ಬಿಜೆಪಿ ಶಾಸಕರಿಗೆ ಫೋನ್ ಕರೆ; ಲಾಲೂ ಪ್ರಸಾದ್ ಯಾದವ್ ವಿರುದ್ಧ ಎಫ್ಐಆರ್
ಪಾಟ್ನಾ, ನವೆಂಬರ್ 26: ಜೈಲು ಶಿಕ್ಷೆ ಅನುಭವಿಸುತ್ತಿರುವ ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿಧಾನಸಭೆ ಸ್ಪೀಕರ್ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯನ್ನು ಸೋಲಿಸಲು ಸಹಾಯ ಕೋರಿ ಲಾಲೂ ಬಿಜೆಪಿ ಶಾಸಕನಿಗೆ ಕರೆ ಮಾಡಿದ್ದರು.
ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಲಾಲೂ ಪ್ರಸಾದ್ ಯಾದವ್ ಮಾಡಿದ್ದ ದೂರವಾಣಿ ಕರೆ ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಆಧರಿಸಿ ಮತ್ತು ಶಾಸಕನಿಗೆ ಸಚಿವ ಸ್ಥಾನದ ಆಮಿಷ ವೊಡ್ಡಿದ ಆಧಾರದ ಮೇಲೆ ಭ್ರಷ್ಟಾಚಾರ ಕಾಯ್ದೆಯಡಿ ಲಾಲೂ ವಿರುದ್ಧ ದೂರನ್ನು ದಾಖಲು ಮಾಡಲಾಗಿತ್ತು.
ಬಿಜೆಪಿ ಶಾಸಕ ಲಲನ್ ಕುಮಾರ್ ಪಾಸ್ವಾನ್ ಅವರಿಗೆ ಕರೆ ಮಾಡಿದ್ದ ಲಾಲೂ ಪ್ರಸಾದ್ ಯಾದವ್ ವಿರುದ್ಧ ಜಾರ್ಖಂಡ್ ಸರ್ಕಾರ ಸಹ ತನಿಖೆಗೆ ಆದೇಶ ನೀಡಿದೆ. ಲಾಲೂ ಪ್ರಸಾದ್ ರಾಂಚಿಯ ರಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮೇವು ಹಗರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿರುವ ಲಾಲೂ ಪ್ರಸಾದ್ ಯಾದವ್ ರಾಂಚಿ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್)ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲಿಂದಲೇ ಕರೆ ಮಾಡಿರುವ ಪ್ರಕರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.
ಮಂಗಳವಾರ ಬಿಹಾರ ವಿಧಾನಸಭೆ ಸ್ಪೀಕರ್ ಚುನಾವಣೆಯ ಸಂದರ್ಭದಲ್ಲಿ ಮತದಾನದಿಂದ ದೂರ ಇರಬೇಕು ಎಂದು ಲಾಲೂ ಪ್ರಸಾದ್ ಯಾದವ್ ದೂರವಾಣಿ ಕರೆಯಲ್ಲಿ ಹೇಳಿದ್ದರು. ಮತದಾನದಿಂದ ದೂರ ಉಳಿದು ಸಹಾಯ ಮಾಡಿದರೆ ಸಚಿವ ಸ್ಥಾನ ನೀಡುವ ಆಮಿಷವನ್ನು ಶಾಸಕರಿಗೆ ವೊಡ್ಡಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications