ಕು ಬಹುಕೋಟಿ ಮೇವು ಹಗರಣದಲ್ಲಿ ಲಾಲು ಪ್ರಸಾದ್ ಯಾದವ್ ಆರೋಪಿಯಾಗಿದ್ದಾರೆ.

ಆದಾಗ್ಯೂ, ನಾಲ್ಕು ಪ್ರಕರಣದ ಪೈಕಿ ಒಂದರಲ್ಲಿ ಅವರಿಗೆ ಜಾಮೀನು ನೀಡಲಾಗಿದೆ. ಅನಾರೋಗ್ಯದ ನೆಲೆಯಲ್ಲಿ ಎರಡನೇ ಮೇವು ಹಗರಣದಲ್ಲಿ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಪ್ರಸ್ತತ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಲಾಲು ಪ್ರಸಾದ್ ಯಾದವ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾಲು ಪ್ರಸಾದ್ ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ಪಶುಸಂಗೋಪನಾ ಇಲಾಖೆಯಲ್ಲಿ 900 ಕೋಟಿ ಮೊತ್ತದ ಮೇವು ಹಗರಣ ನಡೆದಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications