Get Updates
Get notified of breaking news, exclusive insights, and must-see stories!

ರಾಜ್ಯಸಭೆಗೆ ಲಾಲು ಪುತ್ರಿ ಮಿಸಾ ಭಾರತಿ, ಫೈಯಾಜ್ ಅಹ್ಮದ್ ಆರ್‌ಜೆಡಿ ಅಭ್ಯರ್ಥಿಗಳು

ಬಿಹಾರ, ಮೇ 26: ಬಿಹಾರದಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಂಬರುವ ರಾಜ್ಯಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಬಹಿರಂಗಪಡಿಸಿದೆ. ಸುದ್ದಿ ಸಂಸ್ಥೆ ANI ಪ್ರಕಾರ, RJD ಚುನಾವಣೆಗೆ ಪಕ್ಷದ ಅಭ್ಯರ್ಥಿಗಳಾಗಿ ಲಾಲು ಪ್ರಸಾದ್‌ ಯಾದವ್‌ ಪುತ್ರಿ ಮಿಸಾ ಭಾರ್ತಿ ಮತ್ತು ಫೈಯಾಜ್ ಅಹ್ಮದ್ ಅವರನ್ನು ಆಯ್ಕೆ ಮಾಡಿದೆ.

ಮಿಸಾ ಭಾರತಿ RJDಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರಿಯಾಗಿದ್ದು, ಹಾಲಿ ರಾಜ್ಯಸಭಾ ಸದಸ್ಯರಾಗಿದ್ದಾರೆ. ಡಾ. ಫೈಯಾಜ್ ಅಹ್ಮದ್ ಅವರು ಮಾಜಿ ಶಾಸಕ ಮತ್ತು ಪಕ್ಷದ ಹಿರಿಯ ಸದಸ್ಯರಾಗಿದ್ದಾರೆ. ಈ ವರ್ಷಾಂತ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.

2017ರಲ್ಲಿ ಆರ್‌ಜೆಡಿ ನಾಯಕ ಶರದ್ ಯಾದವ್ ಅನರ್ಹ

2017ರಲ್ಲಿ ಆರ್‌ಜೆಡಿ ನಾಯಕ ಶರದ್ ಯಾದವ್ ಅನರ್ಹ

ಮಾಧ್ಯಮ ವರದಿಗಳ ಪ್ರಕಾರ, ಭಾರ್ತಿ ಮತ್ತು ಅಹ್ಮದ್ ಅವರು ಮೇ 27ರಂದು ಬೆಳಿಗ್ಗೆ 11:30ಕ್ಕೆ ಮೇಲ್ಮನೆ ಚುನಾವಣೆಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ಇಬ್ಬರೂ ಅಭ್ಯರ್ಥಿಗಳು ಗುರುವಾರ ಮತದಾನಕ್ಕೆ ಭದ್ರತಾ ಠೇವಣಿ ಸಲ್ಲಿಸಿದ್ದರು. ರಾಜ್ಯಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಬುಧವಾರ ಆರಂಭಗೊಂಡಿದ್ದು, ಮೇ 31ಕ್ಕೆ ಮುಕ್ತಾಯವಾಗಲಿದೆ. ಈ ಹಿಂದೆ 2017ರಲ್ಲಿ ಆರ್‌ಜೆಡಿ ನಾಯಕ ಶರದ್ ಯಾದವ್ ಅವರು ಸದಸ್ಯತ್ವದಿಂದ ಅನರ್ಹಗೊಂಡಿದ್ದರಿಂದ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಊಹಿಸಲಾಗಿತ್ತು.

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಆಗಮನ

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಆಗಮನ

ಬುಧವಾರ ಮಿಸಾ ಭಾರತಿ ತಂದೆ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ರಾತ್ರಿ 7 ಗಂಟೆಗೆ ಪಾಟ್ನಾ ವಿಮಾನ ನಿಲ್ದಾಣಕ್ಕೆ ಆಗಮಿಸಿ, ನಗರದ 10 ಸರ್ಕ್ಯುಲರ್ ರಸ್ತೆಯಲ್ಲಿರುವ ಭಾರತಿ ಅವರ ತಾಯಿ ರಾಬ್ರಿ ದೇವಿ ಅವರ ನಿವಾಸಕ್ಕೆ ತೆರಳಿದರು. ಜೂನ್ 1 ರಂದು ಆರ್‌ಜೆಡಿಯ ಸರ್ವಪಕ್ಷ ಸಭೆ ಕೂಡ ನಿಗದಿಯಾಗಿದೆ. ಜಾತಿ ಗಣತಿ, ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆ ಮತ್ತು ಸಿಬಿಐ ಮತ್ತೊಂದು ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಿದ ವಿಷಯಗಳ ಕುರಿತು ರಾಜಕೀಯ ತಾಪಮಾನ ಹೆಚ್ಚುತ್ತಿರುವ ಮಧ್ಯೆ, ಅನಾರೋಗ್ಯದಿಂದ ಬಳಲುತ್ತಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರು ತಮ್ಮ ತವರು ಪ್ರದೇಶವಾದ ಬಿಹಾರಕ್ಕೆ ಮರಳಿದರು. ವೀಲ್‌ಚೇರ್‌ನಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದ ನಾಯಕನನ್ನು ಸ್ವಾಗತಿಸಲು ಆರ್‌ಜೆಡಿ ಬೆಂಬಲಿಗರ ದೊಡ್ಡ ದಂಡೇ ಏರ್‌ಪೋರ್ಟ್‌ನಲ್ಲಿ ಸೇರಿತ್ತು.

ರಾಜ್ಯಸಭಾ ಚುನಾವಣೆಯು ಬಹಳಷ್ಟು ಅನಿರೀಕ್ಷಿತ ಅಭ್ಯರ್ಥಿಗಳನ್ನು ಕಂಡಿದೆ, ಅದರಲ್ಲಿ ಪ್ರಮುಖವಾಗಿ ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ಸ್ವತಂತ್ರ ಅಭ್ಯರ್ಥಿಯಾಗಿ ನೋಂದಾಯಿಸಿಕೊಂಡಿರುವ ಕಪಿಲ್ ಸಿಬಲ್. ಐಎನ್‌ಸಿಗೆ ದೊಡ್ಡ ಹೊಡೆತವಾಗಿ ಮೇ 16 ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಅವರು ಘೋಷಿಸಿದ್ದರು.

ಅನಿಲ್ ಹೆಗ್ಡೆಯವರು ಕರ್ನಾಟಕದ ಮಂಗಳೂರಿನವರು

ಅನಿಲ್ ಹೆಗ್ಡೆಯವರು ಕರ್ನಾಟಕದ ಮಂಗಳೂರಿನವರು

ಬಿಹಾರದ ಉಪಚುನಾವಣೆಗೆ ಜನತಾ ದಳ ಯುನೈಟೆಡ್ (ಜೆಡಿಯು) ತನ್ನ ಅಭ್ಯರ್ಥಿಯಾಗಿ ಅನಿಲ್ ಹೆಗ್ಡೆ ಅವರನ್ನು ಕಣಕ್ಕಿಳಿಸಿದೆ. ಡಿಸೆಂಬರ್ 27 ರಂದು ಜನತಾ ದಳ ಯುನೈಟೆಡ್ (ಜೆಡಿಯು) ಸಂಸದ ಮಹೇಂದ್ರ ಪ್ರಸಾದ್ ಅವರ ನಿಧನದ ನಂತರ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಬಿಹಾರದಲ್ಲಿ ಉಪಚುನಾವಣೆ ನಡೆಯುತ್ತಿದೆ. ತಮ್ಮ ಅಭಿಮಾನಿಗಳಲ್ಲಿ ಕಿಂಗ್ ಮಹೇಂದ್ರ ಎಂದೇ ಖ್ಯಾತರಾಗಿರುವ ಮಹೇಂದ್ರ ಪ್ರಸಾದ್ ಅವರು ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಯಾಗಿ ದಾಖಲೆಯ ಏಳನೇ ಬಾರಿಗೆ ರಾಜ್ಯಸಭೆಗೆ ಹೋದರು. ಕೊನೆಯದಾಗಿ 2018ರಲ್ಲಿ ಜೆಡಿಯು ಸದಸ್ಯರಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಅನಿಲ್ ಹೆಗ್ಡೆಯವರು ಕರ್ನಾಟಕದ ಮಂಗಳೂರಿನವರು. ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿಕಟವರ್ತಿ ಎಂದು ಪರಿಗಣಿಸಲಾಗಿದೆ.

ಮುಖ್ಯಮಂತ್ರಿಯೊಂದಿಗೆ ಬಲವಾಗಿ ನಿಲ್ಲುತ್ತಾರೆ

ಮುಖ್ಯಮಂತ್ರಿಯೊಂದಿಗೆ ಬಲವಾಗಿ ನಿಲ್ಲುತ್ತಾರೆ

ಅನಿಲ್ ಹೆಗ್ಡೆ ಅವರು ಬಹಳ ವಿನಮ್ರ ಮತ್ತು ಸಂಘಟನಾಶೀಲ ವ್ಯಕ್ತಿಯಾಗಿದ್ದು, ದಶಕಗಳಿಂದ ಪಕ್ಷದೊಂದಿಗೆ ಕೆಲಸ ಮಾಡುತ್ತಿದ್ದಾರೆ ಮತ್ತು ಅವರು ಪಾಟ್ನಾದಲ್ಲಿ ನೆಲೆಸಿದ್ದಾರೆ ಮತ್ತು ಪಕ್ಷದ ಸಂಘಟನೆಯನ್ನು ಬಲಪಡಿಸಲು ಶ್ರಮಿಸುತ್ತಿದ್ದಾರೆ ಎಂದು ಜೆಡಿಯು ಹಿರಿಯ ನಾಯಕ ANIಗೆ ತಿಳಿಸಿದ್ದಾರೆ. "ಪಕ್ಷದ ಮಾಜಿ ಅಧ್ಯಕ್ಷ ಶರದ್ ಯಾದವ್ ಮತ್ತು ನಿತೀಶ್ ಕುಮಾರ್ ಅವರು ಸಾಂಸ್ಥಿಕ ವಿಷಯಗಳಲ್ಲಿ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದಾಗ, ಹೆಗ್ಡೆ ಅವರು ಮುಖ್ಯಮಂತ್ರಿಯೊಂದಿಗೆ ಬಲವಾಗಿ ನಿಲ್ಲುತ್ತಾರೆ" ಎಂದು ಜೆಡಿಯು ನಾಯಕ ಹೇಳಿದರು.

ಚುನಾವಣಾ ಆಯೋಗದ ಪ್ರಕಾರ, ಮೇ 12 ರಂದು ಉಪಚುನಾವಣೆಗೆ ಅಧಿಸೂಚನೆಯನ್ನು ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಮೇ 19. ಮತದಾನವು ಮೇ 30 ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ನಡೆಯಲಿದೆ. ಮತದಾನ ಮುಗಿದ ನಂತರ ಅದೇ ದಿನ ಮತ ಎಣಿಕೆ ನಡೆಯಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+