ಭೂಮಿಗಾಗಿ ಉದ್ಯೋಗ ಹಗರಣ: ಮಾಲ್ನಲ್ಲಿನ ಪಾಲನ್ನು ನಿರಾಕರಿಸಿದ ತೇಜಸ್ವಿ ಯಾದವ್
ಪಾಟ್ನಾ ಆಗಸ್ಟ್ 24: ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಆಗಸ್ಟ್ 24ರಂದು ಬಿಹಾರದ ಉಪ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ತೇಜಸ್ವಿ ಯಾದವ್ಗೆ ಸಂಬಂಧಿಸಿದ ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದಲ್ಲಿರುವ ಮಾಲ್ ಸೇರಿದಂತೆ 27 ಸ್ಥಳಗಳಲ್ಲಿ ಶೋಧ ನಡೆಸಿತು. ಆದರೆ ಮಾಲ್ನಲ್ಲಿನ ಪಾಲನ್ನು ತೇಜಸ್ವಿ ನಿರಾಕರಿಸಿದ್ದಾರೆ.
ಲಾಲು ಪ್ರಸಾದ್ ಯಾದವ್ ರೈಲ್ವೇ ಸಚಿವರಾಗಿದ್ದಾಗ ಈ ಉದ್ಯೋಗ ಹಗರಣ ನಡೆದಿತ್ತು ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಸಿಬಿಐ ಎಂಎಲ್ಸಿ ಸುನೀಲ್ ಸಿಂಗ್, ರಾಜ್ಯಸಭಾ ಸಂಸದರಾದ ಅಶ್ಫಾಕ್ ಕರೀಂ ಮತ್ತು ಫೈಯಾಜ್ ಅಹ್ಮದ್ ಮತ್ತು ಮಾಜಿ ಎಂಎಲ್ಸಿ ಸುಬೋಧ್ ರೈ ಸೇರಿದಂತೆ ಹಲವಾರು ಆರ್ಜೆಡಿ ನಾಯಕರ ಆವರಣಗಳ ಮೇಲೆ ದಾಳಿ ನಡೆಸಿದೆ. 200 ಕ್ಕೂ ಹೆಚ್ಚು ಮಾರಾಟ ಪತ್ರಗಳನ್ನು ಕೇಂದ್ರ ತನಿಖಾ ಸಂಸ್ಥೆಯು ದಾಳಿಯ ಸಮಯದಲ್ಲಿ ವಶಪಡಿಸಿಕೊಂಡಿದೆ.
ಇದಲ್ಲದೆ, ವೈಶಾಲಿ ಜಿಲ್ಲೆಯ ಆರ್ಜೆಡಿ ಮಾಜಿ ಎಂಎಲ್ಸಿ ಸುಬೋಧ್ ರೈ ಅವರ ನಿವಾಸದಲ್ಲೂ ಶೋಧ ನಡೆಸಲಾಗುತ್ತಿದೆ. ಆರ್ಜೆಡಿ ನಾಯಕರ ಮನೆಗಳ ಮೇಲೆ ಸಿಬಿಐನ ಹಲವು ತಂಡಗಳು ಏಕಕಾಲದಲ್ಲಿ ದಾಳಿ ನಡೆಸಿವೆ. ಮಧುಬನಿಯಲ್ಲಿರುವ ಅಹ್ಮದ್ ಅವರ ಆಸ್ತಿಪಾಸ್ತಿಗಳ ಮೇಲೆ ಕೂಡ ದಾಳಿ ನಡೆಸಲಾಗಿದೆ.

200ಕ್ಕೂ ಹೆಚ್ಚು ಮಾರಾಟ ಪತ್ರಗಳು ಸಿಬಿಐ ವಶ
ಕುತೂಹಲಕಾರಿಯಾಗಿ ಎಫ್ಐಆರ್ ಪ್ರಕಾರ, ಐದು ಮಾರಾಟ ಪತ್ರಗಳನ್ನು ಮಾತ್ರ ಉಲ್ಲೇಖಿಸಲಾಗಿದೆ. ಆದರೆ, ಸಿಬಿಐ 200 ಮಾರಾಟ ಪತ್ರಗಳು ಬಂದಿವೆ. ಸಿಬಿಐ ಎಲ್ಲಾ ದಾಖಲೆಗಳನ್ನು ವಶಪಡಿಸಿಕೊಂಡಿದೆ ಮತ್ತು ಆಭರಣಗಳನ್ನು ವಶಪಡಿಸಿಕೊಂಡಿದೆ.
2008-09ರಲ್ಲಿ ಮುಂಬೈ, ಜಬಲ್ಪುರ, ಕೋಲ್ಕತ್ತಾ, ಜೈಪುರ, ಹಾಜಿಪುರದ ರೈಲ್ವೆ ವಲಯಗಳಲ್ಲಿ ಉದ್ಯೋಗ ನೀಡಿದ 12 ಮಂದಿಯ ಜೊತೆಗೆ ಲಾಲು ಯಾದವ್, ಅವರ ಪತ್ನಿ ರಾಬ್ರಿ ದೇವಿ, ಮಿಸಾ ಭಾರತಿ ಮತ್ತು ಹೇಮಾ ಯಾದವ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.
"2004-2009ರ ಅವಧಿಯಲ್ಲಿ ಲಾಲು ಯಾದವ್ ಅವರು ರೈಲ್ವೆಯ ವಿವಿಧ ವಲಯಗಳಲ್ಲಿ ಗ್ರೂಪ್ "ಡಿ" ಪೋಸ್ಟ್ನಲ್ಲಿ ಬದಲಿ ನೇಮಕಾತಿಗೆ ಬದಲಾಗಿ ತಮ್ಮ ಕುಟುಂಬದ ಸದಸ್ಯರ ಹೆಸರಿನಲ್ಲಿ ಆಸ್ತಿ (ಭೂಮಿ) ವರ್ಗಾವಣೆಯ ರೂಪದಲ್ಲಿ ಹಣದ ಅನುಕೂಲಗಳನ್ನು ಪಡೆದಿದ್ದರು" ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆಂದು ಸ್ಥಳೀಯ ಸುದ್ದಿ ವಾಹಿನಿಗಳು ವರಿದ ಮಾಡಿವೆ.

ಆರೋಪ ನಿರಾಕರಿಸಿದ ತೇಜಸ್ವಿ
ಹಲವಾರು ಪಾಟ್ನಾ ನಿವಾಸಿಗಳು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ತಮ್ಮ ಭೂಮಿಯನ್ನು ಲಾಲು ಯಾದವ್ ಅವರ ಕುಟುಂಬ ಸದಸ್ಯರಿಗೆ ಮತ್ತು ಆರ್ಜೆಡಿ ಮುಖ್ಯಸ್ಥರು ಹಾಗೂ ಅವರ ಕುಟುಂಬದ ನಿಯಂತ್ರಣದಲ್ಲಿರುವ ಖಾಸಗಿ ಕಂಪನಿಗೆ ಮಾರಾಟ ಮಾಡಿದ್ದಾರೆ ಮತ್ತು ಉಡುಗೊರೆಯಾಗಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಭೂಮಿಗಾಗಿ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಳಿ ನಡೆಸಿದ ಗುರುಗ್ರಾಮ್ನಲ್ಲಿರುವ ಮಾಲ್ನಲ್ಲಿ ತನಗೆ ಅಥವಾ ಅವರ ಕುಟುಂಬಕ್ಕೆ ಯಾವುದೇ ಪಾಲು ಇಲ್ಲ ಎಂದು ತೇಜಸ್ವಿ ಯಾದವ್ ನಿರಾಕರಿಸಿದರು.

ಯಾದವ್ ವಂಶಸ್ಥರ ಆರೋಪ
ಮಾಲ್ ಅನ್ನು ಅಭಿವೃದ್ಧಿಪಡಿಸುತ್ತಿರುವ ರಿಯಲ್ ಎಸ್ಟೇಟ್ ಕಂಪನಿಯು ಹರಿಯಾಣ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಮನೋಹರ್ ಲಾಲ್ ಖಟ್ಟರ್ ಅವರ ಸಹಾಯವನ್ನು ಪಡೆದುಕೊಂಡಿದೆ ಎಂದು ಯಾದವ್ ವಂಶಸ್ಥರು ಆರೋಪಿಸಿದ್ದಾರೆ.
"ಅರ್ಬನ್ ಕ್ಯೂಬ್ಸ್ ಮಾಲ್ ವೈಟ್ ಲ್ಯಾಂಡ್ ಕಾರ್ಪೊರೇಷನ್ ಲಿಮಿಟೆಡ್ಗೆ ಸೇರಿದ್ದು, ಬಿಜೆಪಿ ಸಂಸದರೊಬ್ಬರು ಇದರಲ್ಲಿ ಹೂಡಿಕೆ ಮಾಡಿದ್ದಾರೆ. ಕೃಷ್ಣಕುಮಾರ್ ಈ ಮಾಲ್ನ ಪ್ರಸ್ತುತ ಮಾಲೀಕರಾಗಿದ್ದಾರೆ. ಮೇಲಾಗಿ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಆ ಮಾಲ್ ಅನ್ನು ಉದ್ಘಾಟಿಸಿದ್ದಾರೆ. ಈಗ, ಸಿಬಿಐ ಅದಕ್ಕೆ ಉತ್ತರಿಸಬೇಕಾಗಿದೆ. ಇದು ಮಾಲ್ ಮಾಲೀಕರನ್ನು ಸ್ಪಷ್ಟಪಡಿಸಬೇಕು" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಸುನಿಲ್ ಸಿಂಗ್ ಆರೋಪ
ಸಿಬಿಐ ದಾಳಿ ರಾಜಕೀಯ ಪ್ರೇರಿತವಾಗಿದೆ ಎಂದು ಆರ್ಜೆಡಿ ಎಂಎಲ್ಸಿ ಸುನಿಲ್ ಸಿಂಗ್ ಹೇಳಿದ್ದಾರೆ. ಶಾಸ್ತ್ರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ನೂತನ್ ಕಾಂತಿ ಅಪಾರ್ಟ್ಮೆಂಟ್ನಲ್ಲಿರುವ ಸಿಂಗ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆದಿದೆ. ಅಧಿಕಾರದಿಂದ ಕಿತ್ತೊಗೆದು ರಾಜಕೀಯವಾಗಿ ಒಂಟಿಯಾಗಿರುವ ಬಿಜೆಪಿಯು ಪ್ರಬಲ ಏಳು ಪಕ್ಷಗಳ ಆಡಳಿತ 'ಮಹಾಘಟಬಂಧನ್' ವಿರುದ್ಧ ತನ್ನ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿರುವುದರ ಮಧ್ಯೆ ಸಿಬಿಐ ದಾಳಿ ನಡೆದಿದ್ದು ರಾಜಕೀಯವಾಗಿ ಬಹಳ ಚರ್ಚಿತವಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications