ಕಿಸ್ಮತ್ ಕಿ ಹವಾ: ನಿತೀಶ್ ಕುಮಾರ್-ಲಾಲೂ ಪ್ರಸಾದ್ ಯಾದವ್ ಮೀಮ್ ಭಾರಿ ವೈರಲ್
ಬಿಹಾರದಲ್ಲಿ ನಿತೀಶ್ ಕುಮಾರ್ ಬಿಜೆಪಿಯೊಂದಿಗಿನ ಮೈತ್ರಿ ಅಂತ್ಯಗೊಳಿಸಿದ್ದಾರೆ. ಹೊಸ ಸರ್ಕಾರ ರಚಿಸಲು ವೈರಿಯಾಗಿ ಮಾರ್ಪಟ್ಟಿದ್ದ ತಮ್ಮ ಹಳೆಯ ಸ್ನೇಹಿತ ಲಾಲೂ ಪ್ರಸಾದ್ ಯಾದವ್ ಅವರ ಪಕ್ಷದ ಜೊತೆ ಮತ್ತೆ ಒಂದಾಗುತ್ತಿದ್ದಾರೆ. ಲಾಲೂ-ನಿತೀಶ್ ಪಕ್ಷಗಳ ಮೈತ್ರಿ ಕುರಿತಂತೆ ಹಲವು ಮೀಮ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Recommended Video
ಒಂದು ಹಳೆಯ ಮೀಮ್ ಒಂದು ಈಗ ಮತ್ತೆ ಚಾಲ್ತಿಗೆ ಬಂದಿದ್ದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಬಿಹಾರದ ರಾಜಕೀಯ ಅನಿರೀಕ್ಷಿತತೆಯನ್ನು ಈ ಮೀಮ್ ಸೂಚಿಸುತ್ತದೆ.
1951ರಲ್ಲಿ ಬಿಡುಗಡೆಯಾದ ಅಲ್ಬೆಲಾ ಚಿತ್ರದ 'ಕಿಸ್ಮತ್ ಕಿ ಹವಾ' ಹಾಡು ಹಿನ್ನಲೆಯಲ್ಲಿ ಪ್ಲೇ ಆಗುವುದರೊಂದಿಗೆ, ಹಾಡಿನ ಸಾಹಿತ್ಯಕ್ಕೆ ಲಾಲೂ ಪ್ರಸಾದ್ ಯಾದವ್ ಮತ್ತು ನಿತೀಶ್ ಕುಮಾರ್ ಲಿಂಪ್ ಸಿಂಕ್ ಮಾಡಲಾಗಿದೆ. ಅನಿಮೇಷನ್ ಬಳಸಿ ಲಿಪ್ಸಿಂಕ್ ಮಾಡಿದ್ದು, ಈಗ ಭಾರಿ ವೈರಲ್ ಆಗಿದೆ.

ವಿಧಿಯ ಗಾಳಿಯು ಕೆಲವೊಮ್ಮೆ ಸೌಮ್ಯವಾಗಿರುತ್ತದೆ ಮತ್ತು ಕೆಲವೊಮ್ಮೆ ಕಠಿಣವಾಗಿರುತ್ತದೆ ಎನ್ನುವ ಅರ್ಥ ಬರುವ ಹಾಡನ್ನು ಸಿ ರಾಮಚಂದ್ರ ಅವರು ಹಾಡಿದ್ದಾರೆ.
ಪ್ರಸ್ತುತ ಸನ್ನಿವೇಶದಲ್ಲಿ ಸಂಯುಕ್ತ ಜನತಾದಳ ಬಿಜೆಪಿಯನ್ನು ತೊರೆದು ಅಧಿಕಾರಕ್ಕಾಗಿ ಮತ್ತೊಮ್ಮೆ ರಾಷ್ಟ್ರೀಯ ಜನತಾ ದಳದ ಜೊತೆ ಕೈ ಜೋಡಿಸಿರುವ ಸನ್ನಿವೇಶಕ್ಕೆ ಈ ಹಾಡು ಹೊಂದಿಕೆಯಾಗುತ್ತದೆ. ಬಿಹಾರ ರಾಜಕೀಯ ದೊಂಬರಾಟವನ್ನು ವಿಡಂಬನೆ ಮಾಡಲು ಈ ಮೀಮ್ ಸೃಷ್ಟಿಸಲಾಗಿದೆ.
Meanwhile in Patna! 😁😁 pic.twitter.com/fVJfQCmv7L
— Prashant Kumar (@scribe_prashant) August 9, 2022
ಟ್ವಿಟರ್ ನಲ್ಲಿ ಭಾರಿ ವೈರಲ್ ಆದ ಮೀಮ್
ಟ್ವಿಟರ್ ನಲ್ಲಿ ಈ ಮೀಮ್ ಭಾರಿ ವೈರಲ್ ಆಗಿದ್ದು, ಹಲವರು ಮೀಮ್ ಸೃಷ್ಟಿಸಿರುವ ಕಲಾವಿದನಿಗೆ ಶಹಬ್ಬಾಸ್ ಎಂದಿದ್ದಾರೆ. ನಿತೀಶ್ ಕುಮಾರ್ ಅವರಿಗೆ ಗಾಳಿ ಯಾವಾಗಲೂ ಅನುಕೂಲಕರವಾಗಿದೆ ಎಂದು ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ. ತಮ್ಮ ರಾಜಕೀಯ ತಂತ್ರಗಳಿಂದ ಅಧಿಕಾರವನ್ನು ನಿತೀಶ್ ಕುಮಾರ್ ಉಳಿಸಿಕೊಂಡಿದ್ದಾರೆ ಎಂದು ಸೂಚ್ಯವಾಗಿ ಹೇಳಿದ್ದಾರೆ.
"ಆದರೆ, ನಿತೀಶ್ ಕುಮಾರ್ ಗೆ ಕಿಸ್ಮತ್ ಕಿ ಹವಾ ಯಾವಾಗಲೂ ಗರಂ!" ಮತ್ತೊಬ್ಬ ಬಳಕೆದಾರರು ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ನಿತೀಶ್ ಕುಮಾರ್ ಆರ್ಜೆಡಿ ಜೊತೆ ಸೇರಿ ಸರ್ಕಾರ ರಚನೆ ಮಾಡಲಿದ್ದಾರೆ. ಬುಧವಾರ ಬಿಹಾರ ಮುಖ್ಯಮಂತ್ರಿಯಾಗಿ ಎಂಟನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲಾಲು ಯಾದವ್ ಅವರ ಪುತ್ರ ಮತ್ತು ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸೋಮವಾರ ಎನ್ಡಿಎ ಸರ್ಕಾರದಿಂದ ಹೊರನಡೆಯುವುದಾಗಿ ಘೋಷಣೆ ಮಾಡಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಸಮ್ಮಿಶ್ರ ಸರ್ಕಾರವನ್ನು ಮಧ್ಯದಲ್ಲೇ ತೊರೆದ ನಿತೀಶ್ ಕುಮಾರ್ ವಿರುದ್ಧ ಬಿಜೆಪಿ ಕೆಂಡಾಮಂಡಲವಾಗಿದೆ. ನಿತೀಶ್ ಕುಮಾರ್ ಜನರ ಆದೇಶಕ್ಕೆ ದ್ರೋಹ ಬಗೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications