ಬಿಹಾರ ಮಹಾಘಟಬಂಧನ ಮೈತ್ರಿಕೂಟದಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ
ಪಾಟ್ನಾ, ಅಕ್ಟೋಬರ್ 17: ಬಿಹಾರದಲ್ಲಿ ಕಾಂಗ್ರೆಸ್, ಆರ್ಜೆಡಿ ಸೇರಿದಂತೆ ವಿವಿಧ ಪಕ್ಷಗಳನ್ನು ಒಳಗೊಂಡ ಮಹಾಘಟಬಂಧನ ಇಂದು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಕೃಷಿ ಕಾನೂನು ಹಾಗೂ ಉದ್ಯೋಗದ ಮೇಲೆ ಈ ಪ್ರಣಾಳಿಕೆ ಕೇಂದ್ರೀಕೃತವಾಗಿದೆ. ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಮಾತನಾಡಿ, ಆರ್ಜೆಡಿ ತೇಜಸ್ವಿ ಯಾದವ್ ಅವರ ನೇತೃತ್ವದಲ್ಲಿ ಚುನಾವಣೆಯಲ್ಲಿ ನಾವು ಗೆದ್ದರೆ, ಮೊದಲ ವಿಧಾನಸಭಾ ಅಧಿವೇಶನದಲ್ಲಿಯೇ ಕೇಂದ್ರ ಬಿಡುಗಡೆ ಮಾಡಿರುವ ಮೂರು ಕೃಷಿ ಮಸೂದೆಗಳನ್ನು ರದ್ದುಗೊಳಿಸಲು ಮುಂದಾಗಲಿದೆ.
ಬಿಜೆಪಿಯು ಮೂರು ಮೈತ್ರಿಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದೆ. ಜನರು ನೋಡಬಹುದಾದ ಜನತಾದಳ, ಲೋಕ ಜನಶಕ್ತಿ ಪಕ್ಷ, ಮತ್ತೊಂದು ಓವೈಸಿ ಸಾಹೇಬರು ಎಂದು ಹೇಳಿದರು.

ಕೇಂದ್ರದ ತಂಡವು ಪ್ರವಾಹದಲ್ಲಿ ನಲುಗಿರುವ ಸ್ಥಳಕ್ಕೆ ಇನ್ನೂ ಭೇಟಿ ನೀಡಿಲ್ಲ. ಎಲ್ಲರೂ ತಮ್ಮ ಖುರ್ಚಿಯನ್ನು ಪಡೆಯುವ ಸ್ಪರ್ಧೆಯಲ್ಲಿದ್ದಂತೆ ಕಾಣುತ್ತಿದೆ. ಮಹಾಘಟಬಂಧನದಿಂದ 243 ಸೀಟುಗಳಿಗೆ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತ ಅಕ್ಟೋಬರ್ 28 ರಂದು ನಡೆಯಲಿದೆ. ಫಲಿತಾಂಶ ನವೆಂಬರ್ 10ಕ್ಕೆ ಪ್ರಕಟವಾಗಲಿದೆ.
ಚುನಾವಣಾ ಸಮೀಕ್ಷೆಗಳ ನಿಷೇಧವಿರುವಾಗ ಜ್ಯೋತಿಷಿ, ವಿಶ್ಲೇಷಕರ ಮುನ್ಸೂಚನೆಯನ್ನೂ ಕೂಡ ಪ್ರಸಾರ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಈ ಕುರಿತಂತೆ ನಿಬಂಧನೆಗಳನ್ನು ಹೊರಡಿಸಿರುವ ಚುನಾವಣಾ ಆಯೋಗ, 'ಚುನಾವಣೆ ಸಮೀಕ್ಷೆಗಳ ಮೇಲೆ ನಿರ್ಬಂಧವಿರುವಾಗ ಮಾಧ್ಯಮಗಳಲ್ಲಿ ಜ್ಯೋತಿಷಿಗಳು, ಸಂಖ್ಯಾಶಾಸ್ತ್ರಜ್ಞರು, ವಿಶ್ಲೇಷಕರ ಮೂಲಕ ಸೋಲು ಗೆಲುವಿನ ಮುನ್ಸೂಚನೆಯನ್ನು ಕೂಡ ಪ್ರಸಾರ ಮಾಡುವುದೂ ನಿಯಮಬಾಹಿರ ಎಂದು ಚುನಾವಣಾ ಆಯೋಗ ಗುರುವಾರ ಸ್ಪಷ್ಟಪಡಿಸಿದೆ.
2020ರ ಅಕ್ಟೋಬರ್ 28 ರಂದು (ಬುಧವಾರ) ಬೆಳಿಗ್ಗೆ 7 ಮತ್ತು ನವೆಂಬರ್ 7 ರಂದು ಸಂಜೆ 6.30ರ ನಡುವಿನ ನಿಷೇಧಿತ ಅವಧಿಯಲ್ಲಿ ಫಲಿತಾಂಶಕ್ಕೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮ ಅಥವಾ ಲೇಖನವನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ (ಎಲೆಕ್ಟ್ರಾನಿಕ್-ಮುದ್ರಣ ) ಚುನಾವಣಾ ಆಯೋಗ ಸೂಚಿಸಲಾಗಿದೆ
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications