ಮುಜಾಫರ್ ಪುರ್ ಪ್ರಕರಣ: ಬಿಹಾರದ ನಿತೀಶ್ ಸರಕಾರಕ್ಕೆ ಚಾಟಿ ಏಟು
ಪಾಟ್ನಾ (ಬಿಹಾರ), ಫೆಬ್ರವರಿ 16:ಮುಜಾಫರ್ ಪುರ್ ಬಾಲಿಕಾ ಮಂದಿರದ ಪ್ರಕರಣದ ವಿಚಾರಣೆಯನ್ನು ನಿಗದಿತ ಆವಧಿಯೊಳಗೆ ಪೂರ್ಣಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಹಾರ ಸರಕಾರ ಕುರುಡಾಗಿ ವರ್ತಿಸಿದೆ ಎಂದು ಆರೋಪಿಸಲಾಗಿತ್ತು. ಮುಜಾಫರ್ ಪುರ್ ನ ಪೋಕ್ಸೊ ವಿಶೇಷ ನ್ಯಾಯಾಲಯವು ಅರ್ಜಿಯನ್ನು ಪರಾಮರ್ಶಿಸಲು ಸಿಬಿಐಗೆ ವರ್ಗಾಯಿಸಿದೆ.
ಮುಜಾಫರ್ ಪುರ್ ಪ್ರಕರಣದಲ್ಲಿ ಆರೋಪಿ ಆಗಿರುವ ಅಶ್ವನಿ ಕುಮಾರ್ ಅರ್ಜಿ ಹಾಕಿದ್ದರು. ವೈದ್ಯನಂತೆ ಅಶ್ವನಿ ಕುಮಾರ್ ಬಾಲಿಕಾ ಮಂದಿರಕ್ಕೆ ಭೇಟಿ ನೀಡಿ, ಲೈಂಗಿಕ ದೌರ್ಜನ್ಯ ನಡೆಸುವ ಮುನ್ನ ಮತ್ತು- ಉದ್ದೀಪನ ಬರುವ ಔಷಧಗಳನ್ನು ನೀಡುವುದರ ನಿಗಾ ಮಾಡುತ್ತಿದ್ದರು ಎಂಬ ಆರೋಪ ಇದೆ.
ಟಾಟಾ ಇನ್ ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ ನಿಂದ ಈ ಬಾಲಿಕಾ ಮಂದಿರದ ಬಗ್ಗೆ ಭೀಕರ ಸತ್ಯಗಳನ್ನು ಬೆಳಕಿಗೆ ತಂದ ನಂತರವೂ ರಾಜ್ಯ ಸರಕಾರದಿಂದ ಹೋಗುತ್ತಿದ್ದ ಅನುದಾನ ನಿಂತಿರಲಿಲ್ಲ ಎಂಬ ಆರೋಪ ಕೂಡ ಇದೆ. ಕಳೆದ ವರ್ಷ ಟಾಟಾ ಸಂಸ್ಥೆ ವರದಿ ನೀಡಿದ ನಂತರವೇ ಈ ಪ್ರಕರಣ ಬೆಳಕಿಗೆ ಬಂದಿತ್ತು.

ಕಳೆದ ವರ್ಷದ ಮೇ ತಿಂಗಳಲ್ಲಿ ಹಲವರ ವಿರುದ್ಧ ಎಫ್ ಐಆರ್ ಆಗಿತ್ತು. ಜತೆಗೆ ಬಂಧನ ಕೂಡ ಆಗಿತ್ತು. ಜುಲೈನಲ್ಲಿ ಈ ವಿಚಾರವನ್ನು ಸಿಬಿಐಗೆ ವರ್ಗಾಯಿಸಲಾಯಿತು. ಬಿಹಾರದ ಸಮಾಜ ಕಲ್ಯಾಣ ಸಚಿವರಾಗಿದ್ದ ಮಂಜು ವರ್ಮಾ ರಾಜೀನಾಮೆ ನೀಡಿದರು. ಆಕೆಯ ಪತಿ ಹಾಗೂ ಬಾಲಿಕಾ ಮಂದಿರದ ಮಾಲೀಕರೂ ಆಗಿದ್ದವರಿಗೆ ಆರೋಪಿ ಜತೆಗೆ ನಂಟಿತ್ತು ಎಂಬ ಆರೋಪ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು.
ಆರೋಪಿಗಳ ಪೈಕಿ ಬ್ರಜೇಶ್ ಠಾಕೂರ್ ನನ್ನು ಪಟಿಯಾಲ ಜೈಲಿನಲ್ಲಿ ಇರಿಸಲಾಯಿತು. ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಆ ಕ್ರಮ ತೆಗೆದುಕೊಳ್ಳಲಾಗಿತ್ತು. ಇನ್ನು ಆತನ ಇತರ ಕೆಲ ಸಹಚರರು, ಸರಕಾರಿ ಅಧಿಕಾರಿಗಳನ್ನು ಪಾಟ್ನಾ, ಮುಜಾಫರ್ ಪುರ್ ಜೈಲಿನಲ್ಲಿ ಇಡಲಾಯಿತು.
ಬಿಹಾರ ರಾಜ್ಯದಾದ್ಯಂತ ಇರುವ ಬಾಲಿಕಾ ಮಂದಿರಗಳಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪ ಇರುವ ಎಲ್ಲ ಪ್ರಕರಣಗಳನ್ನು ತನಿಖೆಗೆ ಕೈಗೆತ್ತಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಈಚೆಗೆ ಸಿಬಿಐಗೆ ನಿರ್ದೇಶನ ನೀಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications