ಲಾಲು ಪ್ರಸಾದ್ ಯಾದವ್ಗೆ ಮತ್ತೆ ಜಾಮೀನಿಲ್ಲ, ನ.27ಕ್ಕೆ ವಿಚಾರಣೆ ಮುಂದೂಡಿಕೆ
ಪಾಟ್ನಾ, ನವೆಂಬರ್ 10: ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶಕ್ಕೆ ಒಂದು ದಿನ ಮೊದಲು, ಅಂದರೆ ನವೆಂಬರ್ 9 ರಂದು ಲಾಲು ಪ್ರಸಾದ್ ಜೈಲಿನಿಂದ ಬಿಡುಗಡೆಯಾಗಿ ಹೊರಬರುವ ಆರ್ಜೆಡಿಯ ನಿರೀಕ್ಷೆ ಹುಸಿಯಾಗಿದೆ.
ಜಾರ್ಖಂಡ್ ಹೈಕೋರ್ಟ್ ಶುಕ್ರವಾರದಂದು ಮೇವಿನ ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನವೆಂಬರ್ ತಿಂಗಳ ಅಂತ್ಯದವರೆಗೆ ಮುಂದೂಡಿದೆ.
ಮೇವಿನ ಹಗರಣ ಪ್ರಕರಣದಲ್ಲಿ ಉತ್ತರವನ್ನು ಸಲ್ಲಿಸಲು ಸಿಬಿಐ ಹೆಚ್ಚಿನ ಸಮಯವನ್ನು ಕೋರಿದ್ದರಿಂದ ವಿಚಾರಣೆಯನ್ನು ನ. 27 ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಕಳೆದ ಎರಡು ವರ್ಷದಿಂದ ಲಾಲು ಪ್ರಸಾದ್ ಯಾದವ್ ಬಂಧನದಲ್ಲಿದ್ದು, ನಾಲ್ಕು ದಶಕಗಳಲ್ಲಿಯೇ ಮೊದಲ ಬಾರಿಗೆ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.
ನವೆಂಬರ್ 9 ರಂದು ತಮ್ಮ ತಂದೆ ಜೈಲಿನಿಂದ ಹೊರಬರುತ್ತಾರೆ, ಮತ್ತು ಮರುದಿನ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿದಾಯ ಎಂದು ಲಾಲು ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ಚುನಾವಣಾ ಮೆರವಣಿಗೆಗಳಲ್ಲಿ ಹೇಳುತ್ತಿದ್ದರು.
ಈ ಪ್ರಕರಣವು ಡಿಸೆಂಬರ್ 1995 ಮತ್ತು ಜನವರಿ 1996 ರ ನಡುವೆ "ನಕಲಿ ದಾಖಲೆಗಳನ್ನು' ಬಳಸಿಕೊಂಡು ಡುಮ್ಕಾ ಖಜಾನೆಯಿಂದ 3.76 ಕೋಟಿ ರೂ.ಗಳನ್ನು ತೆಗೆದುಕೊಂಡು ಪಶು ಆಹಾರದ ಕಾಲ್ಪನಿಕ ಪೂರೈಕೆಗೆ ಸಂಬಂಧಿಸಿದ್ದಾಗಿದೆ. ಡುಮ್ಕಾ ಖಜಾನೆ ಜಾರ್ಖಂಡ್ ನಲ್ಲಿದ್ದು, ಆದರೆ ಆ ಸಂದರ್ಭದಲ್ಲಿ ಅವಿಭಜಿತ ಬಿಹಾರದ ಭಾಗವಾಗಿತ್ತು.
ತನ್ನ ಏಳು ವರ್ಷಗಳ ಜೈಲು ಶಿಕ್ಷೆಯ ಅರ್ಧಕ್ಕಿಂತ ಹೆಚ್ಚಿನ ಅವಧಿಯನ್ನು ಜೈಲಿನಲ್ಲಿಯೇ ಕಳೆದಿದ್ದಾರೆ ಎಂಬ ಕಾರಣಕ್ಕೆ, ಅಕ್ಟೋಬರ್ 9 ರಂದು, ಚೈಬಾಸ ಖಜಾನೆಯಿಂದ ಅಕ್ರಮವಾಗಿ ಹಣವನ್ನು ವಾಪಸ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಲಾಲು ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಿತ್ತು.
ಶುಕ್ರವಾರದ ವರ್ಚುವಲ್ ವಿಚಾರಣೆಯಲ್ಲಿ, ಲಾಲು ಪ್ರಸಾದ್ ಯಾದವ್ ಪರ ವಕೀಲ ಕಪಿಲ್ ಸಿಬಲ್ ಅವರು, "ಡುಮ್ಕಾ ಪ್ರಕರಣದಲ್ಲಿ 42 ತಿಂಗಳು 26 ದಿನಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದು ಅವರ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು ಸಮಯವೆಂದು ವಾದಿಸಿದರು.
ಆದರೆ ಈ ವಾದವನ್ನು ಸಿಬಿಐ ಕೋರ್ಟ್ ಇದನ್ನು ಒಪ್ಪಲಿಲ್ಲ ಮತ್ತು ಈ ಆಧಾರದ ಮೇಲೆ ಜಾಮೀನು ನೀಡುವುದನ್ನು ವಿರೋಧಿಸುವುದಾಗಿ ಹೇಳಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications