ರಾಜ್ಯಸಭೆಗೆ ಸುಶೀಲ್ ಮೋದಿ ನಾಮನಿರ್ದೇಶನದ ಬಗ್ಗೆ ಚಿರಾಗ್ ಮಾತು!
ಪಾಟ್ನಾ, ನವೆಂಬರ್.29: ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಮೋದಿಯವರನ್ನು ರಾಜ್ಯಸಭೆ ಬಿಜೆಪಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿರುವ ಬಗ್ಗೆ ಮೊದಲ ಬಾರಿಗೆ ಲೋಕಜನಶಕ್ತಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಮಾತನಾಡಿದ್ದಾರೆ.
ಲೋಕಜನಶಕ್ತಿ ಪಕ್ಷದ ಸಂಸ್ಥಾಪಕ ರಾಮ್ ವಿಲಾಸ್ ಪಾಸ್ವಾನ್ ನಿಧನದಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ನವೆಂಬರ್.26ರಂದು ಅಧಿಸೂಚನೆ ಹೊರಡಿಸಲಾಗಿದೆ. ಇದರ ಬೆನ್ನಲ್ಲೇ ಬಿಜೆಪಿ ಸುಶೀಲ್ ಮೋದಿ ಅವರನ್ನು ತಮ್ಮ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಿದೆ. ಆ ಮೂಲಕ ಅವರ ಪಾತ್ರ ಮತ್ತು ಅಗತ್ಯತೆ ಬಿಹಾರಕ್ಕೆ ಇಲ್ಲದಾಗಿದೆ. ಅವರಿನ್ನು ಬಿಜೆಪಿಗಾಗಿ ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡಬೇಕಿರುವುದು ಸ್ಪಷ್ಟವಾಗಿದೆ ಎಂದು ಚಿರಾಗ್ ಪಾಸ್ವಾನ್ ಹೇಳಿದ್ದಾರೆ.
2019ರಲ್ಲಿ ರಾಮ್ ವಿಲಾಸ್ ಪಾಸ್ವಾನ್ ಈ ಸ್ಥಾನಕ್ಕೆ ಆಯ್ಕೆಯಾಗಿದ್ದರು. ಪಾಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ರವಿಶಂಕರ್ ಪ್ರಸಾದ್ 2019ರಲ್ಲಿ ಸಂಸದರಾಗಿ ಚುನಾಯಿತರಾಗಿದ್ದರು. ರಾಮ್ ವಿಲಾಸ್ ಪಾಸ್ವಾನ್ ನಿಧನದ ಬಳಿಕ ಅವರ ಪತ್ನಿ ರೀನಾ ಪಾಸ್ವಾನ್ ರಿಗೆ ರಾಜ್ಯಸಭಾ ಸ್ಥಾನವನ್ನು ನೀಡುವ ಬಗ್ಗೆ ಬೇಡಿಕೆ ಸಲ್ಲಿಸಲಾಗಿತ್ತು.

"ಬಿಜೆಪಿ ನಿರ್ಧಾರ ಆಂತರಿಕ ವಿಚಾರ ಎಂದ ಚಿರಾಗ್"
ರಾಜ್ಯಸಭಾ ಸ್ಥಾನವು ಬಿಜೆಪಿಗೆ ಸೇರಿದ್ದಾಗಿದೆ. ಇದೀಗ ತೆರವು ಆಗಿರುವ ಸ್ಥಾನದಲ್ಲಿ ಯಾವ ಅಭ್ಯರ್ಥಿಯನ್ನು ನಿಲ್ಲಿಸಬೇಕು ಎಂಬುದನ್ನು ಬಿಜೆಪಿ ನಿರ್ಧಸಿರುತ್ತದೆ. ಅದು ಆ ಪಕ್ಷದ ಆಂತರಿಕ ವಿಚಾರ ಎಂದು ಲೋಕಜನ ಶಕ್ತಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.
ಮುಂದಿನ ಚುನಾವಣೆಗೆ ಸಿದ್ಧರಾಗಿರಲಿ ಕರೆ:
ಲೋಕಜನಶಕ್ತಿ ಪಕ್ಷದ 20ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಚಿರಾಗ್ ಪಾಸ್ವಾನ್ ಮಾಡಲಾಗಿದ್ದಾರೆ. ಬಿಹಾರದಲ್ಲಿ ಹೊಸ ಸರ್ಕಾರವೇನೋ ರಚನೆಯಾಗಿದೆ. ಆದರೆ ಯಾವ ಸಂದರ್ಭದಲ್ಲಿ ಸರ್ಕಾರ ಬೀಳುತ್ತದೆಯೋ ಹೇಳುವುದಕ್ಕೆ ಸಾಧ್ಯವಿಲ್ಲ. ನಾವು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಂಘಟಿಸುವತ್ತ ಗಮನ ಹರಿಸಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಚಿರಾಗ್ ಪಾಸ್ವಾನ್ ಕರೆ ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications