'ಪ್ರಶಾಂತ್ ಮೂಲಕ ನಿತೀಶ್ ರಿಂದ ಆರ್ ಜೆಡಿ- ಜೆಡಿಯು ವಿಲೀನ ಪ್ರಸ್ತಾವ'
ಪಾಟ್ನಾ (ಬಿಹಾರ), ಏಪ್ರಿಲ್ 12: ನನ್ನ ಪತಿ ಲಾಲೂಪ್ರಸಾದ್ ರನ್ನು ಪ್ರಶಾಂತ್ ಕಿಶೋರ್ ಭೇಟಿಯಾಗಿ, ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಹಾಗೂ ನಿತೀಶ್ ಕುಮಾರ್ ರ ಜೆಡಿಯು ವಿಲೀನ ಮಾಡಿ, ಹೊಸ ಪಕ್ಷ ರಚಿಸಿ, ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ಅಭ್ಯರ್ಥಿಯ ಘೋಷಣೆ ಮಾಡುವ ಪ್ರಸ್ತಾವ ಇರಿಸಿದ್ದರು ಎಂದು ಮಾಜಿ ಮುಖ್ಯಮಂತ್ರಿ ರಾಬ್ರಿದೇವಿ ಶುಕ್ರವಾರ ಹೇಳಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಒಂದು ವೇಳೆ ನನ್ನ ಪತಿಯನ್ನು ಭೇಟಿ ಆಗಿದ್ದನ್ನು ಪ್ರಶಾಂತ್ ಕಿಶೋರ್ ನಿರಾಕರಿಸುತ್ತಿದ್ದಾರೆ ಅಂದರೆ ಹಸಿ ಸುಳ್ಳು ಹೇಳುತ್ತಿದ್ದಾರೆ ಎಂದರ್ಥ ಎಂಬುದಾಗಿ ರಾಬ್ರಿ ಹೇಳಿದ್ದಾರೆ. "ನನಗೆ ಸಿಟ್ಟು ಬಂದು ಅಲ್ಲಿಂದ ಹೊರಡುವಂತೆ ಪ್ರಶಾಂತ್ ಗೆ ಹೇಳಿದೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾಡಿದ ದ್ರೋಹದಿಂದಾಗಿ ಅವರ ಮೇಲೆ ವಿಶ್ವಾಸ ಹೊರಟುಹೋಗಿದೆ" ಎಂದು ಆವರು ಪ್ರಾದೇಶಿ ಸುದ್ದಿ ವಾಹಿನಿಯಲ್ಲಿ ಹೇಳಿದ್ದಾರೆ.
ಕಳೆದ ವರ್ಷ ನಿತೀಶ್ ಕುಮಾರ್ ಅವರು ಆರ್ ಜೆಡಿ, ಕಾಂಗ್ರೆಸ್ ಮಹಾಘಟ್ ಬಂಧನ್ ನಿಂದ ಹೊರಬಂದು ಬಿಜೆಪಿ ನೇತೃತ್ವದ ಎನ್ ಡಿಎ ಜತೆ ಮತ್ತೆ ಸೇರಿ, ಬಿಹಾರದಲ್ಲಿ ಮತ್ತೆ ಸರಕಾರ ರಚಿಸಿದ್ದರು.

ನಮ್ಮ ಎಲ್ಲ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಸಾಕ್ಷಿ ಇದ್ದಾರೆ. ಅವರು ಕನಿಷ್ಠ ಐದು ಸಲ ಕರೆ ಕಳುಹಿಸಿದ್ದರು. ಎರಡೂ ಪಕ್ಷಗಳು ವಿಲೀನ ಮಾಡಿ, ಪ್ರಧಾನಿ ಅಭ್ಯರ್ಥಿಯನ್ನು ಘೋಷಣೆ ಮಾಡೋಣ ಎಂದು ಪ್ರಶಾಂತ್ ಕಿಶೋರ್ ಮೂಲಕ ಪ್ರಸ್ತಾವ ಕಳುಹಿಸಿದ್ದರು ಎಂದು ರಾಬ್ರಿದೇವಿ ಹೇಳಿದ್ದಾರೆ.
ಲಾಲೂ ಪ್ರಸಾದ್ ಅವರು ಜೈಲಿನಿಂದಲೇ ಪ್ರಶಾಂತ್ ಕಿಶೋರ್ ಜತೆಗೆ ಮಾತುಕತೆಗೆ ಪ್ರಯತ್ನಿಸುತ್ತಿದ್ದಾರೆ ಎಂಬ ನಿತೀಶ್ ಕುಮಾರ್ ಮಾತಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ರಾಬ್ರಿ ದೇವಿ, ನಮಗೇ (ಕುಟುಂಬ ಸದಸ್ಯರು) ಅವರ (ಲಾಲೂ) ಜತೆ ಫೋನ್ ನಲ್ಲಿ ಮಾತನಾಡುವ ಅವಕಾಶ ಸಿಗುತ್ತಿಲ್ಲ. ಇನ್ನು ಜೈಲಿನಿಂದ ಮಾತುಕತೆ ನಡೆಸಲು ವ್ಯವಸ್ಥೆ ಮಾಡಿದ್ದಾರೆ ಅಂದರೆ ನಂಬಬಹುದೇ ಎಂದಿದ್ದಾರೆ.
ಈಚೆಗೆ ಲಾಲೂ ಪ್ರಸಾದ್ ಯಾದವ್ ಆತ್ಮಚರಿತ್ರೆ ಬಿಡುಗಡೆ ಅಗಿದೆ. ಅದರಲ್ಲಿ ಪ್ರಸ್ತಾವ ಆಗಿರುವಂತೆ, ಈಗ ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಆಗಿರುವ ಪ್ರಶಾಂತ್ ಕಿಶೋರ್ ಅವರು ನಿತೀಶ್ ಪರವಾಗಿ ಭೇಟಿಯಾಗಿ, ಮಹಾಘಟಬಂಧನ್ ನಲ್ಲಿ ಮತ್ತೆ ಸೇರುವ ಪ್ರಸ್ತಾವ ಇರಿಸಿದ್ದರು ಎಂದಿದೆ.
ಅದಕ್ಕೆ ಉತ್ತರ ನೀಡಿರುವ ಪ್ರಶಾಂತ್ ಕಿಶೋರ್, ಜೆಡಿಯು ಸೇರುವ ಮುನ್ನ ಹಲವು ಸಲ ಲಾಲೂ ಅವರನ್ನು ಭೇಟಿ ಆಗಿದ್ದೇನೆ. ನಾವು ಆಗ ಏನೆಲ್ಲ ಚರ್ಚಿಸಿದ್ದೇವೆ ಎಂಬುದನ್ನು ಹೇಳಿದರೆ ಲಾಲೂ ಪ್ರಸಾದ್ ರಿಗೆ ಮುಜುಗರ ಆಗುತ್ತದೆ ಎಂದು ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications