Breaking: ನಿತೀಶ್ ಪ್ರಬಲ ಪ್ರಧಾನಿ ಅಭ್ಯರ್ಥಿಯಾಗಬಲ್ಲರು; ತೇಜಸ್ವಿ
ಪಾಟ್ನಾ, ಆಗಸ್ಟ್ 21: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಧಾನಿ ಅಭ್ಯರ್ಥಿಯಾಗಿ ಹೊರಹೊಮ್ಮಬಹುದು ಎಂಬ ಸುದ್ದಿಯ ನಡುವೆಯೇ ಆರ್ಜೆಡಿ ನಾಯಕ ತೇಜಸ್ವಿ ಯಾದವ್, ಪ್ರತಿಪಕ್ಷಗಳು ಪರಿಗಣಿಸಿದರೆ, ಜೆಡಿಯು ನಾಯಕ "ಪ್ರಬಲ ಅಭ್ಯರ್ಥಿ" ಎಂದು ಭಾನುವಾರ ಹೇಳಿದ್ದಾರೆ.
ಜೆಡಿಯು, ಆರ್ಜೆಡಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಒಗ್ಗೂಡಿದ ಮಹಾಘಟಬಂಧನ್ ಸರಕಾರವು ಅಧಿಕಾರಕ್ಕೆ ಬಂದಿರುವುದು "ಪ್ರತಿಪಕ್ಷಗಳ ಒಗ್ಗಟ್ಟಿನ ಉತ್ತಮ ಮುನ್ಸೂಚನೆ" ಎಂದು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ತೇಜಸ್ವಿ ಯಾದವ್ ಹೇಳಿದರು.
"ಬಹುತೇಕ ವಿರೋಧ ಪಕ್ಷಗಳು ದೇಶದ ಮುಂದಿರುವ ದೊಡ್ಡ ಸವಾಲನ್ನು ಗುರುತಿಸಿವೆ. ಭಾರತೀಯ ಸಮಾಜ ಹಾಗೂ ರಾಜಕೀಯ ವಲಯದಿಂದ ಎಲ್ಲಾ ವೈವಿಧ್ಯತೆಯನ್ನು ಹೊರಹಾಕಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿಗೆ ಹಣ, ಮಾಧ್ಯಮ ಮತ್ತು ಆಡಳಿತಾತ್ಮಕ ಯಂತ್ರ ಬಲವಿದೆ" ಎಂದು ಆರೋಪಿಸಿದರು.

ಇದು ಪ್ರಾದೇಶಿಕ ಪ್ರಾತಿನಿಧ್ಯ, ಸಾಮಾಜಿಕ ನ್ಯಾಯ ಮತ್ತು ರಾಜ್ಯಗಳ ಮಟ್ಟದಲ್ಲಿ ಅಭಿವೃದ್ಧಿ ಬಗೆಗಿನ ಸಮಸ್ಯೆಗಳ ಪ್ರಶ್ನೆಯಾಗಿದೆ ಎಂದು ತೇಜಸ್ವಿ ಯಾದವ್ ಹೇಳಿದರು.
2024 ರ ಚುನಾವಣೆಗೆ ಪ್ರಧಾನಿ ಅಭ್ಯರ್ಥಿಯಾಗಲು ನಿತೀಶ್ ಕುಮಾರ್ ಸೂಕ್ತರೇ ಎಂಬ ಪ್ರಶ್ನೆಗೆ, "ನಾನು ಈ ಪ್ರಶ್ನೆಯನ್ನು ಗೌರವಾನ್ವಿತ ನಿತೀಶ್ ಜಿ ಅವರಿಗೆ ಬಿಡುತ್ತೇನೆ. ಆದರೆ ನಾನು ಇಡೀ ವಿರೋಧ ಪಕ್ಷದ ಪರವಾಗಿ ಮಾತನಾಡಲು ಸಾಧ್ಯವಿಲ್ಲ. ಪರಿಗಣಿಸಿದರೆ, ಗೌರವಾನ್ವಿತ ನಿತೀಶ್ ಜಿ ಖಂಡಿತವಾಗಿಯೂ ಪ್ರಬಲ ಅಭ್ಯರ್ಥಿಯಾಗಬಹುದು" ಎಂದರು.
'ಕಳೆದ 50 ವರ್ಷಗಳಿಂದ ನಿತೀಶ್ ಕುಮಾರ್ ಅವರು ಸಾಮಾಜಿಕ ಮತ್ತು ರಾಜಕೀಯ ಕಾರ್ಯಕರ್ತರಾಗಿದ್ದಾರೆ, ಜೆಪಿ ಮತ್ತು ಮೀಸಲಾತಿ ಚಳವಳಿಗಳಲ್ಲಿ ಭಾಗವಹಿಸಿದ್ದಾರೆ. ಅವರು 37 ವರ್ಷಗಳಿಗೂ ಹೆಚ್ಚು ಸಂಸದೀಯ ಮತ್ತು ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ. ಈ ನೆಲದ ಮೇಲೆ ಮತ್ತು ಅವರ ಗೆಳೆಯರಲ್ಲಿ ಅಪಾರವಾದ ಅಭಿಮಾನವನ್ನು ಹೊಂದಿದ್ದಾರೆ" ಎಂದು ಆರ್ಜೆಡಿ ನಾಯಕ ಹೇಳಿದರು.

2013 ಮತ್ತು 2017 ರ ನಡುವಿನ ಅವಧಿಯನ್ನು ಹೊರತುಪಡಿಸಿ 1996 ರಿಂದ ಅವರ ಮಿತ್ರ ಪಕ್ಷವಾದ ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದ ನಿತೀಶ್ ಕುಮಾರ್ ಅವರ ನಿರ್ಧಾರವು ಅವರು ಪ್ರಧಾನಿ ಅಭ್ಯರ್ಥಿಯಾಗಲು ಬಯಸುತ್ತಿದ್ದಾರೆ ಎಂಬ ಊಹಾಪೋಹಗಳಿಗೆ ಉತ್ತೇಜನ ನೀಡಿದೆ.
ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡ ಜೆಡಿಯು ನಾಯಕ ನಿತೀಶ್ ಕುಮಾರ್, ಆರ್ಜೆಡಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಸೇರಿ ಸರಕಾರ ರಚಿಸಿದ್ದಾರೆ. ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications