ಎನ್ಡಿಎ ಗೆದ್ದಿದ್ದು ಹಣ, ತೋಳ್ಬಲದಿಂದ: ತೇಜಸ್ವಿ ಯಾದವ್ ಆರೋಪ
ಪಟ್ನಾ, ನವೆಂಬರ್ 12: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎಗೆ ತೀವ್ರ ಪೈಪೋಟಿ ನೀಡಿದ ಬಳಿಕ ತೇಜಸ್ವಿ ಯಾದವ್ ನೇತೃತ್ವದ ಆರ್ಜೆಡಿ ವಿರೋಚಿತ ಸೋಲು ಕಂಡಿದೆ. ತಮಗೆ ಜನರ ಬೆಂಬಲ ಸಿಕ್ಕಿದೆ. ಆದರೆ ಎನ್ಡಿಎಗೆ ಹಣ, ತೋಳ್ಬಲ ಮತ್ತು ವಂಚನೆಯ ಮೂಲಕ ಗೆಲುವು ಸಾಧಿಸಿದೆ ಎಂದು ತೇಜಸ್ವಿ ಯಾದವ್ ಆರೋಪಿಸಿದ್ದಾರೆ.
ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿತೀಶ್ ಕುಮಾರ್ ಅವರ ಜೆಡಿಯು ಮೂರನೇ ಸ್ಥಾನಕ್ಕೆ ಕುಸಿದಿದೆ. ಅವರಿಗೆ ಆತ್ಮಸಾಕ್ಷಿ ಎಂಬುದು ಇನ್ನೂ ಇದ್ದರೆ ಮುಖ್ಯಮಂತ್ರಿ ಕುರ್ಚಿಯ ಮೇಲಿನ ತಮ್ಮ ಆಸೆಯನ್ನು ಬಿಟ್ಟುಬಿಡಬೇಕು ಎಂದು ತೇಜಸ್ವಿ ಹೇಳಿದ್ದಾರೆ.
'ನಾವು ಸುಮಾರು 20 ಕ್ಷೇತ್ರಗಳಲ್ಲಿ ಅತ್ಯಲ್ಪ ಮತಗಳ ಅಂತರದಲ್ಲಿ ಸೋತಿದ್ದೇವೆ. ಅನೇಕ ಕ್ಷೇತ್ರಗಳಲ್ಲಿ ಸುಮಾರು 900ಕ್ಕೂ ಅಧಿಕ ಅಂಚೆ ಮತಪತ್ರಗಳನ್ನು ಅಸಿಂಧು ಎಂದು ಪರಿಗಣಿಸಲಾಗಿದೆ' ಎಂದು ಅವರು ಆರೋಪಿಸಿದ್ದಾರೆ.

'ನಾವು ಕಡಿಮೆ ಅಂತರದಿಂದ ಸೋಲು ಕಂಡ ಕ್ಷೇತ್ರಗಳಲ್ಲಿ ಅಂಚೆ ಮತಪತ್ರಗಳ ಮರುಎಣಿಕೆ ಮಾಡುವಂತೆ ನಾವು ಒತ್ತಾಯಿಸುತ್ತೇವೆ. ಏಕೆಂದರೆ ಅಂಚೆಮತಪತ್ರಗಳನ್ನು ಆರಂಭದಲ್ಲಿ ಎಣಿಕೆ ಮಾಡಿಲ್ಲ. ಬದಲಾಗಿ ಕೊನೆಯಲ್ಲಿ ಎಣಿಕೆ ಮಾಡಲಾಗಿದೆ' ಎಂದು ಅವರು ಹೇಳಿದ್ದಾರೆ.
ಎನ್ಡಿಎ ಮೈತ್ರಿಕೂಟವು ಮಹಾಘಟಬಂಧನಕ್ಕಿಂತ 15 ಹೆಚ್ಚು ಸೀಟುಗಳಲ್ಲಿ ಗೆಲ್ಲಲು ಯಶಸ್ವಿಯಾದರೂ ಕೇವಲ 12,270 ಅಧಿಕ ಮತಗಳನ್ನಷ್ಟೇ ಪಡೆಯಲು ಯಶಸ್ವಿಯಾಗಿರುವುದು ಅಚ್ಚರಿ ಮೂಡಿಸುತ್ತದೆ ಎಂದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications