ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ರಾಮ್ ವಿಲಾಸ್ ಪಾಸ್ವಾನ್
ಪಾಟ್ನಾ, ಜೂನ್ 28: ಬಿಹಾರದ ಹಾಜಿಪುರ ಲೋಕಸಭಾ ಕ್ಷೇತ್ರದಲ್ಲಿ ಒಂದು ಕಾಲದಲ್ಲಿ ಭಾರಿ ಅಂತರದಲ್ಲಿ ಗೆದ್ದು ಗಿನ್ನೀಸ್ ದಾಖಲೆ ಬರೆದಿದ್ದ ಪ್ರಮುಖ ರಾಜಕಾರಣಿ, ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಈ ಬಾರಿ ಲೋಕಸಭೆಗೆ ಸ್ಪರ್ಧಿಸಿರಲಿಲ್ಲ. ಆದರೆ, ಕೇಂದ್ರ ಸಚಿವ ಸ್ಥಾನ ದಕ್ಕಿಸಿಕೊಂಡಿದ್ದರು.
ಶುಕ್ರವಾರದಂದು ಬಿಹಾರದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಹಾರ ವಿಧಾನಸಭೆಯ ಕಾರ್ಯದರ್ಶಿ, ಚುನಾವಣಾಧಿಕಾರಿ ಬಟೇಶ್ವರ್ ನಾಥ್ ಪಾಂಡೆ ಅವರು ಪಾಸ್ವಾನ್ ಅವರಿಗೆ ರಾಜ್ಯಸಭೆಗೆ ಆಯ್ಕೆಯಾಗಿ ಸಂಸದರಾದ ಪ್ರಮಾಣ ಪತ್ರವನ್ನು ನೀಡಿದರು. ಈ ಸಂದರ್ಭದಲ್ಲಿ ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಉಪಸ್ಥಿತರಿದ್ದರು.
72 ವರ್ಷ ವಯಸ್ಸಿನ ಪಾಸ್ವಾನ್ ಅವರು 1977ರಲ್ಲಿ ಹಾಜಿಪುರದಲ್ಲಿ 4.24 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ ಬಳಿಕ, ಹಿಂತಿರುಗಿ ನೋಡಿಲ್ಲ, ಮೂರು ದಶಕಗಳಿಂದ ಈ ಕ್ಷೇತ್ರದಲ್ಲಿ ಅವರದ್ದೇ ಪ್ರಾಬಲ್ಯವಾಗಿತ್ತು. ಆದರೆ, ಈ ಬಾರಿ ಪಾಸ್ವಾನ್ ಬದಲಿಗೆ ಅವರ ಕುಟುಂಬದ ಮೂವರು ಸ್ಪರ್ಧಿಸಿ ಜಯಭೇರಿ ಬಾರಿಸಿದ್ದಾರೆ.

ಚಿರಾಗ್ ಪಾಸ್ವಾನ್ (ರಾಮ್ ವಿಲಾಸ್ ಪಾಸ್ವಾನ್ ಪುತ್ರ), ಜಮುಯಿ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಭಾರಿ ಅಂತರದಲ್ಲಿ ಗೆಲುವು ಸಾಧಿಸಿದರು. ಪಶುಪತಿ ಕುಮಾರ್ ಪಾಸ್ವಾನ್(ರಾಮ್ ವಿಲಾಸ್ ಕಿರಿಯ ಸೋದರ) ಹಾಜಿಪುರ್ ಕ್ಷೇತ್ರದಿಂದ ಸ್ಪರ್ಧಿಸಿ ಜಯ ದಾಖಲಿಸಿದರು. ರಾಮ ಚಂದ್ರ ಪಾಸ್ವಾನ್ (ರಾಮ್ ವಿಲಾಸ್ ಕಿರಿಯ ಸೋದರ) ಸಮಸ್ಟಿಪುರ್ ನಿಂದ ಸ್ಪರ್ಧೆ ಮಾಡಿ ಉತ್ತಮ ಅಂತರದಲ್ಲಿ ಗೆಲುವು ದಾಖಲಿಸಿ ಸಂಸತ್ ಪ್ರವೇಶಿಸಿದ್ದಾರೆ..
1960ರಲ್ಲಿ ಸಂಯುಕ್ತ ಸೋಷಿಯಲಿಸ್ಟ್ ಪಕ್ಷ ಶಾಸಕರಾಗಿ ರಾಜಕೀಯ ಜೀವನ ಆರಂಭಿಸಿದ ಪಾಸ್ವಾನ್ ಅವರು 2010ರಲ್ಲಿ ಮೇಲ್ಮನೆ ಚುನಾವಣೆ ಎದುರಿಸಿದ್ದರು. 2014ರಲ್ಲಿ ಅವಧಿಗೂ ಮುನ್ನ ರಾಜೀನಾಮೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications