ಮಧ್ಯಾಹ್ನದ ಬಿಸಿಯೂಟ; ಮಕ್ಕಳ ಮನೆಗೆ ದಿನಸಿ ವಿತರಣೆ
ಪಾಟ್ನಾ, ಜುಲೈ 06 : ಕೊರೊನಾ ವೈರಸ್ ಸೋಂಕಿನ ಭೀತಿಯಿಂದಾಗಿ ಶಾಲೆಗಳು ಮುಚ್ಚಿವೆ. ಶಾಲೆಗಳು ಸದ್ಯಕ್ಕೆ ಆರಂಭವಾಗುವ ಸಾಧ್ಯತೆ ಕಡಿಮೆ ಇದೆ. ಶಾಲೆಗಳಲ್ಲಿ ಬಿಸಿಯೂಟ ಮಾಡುತ್ತಿದ್ದ ಮಕ್ಕಳ ಮನೆಗೆ ದಿನಸಿ ತಲುಪಿಸಲು ಸರ್ಕಾರ ಮುಂದಾಗಿದೆ.
ಸೋಮವಾರ ಬಿಹಾರದ ಶಿಕ್ಷಣ ಇಲಾಖೆ ಜಿಲ್ಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಈ ಕುರಿತು ನಿರ್ದೇಶನ ಕೊಟ್ಟಿದೆ. ಶಾಲೆಗಳಲ್ಲಿ ಬಿಸಿಯೂಟ ಮಾಡುತ್ತಿದ್ದ ಮಕ್ಕಳ ಮನೆಗೆ ದಿನಸಿ ಮತ್ತು ಹಣವನ್ನು ತಲುಪಿಸಲಾಗುತ್ತದೆ.

ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ 1 ರಿಂದ 5ನೇ ತರಗತಿ ವಿದ್ಯಾರ್ಥಿಗಳ ಮನೆಗೆ 8 ಕೆಜಿ ದಿನಸಿ ಮತ್ತು 358 ರೂ.ಗಳನ್ನು ನೀಡಲಾಗುತ್ತದೆ. 6 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ 12 ಕೆಜಿ ದಿನಸಿ ಮತ್ತು 536 ರೂ.ಗಳನ್ನು ನೀಡಲಾಗುತ್ತದೆ.
ಮೇ, ಜೂನ್ ಮತ್ತು ಜುಲೈ ತಿಂಗಳಿಗೆ ದಿನಸಿ ಮತ್ತು ಆಹಾರವನ್ನು ವಿತರಣೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ. ಶಾಲೆಗಳು ಬಂದ್ ಆಗಿದ್ದು, ಮಧ್ಯಾಹ್ನದ ಊಟಕ್ಕಾಗಿ ಮಕ್ಕಳು ಪರದಾಡುತ್ತಿರುವ ಹಲವು ಪ್ರಕರಣಗಳು ರಾಜ್ಯದಲ್ಲಿ ಬೆಳಕಿಗೆ ಬಂದಿತ್ತು.
ಮಕ್ಕಳು ಶಾಲೆಗೆ ಬರುತ್ತಿದ್ದಾಗ ಮಧ್ಯಾಹ್ನದ ಬಿಸಿಯೂಟ ಸಿಗುತ್ತಿತ್ತು. ಆದರೆ, ಲಾಕ್ ಡೌನ್ ಪರಿಣಾಮ ಶಾಲೆಗಳು ಮುಚ್ಚಿದ್ದರಿಂದ ಮಧ್ಯಾಹ್ನದ ಬಿಸಿಯೂಟವಿಲ್ಲದೇ ಮಕ್ಕಳಿಗೆ ಪೌಷ್ಠಿಕವಾದ ಆಹಾರ ಸಿಗುತ್ತಿರಲಿಲ್ಲ. ಇದನ್ನು ಗಮನಿಸಿ ಮನೆಗೆ ದಿನಸಿ ಸರಬರಾಜು ಮಾಡಲು ಸೂಚನೆ ಕೊಡಲಾಗಿದೆ.
ಮನೆಯಲ್ಲಿಯೂ ಸರಿಯಾದ ಆಹಾರ ಸಿಗದೇ ಮಕ್ಕಳು ಭಿಕ್ಷಾಟನೆ, ಕಸ ಸಂಗ್ರಹದಂತಹ ಕೆಲಸದಲ್ಲಿ ತೊಡಗಿರುವ ವರದಿಗಳನ್ನು ಮಾಧ್ಯಮಗಳು ಪ್ರಸಾರ ಮಾಡಿದ್ದವು. ಆದ್ದರಿಂದ, ಸರ್ಕಾರ ಶಾಲೆ ಬಂದ್ ಆಗಿದ್ದರೂ ಮಕ್ಕಳ ಮನೆಗೆ ದಿನಸಿ ತಲುಪಿಸುವ ತೀರ್ಮಾನ ಕೈಗೊಂಡಿದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ












Click it and Unblock the Notifications