ರಾಷ್ಟ್ರಪತಿ ಅಭ್ಯರ್ಥಿ: ವದಂತಿ ತಳ್ಳಿ ಹಾಕಿದ ನಿತೀಶ್ ಕುಮಾರ್
ಪಾಟ್ನಾ, ಫೆಬ್ರವರಿ 24: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಷ್ಟ್ರಪತಿ ಅಭ್ಯರ್ಥಿ ಎಂಬ ವದಂತಿಯನ್ನು ತಳ್ಳಿ ಹಾಕಿದ್ದಾರೆ. ಸಿಎಂ ನಿತೀಶ್ ಕುಮಾರ್ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿ ಎಂಬುದರ ಕುರಿತಂತೆ ಚರ್ಚೆಗಳು ಹೆಚ್ಚಾಗಿ ನಡೆಯುತ್ತಿದ್ದು, ಇದರ ನಡುವೆ ನಿತೀಶ್ ಎದ್ದಿರುವ ವದಂತಿಗಳನ್ನು ತಳ್ಳಿ ಹಾಕಿದ್ದಾರೆ.
ಬಿಹಾರದ ಜಮುಯಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಇವುಗಳನ್ನು ಕೇಳಿ ನನಗೆ ಆಶ್ಚರ್ಯವಾಗುತ್ತಿದೆ. ನಮ್ಮ ಪಕ್ಷದ ನಾಯಕರು ಸುಮ್ಮನೇ ಹಾಗೆ ಮಾತನಾಡುತ್ತಾರೆ. ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಈ ಎಲ್ಲಾ ವಿಷಯಗಳ ಬಗ್ಗೆ ನಮ್ಮ ಮನಸ್ಸಿನಲ್ಲಿ ಯಾವುದೇ ಕಲ್ಪನೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಪ್ರಸ್ತುತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಈ ವರ್ಷದ ಜುಲೈನಲ್ಲಿ ಕೊನೆಗೊಳ್ಳಲಿದೆ. ಇದರಿಂದಾಗಿ ಮುಂದಿನ ಅಧ್ಯಕ್ಷರ ಆಯ್ಕೆಯ ಊಹಾಪೋಹಗಳು ಜೋರಾಗಿವೆ. ಈ ನಡುವೆ ಬಿಹಾರ ಸಿಎಂ ನಿತೀಶ್ ಕುಮಾರ್ ವಿಪಕ್ಷಗಳಿಂದ ರಾಷ್ಟ್ರಪತಿ ಅಭ್ಯರ್ಥಿಯಾಗುವ ಚರ್ಚೆ ತೀವ್ರಗೊಂಡಿದೆ.

ಈಗಾಗಲೇ ಹಲವು ಬಿಜೆಪಿ ವಿರೋಧಿ ರಾಜಕೀಯ ಪಕ್ಷಗಳು ಈ ಕೆಲಸದಲ್ಲಿ ತೊಡಗಿವೆ. ಬಿಜೆಪಿ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಕಾಂಗ್ರೆಸ್ ಹೊರತು ಪಡಿಸಿ ಇತರ ಹಲವು ವಿರೋಧ ಪಕ್ಷಗಳ ತಂತ್ರವಾಗಿದ್ದು, ಕಾಂಗ್ರೆಸ್ ಕೂಡ ಇದಕ್ಕೆ ಬಲವಂತವಾಗಿ ಬೆಂಬಲ ನೀಡುತ್ತಿದೆ ಎಂಬ ವಾದ ಕೇಳಿ ಬರುತ್ತಿದೆ.
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿಯಾದ ನಂತರ ಚರ್ಚೆ ತೀವ್ರಗೊಂಡಿದೆ. ಆದರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತ್ರ ಇದನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ.
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗೆ ಹೊಂದಿರುವ ಸಖ್ಯ ದೊರೆದರೆ ಮಾತ್ರ ಮುಂದಿನ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಪರಿಗಣಿಸಬಹುದು ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಹೇಳಿದ್ದರು.
ಬಿಜೆಪಿಯು ಈಗ ನಡೆಯುತ್ತಿರುವ ಉತ್ತರ ಪ್ರದೇಶ, ಉತ್ತರಾಖಂಡ್, ಪಂಜಾಬ್, ಗೋವಾ ಹಾಗೂ ಮಣಿಪುರ ಚುನಾವಣೆಗಳಲ್ಲಿ ಸೋಲು ಅನುಭವಿಸಲಿದೆ ಎಂದಿದ್ದರು. ಉತ್ತರ ಪ್ರದೇಶದಲ್ಲಿ 403 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ 150ಕ್ಕಿಂತ ಕಡಿಮೆ ಸ್ಥಾನ ಗಳಿಸಲಿದೆ ಎಂದು ಹೇಳಿದ್ದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications