Breaking: ನಿತೀಶ್ ಪ್ರಬಲ ಪ್ರಧಾನಿ ಅಭ್ಯರ್ಥಿಯಾಗಬಲ್ಲರು; ತೇಜಸ್ವಿ
ಪಾಟ್ನಾ, ಆಗಸ್ಟ್ 21: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಧಾನಿ ಅಭ್ಯರ್ಥಿಯಾಗಿ ಹೊರಹೊಮ್ಮಬಹುದು ಎಂಬ ಸುದ್ದಿಯ ನಡುವೆಯೇ ಆರ್ಜೆಡಿ ನಾಯಕ ತೇಜಸ್ವಿ ಯಾದವ್, ಪ್ರತಿಪಕ್ಷಗಳು ಪರಿಗಣಿಸಿದರೆ, ಜೆಡಿಯು ನಾಯಕ "ಪ್ರಬಲ ಅಭ್ಯರ್ಥಿ" ಎಂದು ಭಾನುವಾರ ಹೇಳಿದ್ದಾರೆ.
ಜೆಡಿಯು, ಆರ್ಜೆಡಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಒಗ್ಗೂಡಿದ ಮಹಾಘಟಬಂಧನ್ ಸರಕಾರವು ಅಧಿಕಾರಕ್ಕೆ ಬಂದಿರುವುದು "ಪ್ರತಿಪಕ್ಷಗಳ ಒಗ್ಗಟ್ಟಿನ ಉತ್ತಮ ಮುನ್ಸೂಚನೆ" ಎಂದು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ತೇಜಸ್ವಿ ಯಾದವ್ ಹೇಳಿದರು.
"ಬಹುತೇಕ ವಿರೋಧ ಪಕ್ಷಗಳು ದೇಶದ ಮುಂದಿರುವ ದೊಡ್ಡ ಸವಾಲನ್ನು ಗುರುತಿಸಿವೆ. ಭಾರತೀಯ ಸಮಾಜ ಹಾಗೂ ರಾಜಕೀಯ ವಲಯದಿಂದ ಎಲ್ಲಾ ವೈವಿಧ್ಯತೆಯನ್ನು ಹೊರಹಾಕಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿಗೆ ಹಣ, ಮಾಧ್ಯಮ ಮತ್ತು ಆಡಳಿತಾತ್ಮಕ ಯಂತ್ರ ಬಲವಿದೆ" ಎಂದು ಆರೋಪಿಸಿದರು.

ಇದು ಪ್ರಾದೇಶಿಕ ಪ್ರಾತಿನಿಧ್ಯ, ಸಾಮಾಜಿಕ ನ್ಯಾಯ ಮತ್ತು ರಾಜ್ಯಗಳ ಮಟ್ಟದಲ್ಲಿ ಅಭಿವೃದ್ಧಿ ಬಗೆಗಿನ ಸಮಸ್ಯೆಗಳ ಪ್ರಶ್ನೆಯಾಗಿದೆ ಎಂದು ತೇಜಸ್ವಿ ಯಾದವ್ ಹೇಳಿದರು.
2024 ರ ಚುನಾವಣೆಗೆ ಪ್ರಧಾನಿ ಅಭ್ಯರ್ಥಿಯಾಗಲು ನಿತೀಶ್ ಕುಮಾರ್ ಸೂಕ್ತರೇ ಎಂಬ ಪ್ರಶ್ನೆಗೆ, "ನಾನು ಈ ಪ್ರಶ್ನೆಯನ್ನು ಗೌರವಾನ್ವಿತ ನಿತೀಶ್ ಜಿ ಅವರಿಗೆ ಬಿಡುತ್ತೇನೆ. ಆದರೆ ನಾನು ಇಡೀ ವಿರೋಧ ಪಕ್ಷದ ಪರವಾಗಿ ಮಾತನಾಡಲು ಸಾಧ್ಯವಿಲ್ಲ. ಪರಿಗಣಿಸಿದರೆ, ಗೌರವಾನ್ವಿತ ನಿತೀಶ್ ಜಿ ಖಂಡಿತವಾಗಿಯೂ ಪ್ರಬಲ ಅಭ್ಯರ್ಥಿಯಾಗಬಹುದು" ಎಂದರು.
'ಕಳೆದ 50 ವರ್ಷಗಳಿಂದ ನಿತೀಶ್ ಕುಮಾರ್ ಅವರು ಸಾಮಾಜಿಕ ಮತ್ತು ರಾಜಕೀಯ ಕಾರ್ಯಕರ್ತರಾಗಿದ್ದಾರೆ, ಜೆಪಿ ಮತ್ತು ಮೀಸಲಾತಿ ಚಳವಳಿಗಳಲ್ಲಿ ಭಾಗವಹಿಸಿದ್ದಾರೆ. ಅವರು 37 ವರ್ಷಗಳಿಗೂ ಹೆಚ್ಚು ಸಂಸದೀಯ ಮತ್ತು ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ. ಈ ನೆಲದ ಮೇಲೆ ಮತ್ತು ಅವರ ಗೆಳೆಯರಲ್ಲಿ ಅಪಾರವಾದ ಅಭಿಮಾನವನ್ನು ಹೊಂದಿದ್ದಾರೆ" ಎಂದು ಆರ್ಜೆಡಿ ನಾಯಕ ಹೇಳಿದರು.

2013 ಮತ್ತು 2017 ರ ನಡುವಿನ ಅವಧಿಯನ್ನು ಹೊರತುಪಡಿಸಿ 1996 ರಿಂದ ಅವರ ಮಿತ್ರ ಪಕ್ಷವಾದ ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದ ನಿತೀಶ್ ಕುಮಾರ್ ಅವರ ನಿರ್ಧಾರವು ಅವರು ಪ್ರಧಾನಿ ಅಭ್ಯರ್ಥಿಯಾಗಲು ಬಯಸುತ್ತಿದ್ದಾರೆ ಎಂಬ ಊಹಾಪೋಹಗಳಿಗೆ ಉತ್ತೇಜನ ನೀಡಿದೆ.
ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡ ಜೆಡಿಯು ನಾಯಕ ನಿತೀಶ್ ಕುಮಾರ್, ಆರ್ಜೆಡಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಸೇರಿ ಸರಕಾರ ರಚಿಸಿದ್ದಾರೆ. ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications