ನಾನು ಬಿಜೆಪಿ ಬಿಟ್ಟು ಹೊರಟಾಗ ಅಡ್ವಾಣಿ ಕಣ್ಣಲ್ಲಿ ನೀರಿತ್ತು: ಶತ್ರುಘ್ನ ಸಿನ್ಹಾ
ಪಾಟ್ನಾ, ಮೇ 15: "ನಾನು ಬಿಜೆಪಿ ತೊರೆಯುವುದಕ್ಕೂ ಮುನ್ನ ಎಲ್ ಕೆ ಅಡ್ವಾಣಿ ಅವರ ಆಶೀರ್ವಾದ ಪಡೆಯಲು ಹೋಗಿದ್ದೆ. ಆಗ ಅವರ ಕಣ್ಣಲ್ಲಿ ನೀರು ತುಂಬಿತ್ತು" ಎಂದು ಬಿಹಾರದ ಪಾಟ್ನಾ ಸಾಹಿಬ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶತ್ರುಘ್ನ ಸಿನ್ಹಾ ಹೇಳಿದರು.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಎನ್ ಡಿಟಿವಿ ಜೊತೆ ಮಾತನಾಡುತ್ತಿದ್ದ ಅವರು, "ನಾನು ಸರಿಯಾದ ದಿಕ್ಕನ್ನು ಆರಿಸಿಕೊಂಡಿದ್ದೇನೆ. ನನ್ನೊಂದಿಗೆ ಎಲ್ ಕೆ ಅಡ್ವಾಣಿ ಅವರ ಆಶೀರ್ವಾದವಿದೆ. ಇನ್ನೇನು ಬೇಕು? ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತೇನೆ ಎಂದು ಅವರಿಗೆ ಹೇಳಿದಾಗ ಅವರು ನನ್ನನ್ನು ತಡೆಯಲಿಲ್ಲ. ಹೋಗಬೇಡ, ಪಕ್ಷದಲ್ಲೇ ಇರು ಎನ್ನಲೂ ಇಲ್ಲ. ಆದರೆ ಅವರ ಕಣ್ಣಲ್ಲಿ ನೀರು ತುಂಬಿತ್ತು" ಎಂದು ಸಿನ್ಹಾ ಹೇಳಿದರು.
"ಆಯ್ತು ಹೋಗು, ನಾನು ನಿನ್ನನ್ನು ಪ್ರೀತಿಸುತ್ತೇನೆ" ಎಂದು ಅಡ್ವಾಣಿ ನನ್ನ ಬಳಿ ಹೇಳಿದರು. ಅವರು ನನ್ನನ್ನು ಹೋಗಬೇಡ ಎಂದು ತಡೆಯದಿದ್ದರೂ, ಅವರ ಮನಸ್ಸಿನ ದುಃಖ ಅವರ ಕಣ್ಣಲ್ಲಿದ್ದ ನೀರಿನಲ್ಲಿ ಕಾಣುತ್ತಿತ್ತು ಎಂದು ಸಿನ್ಹಾ ಹೇಳದರು.

ಇಪ್ಪತ್ತು ವರ್ಷಗಳ ಹಿಂದೆ ಬಿಜೆಪಿ ಸೇರಿದ್ದ ಸಿನ್ಹಾ, ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೂ ಒಡನಾಡಿದ್ದರು. ಆ ದಿನಗಳನ್ನು ನೆನಪಿಸಿಕೊಂಡ 72 ವರ್ಷ ವಯಸ್ಸಿನ ಸಿನ್ಹಾ, "ಆಗಿನದು ಪ್ರಜಾಪ್ರಭುತ್ವ, ಈಗಿನದು ಸರ್ವಾಧಿಕಾರ. ಈಗಿನ ಬಿಜೆಪಿ ನಾಯಕರು ಪಕ್ಷದ ಹಿರಿಯರನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೆ ಎಂಬುದು ಅಡ್ವಾಣಿ, ವಾಜಪೇಯಿ ಅವರಿಗೆ ನೀಡಿದ ಗೌರವ(!)ವನ್ನು ನೋಡಿದರೆ ಗೊತ್ತಾಗುತ್ತದೆ" ಎಂದು ಸಿನ್ಹಾ ಲೇವಡಿ ಮಾಡಿದರು.
ಇತ್ತೀಚೆಗಷ್ಟೇ ಬಿಜೆಪಿ ತೊರೆದ ಶತ್ರುಘ್ನ ಸಿನ್ಹಾ, ಮೋದಿ ನಾಯಕತ್ವವನ್ನು ಹಲವು ದಿನಗಳಿಂದ ವಿರೋಧಿಸುತ್ತ ಬಂದಿದ್ದರು. ಅವರಿಗೆ ಬಿಜೆಪಿ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಟಿಕೆಟ್ ನೀಡದ ಕಾರಣಕ್ಕೆ ಅವರು ಕಾಂಗ್ರೆಸ್ ನಿಂದ ಅದೇ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಕಣದಲ್ಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications