ಅತ್ಯಾಚಾರಿಯ ಹೆಂಡ್ತಿಯಾದ್ರೇನಂತೆ? ನಮ್ಮ ಜಾತಿಯವರು ಗೆಲ್ಲಬೇಕಷ್ಟೇ!
ನಾವಡಾ (ಬಿಹಾರ), ಏಪ್ರಿಲ್ 05 : ಚುನಾವಣೆ ಸಂದರ್ಭದಲ್ಲಿ ಜಾತ್ಯತೀತತೆ ಎನ್ನುವುದು ಬರೀ ಬೊಗಳೆಯಷ್ಟೆ. ಕೆಲವರು ಸಂದರ್ಭಕ್ಕೆ ತಕ್ಕಂತೆ, ಆಯಾ ಜಾತಿಯವರನ್ನು ಆಕರ್ಷಿಸಲು ವೇಷಭೂಷಣ ತೊಡುತ್ತಾರೆ, ಕೆಲವರು ತಮ್ಮದೇ ಜಾತಿಯವರನ್ನು ಗೆಲ್ಲಿಸಲು ಎಂಥ ಕೆಲಸಕ್ಕೂ ಹೇಸುವುದಿಲ್ಲ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಅತ್ಯಾಚಾರ ಆರೋಪಿಯೊಬ್ಬರ ಹೆಂಡತಿಯನ್ನು, ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಬೆಂಬಲಿಸಿದ್ದಲ್ಲದೆ, ಚುನಾವಣೆಯಲ್ಲಿ ಬೆಂಬಲಿಸಿದ್ದಲ್ಲದೆ, ಅವರ ಜಾತಿಯನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿದ್ದಾರೆ ಮತ್ತು ಜಾತಿ ನೆಪ ಮಾಡಿಕೊಂಡು ಸರಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಅತ್ಯಾಚಾರ ಆರೋಪಿ ರಾಜಬಲ್ಲಭ್ ಯಾದವನನ್ನು ಸುಳ್ಳು ಅತ್ಯಾಚಾರದ ಆರೋಪ ಹೊರಿಸಿ ನಿತಿಶ್ ಕುಮಾರ್ ನೇತೃತ್ವದ ಸರಕಾರ ಜೈಲಿಗೆ ಹಾಕಿದೆ ಮತ್ತು ಯಾದವ ಸಮುದಾಯದ ಮಾನವನ್ನು ಹರಾಜು ಹಾಕುತ್ತಿದೆ ಎಂದು ರಾಬ್ಡಿ ದೇವಿ ಆರೋಪಿಸಿದ್ದಾರೆ.

ರಾಷ್ಟ್ರೀಯ ಜನತಾ ದಳದ ಅಭ್ಯರ್ಥಿಯಾಗಿ ವಿಭಾ ದೇವಿ ಬಿಹಾರದ ನಾವಡಾ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ರಾಬಬಲ್ಲಭ್ ಯಾದವ್ ಹೆಂಡತಿಯಾಗಿರುವ ವಿಭಾ ಯಾದವಳನ್ನು ಜನರು ಗೆಲ್ಲಿಸಬೇಕೆಂದು ರಾಬ್ಡಿದೇವಿ ಯಾಚಿಸಿದರು.
ಓರ್ವ ಅಪ್ರಾಪ್ತೆಯ ಮೇಲೆ ರಾಬಬಲ್ಲಭ್ ಯಾದವ್ ಅತ್ಯಾಚಾರ ಎಸಿಗಿದ್ದಕ್ಕಾಗಿ ಆತನಿಗೆ 2016ರಲ್ಲಿಯೇ ಪಟ್ನಾದ ಕೋರ್ಟ್ ಶಿಕ್ಷೆ ನೀಡಿತ್ತು. ನಿತಿಶ್ ಕುಮಾರ್ ಸರಕಾರ ಮಾಡಿದ ಷಡ್ಯಂತ್ರದಿಂದ ಆತ ಸುಳ್ಳು ಆರೋಪ ಹೊತ್ತು ಜೈಲಿಗೆ ಕಳುಹಿಸಲಾಗಿದೆ ಎಂಬುದು ರಾಬ್ಡಿದೇವಿಯ ಆರೋಪ. ಆದರೆ, ಜೈಲಿಗೆ ಕಳಿಸಿದ್ದು ಕೋರ್ಟ್ ಅಲ್ಲವೆ?
ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಬಹುಕೋಟಿ ಮೇವು ಹಗರಣದ ಪ್ರಮುಖ ಆರೋಪಿ ಲಾಲೂ ಪ್ರಸಾದ್ ಯಾದವ್ ಅವರ ಹೆಂಡತಿಯಾಗಿರುವ ರಾಬ್ಡಿ ದೇವಿ ಅವರು, ಐಆರ್ಸಿಟಿಸಿ ಹಗರಣದಲ್ಲಿ ತಮ್ಮ ಕುಟುಂಬವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸುಳ್ಳು ಆರೋಪ ಹೊರಿಸಿ ಸಿಲುಕಿಸಿದೆ ಎಂದೂ ಆರೋಪಿಸಿದರು.
ಯಾರು ಕುಬೇರರು, ಯಾರು ಕುಚೇಲರು? ಆಸ್ತಿಪಾಸ್ತಿ ವಿವರ ಬೇಕೆ?
ಲಾಲೂಜಿ ಮತ್ತು ಅವರ ಕುಟುಂಬ ಎಷ್ಟು ಮುಗ್ಧ ಎಂದು ಎಲ್ಲರಿಗೂ ಗೊತ್ತು. ಜನರಿಗೆ ಸತ್ಯ ಏನೆಂಬುದು ಗೊತ್ತು. ಲಾಲೂಜಿ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಭಾರತೀಯ ರೈಲ್ವೆಯ ಅಧಿಕಾರಿಗಳೇ ಹೇಳಿದ್ದಾರೆ ಎಂಬುದು ರಾಬ್ಡಿ ಅವರ ಮಾತು.
ಬಿಹಾರದಲ್ಲಿ ಏಪ್ರಿಲ್ 11ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮೇ 23ರಂದು ಮತಎಣಿಕೆ ಆಗಿ ಫಲಿತಾಂಶ ದೊರೆಯಲಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications