ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ರಾಮ್ ವಿಲಾಸ್ ಪಾಸ್ವಾನ್
ಪಾಟ್ನಾ, ಜೂನ್ 28: ಬಿಹಾರದ ಹಾಜಿಪುರ ಲೋಕಸಭಾ ಕ್ಷೇತ್ರದಲ್ಲಿ ಒಂದು ಕಾಲದಲ್ಲಿ ಭಾರಿ ಅಂತರದಲ್ಲಿ ಗೆದ್ದು ಗಿನ್ನೀಸ್ ದಾಖಲೆ ಬರೆದಿದ್ದ ಪ್ರಮುಖ ರಾಜಕಾರಣಿ, ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಈ ಬಾರಿ ಲೋಕಸಭೆಗೆ ಸ್ಪರ್ಧಿಸಿರಲಿಲ್ಲ. ಆದರೆ, ಕೇಂದ್ರ ಸಚಿವ ಸ್ಥಾನ ದಕ್ಕಿಸಿಕೊಂಡಿದ್ದರು.
ಶುಕ್ರವಾರದಂದು ಬಿಹಾರದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಹಾರ ವಿಧಾನಸಭೆಯ ಕಾರ್ಯದರ್ಶಿ, ಚುನಾವಣಾಧಿಕಾರಿ ಬಟೇಶ್ವರ್ ನಾಥ್ ಪಾಂಡೆ ಅವರು ಪಾಸ್ವಾನ್ ಅವರಿಗೆ ರಾಜ್ಯಸಭೆಗೆ ಆಯ್ಕೆಯಾಗಿ ಸಂಸದರಾದ ಪ್ರಮಾಣ ಪತ್ರವನ್ನು ನೀಡಿದರು. ಈ ಸಂದರ್ಭದಲ್ಲಿ ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಉಪಸ್ಥಿತರಿದ್ದರು.
72 ವರ್ಷ ವಯಸ್ಸಿನ ಪಾಸ್ವಾನ್ ಅವರು 1977ರಲ್ಲಿ ಹಾಜಿಪುರದಲ್ಲಿ 4.24 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ ಬಳಿಕ, ಹಿಂತಿರುಗಿ ನೋಡಿಲ್ಲ, ಮೂರು ದಶಕಗಳಿಂದ ಈ ಕ್ಷೇತ್ರದಲ್ಲಿ ಅವರದ್ದೇ ಪ್ರಾಬಲ್ಯವಾಗಿತ್ತು. ಆದರೆ, ಈ ಬಾರಿ ಪಾಸ್ವಾನ್ ಬದಲಿಗೆ ಅವರ ಕುಟುಂಬದ ಮೂವರು ಸ್ಪರ್ಧಿಸಿ ಜಯಭೇರಿ ಬಾರಿಸಿದ್ದಾರೆ.

ಚಿರಾಗ್ ಪಾಸ್ವಾನ್ (ರಾಮ್ ವಿಲಾಸ್ ಪಾಸ್ವಾನ್ ಪುತ್ರ), ಜಮುಯಿ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಭಾರಿ ಅಂತರದಲ್ಲಿ ಗೆಲುವು ಸಾಧಿಸಿದರು. ಪಶುಪತಿ ಕುಮಾರ್ ಪಾಸ್ವಾನ್(ರಾಮ್ ವಿಲಾಸ್ ಕಿರಿಯ ಸೋದರ) ಹಾಜಿಪುರ್ ಕ್ಷೇತ್ರದಿಂದ ಸ್ಪರ್ಧಿಸಿ ಜಯ ದಾಖಲಿಸಿದರು. ರಾಮ ಚಂದ್ರ ಪಾಸ್ವಾನ್ (ರಾಮ್ ವಿಲಾಸ್ ಕಿರಿಯ ಸೋದರ) ಸಮಸ್ಟಿಪುರ್ ನಿಂದ ಸ್ಪರ್ಧೆ ಮಾಡಿ ಉತ್ತಮ ಅಂತರದಲ್ಲಿ ಗೆಲುವು ದಾಖಲಿಸಿ ಸಂಸತ್ ಪ್ರವೇಶಿಸಿದ್ದಾರೆ..
1960ರಲ್ಲಿ ಸಂಯುಕ್ತ ಸೋಷಿಯಲಿಸ್ಟ್ ಪಕ್ಷ ಶಾಸಕರಾಗಿ ರಾಜಕೀಯ ಜೀವನ ಆರಂಭಿಸಿದ ಪಾಸ್ವಾನ್ ಅವರು 2010ರಲ್ಲಿ ಮೇಲ್ಮನೆ ಚುನಾವಣೆ ಎದುರಿಸಿದ್ದರು. 2014ರಲ್ಲಿ ಅವಧಿಗೂ ಮುನ್ನ ರಾಜೀನಾಮೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications