ಬಿಜೆಪಿಗೆ ಮತ್ತೊಮ್ಮೆ ಭಾರೀ ಆಘಾತ ನೀಡಿದ ಕುಶ್ವಾಹ ನಡೆ
Recommended Video

ಪಾಟ್ನಾ, ಡಿಸೆಂಬರ್ 20: ಇತ್ತೀಚೆಗಷ್ಟೇ ಎನ್ ಡಿಎ ಮೈತ್ರಿಕೂಟದಿಂದ ಹಿಂದೆ ಸರಿದು ಆಘಾತ ನೀಡಿದ್ದ ರಾಷ್ಟ್ರೀಯ ಲೋಕ ಸಮತಾ ಪಕ್ಷದ ಮುಖಂಡ ಉಪೇಂದ್ರ ಕುಶ್ವಾಹ ಮಹಾಮೈತ್ರಿಕೂಟದೊಂದಿಗೆ ಕೈಜೋಡಿಸುವ ಸೂಚನೆ ನೀಡುವ ಮೂಲಕ ಮತ್ತೊಮ್ಮೆ ಭಾರೀ ಆಘಾತ ನೀಡಿದ್ದಾರೆ.
ಎಎನ್ ಐ ನ್ಯೂಸ್ ಏಜೆನ್ಸಿಗೆ ಅವರು ನೀಡಿದ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬದಲಿಸಿ, ಪ್ರಧಾನಿಯಾಗುವ ಪ್ರಬುದ್ಧ ನಾಯಕ ರಾಹುಲ್ ಗಾಂಧಿ ಎಂದು ಕಾಂಗ್ರೆಸ್ ಅಧ್ಯಕ್ಷರನ್ನು ಹಾಡಿ ಹೊಗಳಿದ್ದಾರೆ.
'ಎನ್ ಡಿಎ ಜೊತೆಗಿರುವ ಹಲವು ನಾಯಕರು ದುರಹಂಕಾರಿಗಳು. ಅದರಲ್ಲೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ದುರಂಹಂಕಾರವೇ ನಾನು ಎನ್ ಡಿಎ ತೊರೆಯಲು ಮುಖ್ಯ ಕಾರಣ' ಎಂದು ಅವರು ಹೇಳಿದರು.
ಕೇಂದ್ರ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದ ಕುಶ್ವಾಹ ಅವರ ಈ ಹೇಳಿಕೆ ಎನ್ ಡಿಎ ಸರ್ಕಾರಕ್ಕೆ ತಲೆನೋವು ತರಿಸಿದೆ. ಲೋಕಸಭಾ ಚುನಾವಣೆಯ ಹೊತ್ತಲ್ಲಿ ಎನ್ ಡಿಎ ಯಿಂದ ಹೊರಹೋಗಿದ್ದಲ್ಲದೆ ಮಹಾಮೈತ್ರಿಕೂಟದೊಂದಿಗೆ ಕೈಜೋಡಿಸುವ ಸೂಚನೆ ನೀಡಿದ್ದು ಬಿಜೆಪಿಗೆ ಇರಿಸುಮುರಿಸುಂಟು ಮಾಡಿದೆ.

ಎನ್ ಡಿಎ ಯಿಂದ ಹೊರಬನ್ನಿ
ಎನ್ ಡಿಎ ಯ ಜೊತೆ ಗುರುತಿಸಿಕೊಂಡಿರುವ ಹಲವು ಪಕ್ಷಗಳು ಈ ಮೈತ್ರಿಕೂಟದಿಂದ ಹೊರಬರುವುದು ಲೇಸು ಎಂದಿರುವ ಕುಶ್ವಾಹ ಈಗಾಗಲೇ ಎನ್ ಡಿಎ ವಿರುದ್ಧ ತಮ್ಮ ಯುದ್ಧ ಆರಂಭಿಸಿದ್ದಾರೆ. ಅದಕ್ಕೆ ಪೂರಕವೆಂಬಂತೆ ಲೋಕ ಜನತಾ ಪಕ್ಷದ ನಾಯಕ ರಾಮ್ ವಿಲಾಸ್ ಪಾಸ್ವಾನ್ ಸಹ ಬಿಜೆಪಿಗೆ ಡೆಡ್ ಲೈನ್ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಎಲ್ ಜಿಪಿ ಹಾಕಿರುವ ಬೇಡಿಕೆಯನ್ನು ಬಿಜೆಪಿ ಒಪ್ಪಿಕೊಳ್ಳದೆ ಇದ್ದರೆ ಡಿಸೆಂಬರ್ 31 ರ ನಂತರ ಎಲ್ ಜಿಪಿ ಸಹ ಎನ್ ಡಿಎ ಯಿಂದ ದೂರ ಸರಿಯುವ ಸೂಚನೆ ನೀಡಿದೆ.

ಕುಶ್ವಾಶ ರಾಜೀನಾಮೆಗೆ ಕಾರಣ
ನಾಲ್ಕೂವರೆ ವರ್ಷಗಳಿಂದ ಬಿಜೆಪಿ ನೇತೃತ್ವದ ಎನ್ ಎನ್ ಡಿಎ ಜೊತೆ ಗುರುತಿಸಿಕೊಂಡಿದ್ದ ಕುಶ್ವಾಹ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ರಾಜ್ಯ ಸಚಿವರೂ ಆಗಿದ್ದರು. ಬಿಹಾರದಲ್ಲಿ ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯ ಕುರಿತು ನಡೆದ ಚರ್ಚೆಯಲ್ಲಿ ತಮ್ಮನ್ನು, ತಮ್ಮ ಪಕ್ಷವನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎಂದು ಆರೋಪಿಸಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ರಾಹುಲ್ ಗೆ ಪ್ರಧಾನಿ ಪಟ್ಟ?
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಪ್ರಬುದ್ಧ ನಾಯಕ. ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಲಿಸಿ, ಪ್ರಧಾನಿಯಾಗುವ ಸಾಮರಥ್ಯ ಅವರಿಗಿದೆ ಎಂದು ಕುಶ್ವಾಹ ರಾಹುಲ್ ಗಾಂಧಿ ಅವರನ್ನು ಹಾಡಿ ಹೊಗಳುವ ಮೂಲಕ ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಮೋದಿ ಸರ್ಕಾರದಿಂದ ಭ್ರಮನಿರಸನ
"ಕೇಂದ್ರ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಜನರು ಮೋದಿ ಸರ್ಕಾರದ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಅದು ಈ ದೇಶದ ಜನರಿಗೆ ಭ್ರಮನಿರಸನವನ್ನುಂತು ಮಾಡಿದೆ. ರೈತರನ್ನು ಕಡೆಗಣಿಸಲಾಗಿದೆ, ಉದ್ಯೋಗಾವಕಾಶ ಸೃಷ್ಟಿಯಾಗಿಲ್ಲ. ಆದ್ದರಿಂದ ದೇಶ ಸದ್ಯದಲ್ಲೇ ಬದಲಾವಣೆಯನ್ನು ಕಾಣಲಿದೆ" ಎಂದು ಕುಶ್ವಾಹ ಹೇಳಿದ್ದಾರೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications