ಮೆದುಳು ಜ್ವರ, ಬಿಹಾರದಿಂದ ಬರುವ ತರಕಾರಿ,ಹಣ್ಣುಗಳಿಗೆ ನೇಪಾಳ ಬ್ರೇಕ್
ಮುಜಾಫರ್ಪುರ್, ಜೂನ್ 28: ಬಿಹಾರದಿಂದ ಬರುವ ವಾಹನಗಳು, ತರಕಾರಿ, ಹಣ್ಣುಗಳಿಗೆ ನೇಪಾಳ ಸರ್ಕಾರ ಬ್ರೇಕ್ ಹಾಕಿದೆ.
ಬಿಹಾರದಲ್ಲಿ ಅಕ್ಯೂಟ್ ಎನ್ಸೆಫಾಲಿಟಿ ಸಿಂಡ್ರೋಮ್ ಎಂಬ ಮೆದುಳಿಗೆ ಸಂಭಂಧಿಸಿದ ಕಾಯಿಲೆಯಿಂದ ಇದುವರೆಗೆ 244ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿದ್ದು ಆ ಭೀತಿಯಿಂದ ಅಲ್ಲಿಂದ ರಫ್ತಾಗುತ್ತಿದ್ದ ಎಲ್ಲಾ ವಸ್ತುಗಳಿಗೂ ತಡೆ ಹಿಡಿಯಲಾಗಿದೆ.
ತರಕಾರಿ, ಹಣ್ಣುಗಳನ್ನು ಹೊತ್ತು ಹೊರಟಿದ್ದ 100 ಟ್ರಕ್ಗಳು ನೇಪಾಳ ಗಡಿ ಪ್ರವೇಶಿಸಿ ಹಿಂದಿರುಗಿ ಬಂದಿವೆ. ಟ್ರಕ್ ಡ್ರೈವರ್ಗಳು ಮಾವು, ಬಾಳೆಹಣ್ಣನ್ನು ಸಿಕ್ಕಿದ್ದಷ್ಟು ಹಣಕ್ಕೆ ಮಾರಾಟ ಮಾಡುತ್ತಿವೆ.

1-10 ವರ್ಷದೊಳಗಿನ ಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಮಳೆಗಾಲ ಆರಂಭವಾಗುವವರೆಗೂ ಈ ರೋಗ ಕಡಿಮೆಯಾಗುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ ನಾಲ್ಕು ಲಕ್ಷ ರೂ ಸಹಾಯಧನ ನೀಡುವುದಾಗಿ ಸಚಿವರು ತಿಳಿಸಿದ್ದಾರೆ.
ಮುಜಾಫರ್ಪುರದಲ್ಲಿ 131 ಮಂದಿ, ಎಸ್ಕೆಎಂಸಿಎಚ್ನಲ್ಲಿ 111, ಕೇಜ್ರಿವಾಲ್ ಆಸ್ಪತ್ರೆಯಲ್ಲಿ 20 ಮಕ್ಕಳು ಮೃತಪಟ್ಟಿದ್ದಾರೆ. ಹೆಚ್ಚಿನ ತಾಪಮಾನವೇ ಈ ರೋಗಕ್ಕೆ ಕಾರಣವಾಗಿದೆ.
ಹಾಗಾಗಿ ಮುಂಗಾರು ಪ್ರವೇಶವಾಗುವವರೆಗೂ ಮಕ್ಕಳನ್ನು ಮನೆಯಿಂದ ಹೊರಗಡೆ ಕಳುಹಿಸದಿದ್ದರೆ ಒಳಿತು. ಇದೀಗ ಈ ರೋಗ ಛತ್ತೀಸ್ಗಢಕ್ಕೂ ಕಾಲಿಟ್ಟಿದೆ. ಶುಕ್ರವಾರ ಛತ್ತೀಸ್ಗಢದಲ್ಲಿ ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ.
ಛತ್ತೀಸ್ಗಢದ ಜಗ್ದಲ್ಪುರ ಜಿಲ್ಲೆಯಲ್ಲಿ ಮೆದುಳು ಜ್ವರ ಕಾಣಿಸಿಕೊಂಡಿದೆ. ನಾಲ್ಕು ಮತ್ತು ಏಳು ವರ್ಷದ ಮೂರು ಮಕ್ಕಳು ಮೆದುಳು ಜ್ವರದಿಂದ ಬಳಲುತ್ತಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications