ವಿಚಿತ್ರ ಘಟನೆ: ಕನಸಲ್ಲಿ ಅತ್ಯಾಚಾರ ನಡೆದಿದ್ದಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ
ಪಾಟ್ನಾ, ಜೂನ್ 26: ರಾತ್ರಿ ಕನಸಿನಲ್ಲಿ ಮಾಂತ್ರಿಕನೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಈ ಘಟನೆ ಬಿಹಾರದ ಔರಂಗಾಬಾದ್ನಲ್ಲಿ ನಡೆದಿದೆ, ದೂರಿನಲ್ಲಿ ಹೇಳಿರುವಂತೆ, ಅನಾರೋಗ್ಯದಿಂದ ಮಗನಿಗಾಗಿ ಮಹಿಳೆ ಪ್ರಶಾಂತ್ ಚತುರ್ವೇದಿ ಎಂಬ ಮಾಂತ್ರಿಕನ ಬಳಿಗೆ ಹೋಗಿದ್ದು, ಆತ ಕೆಲವು ಪೂಜೆಗಳನ್ನು ಮಾಡಿ ಕೆಲ ಮಂತ್ರಗಳನ್ನು ಉಪದೇಶಿಸಿದ್ದನಂತೆ. ಆದರೆ ಆಕೆಯ ಮಗ ಗುಣಮುಖನಾಗದೇ 15 ದಿನಗಳ ನಂತರ ಸಾವನ್ನಪ್ಪಿದ್ದಾನೆ.
ನಂತರ ಮಾಂತ್ರಿಕ ವಾಸಿಸುತ್ತಿದ್ದ ಕಾಳಿ ಬರಿ ದೇವಾಲಯಯಕ್ಕೆ ಹೋದ ಮಹಿಳೆ ತನ್ನ ಮಗ ಹೇಗೆ ಸತ್ತ ಎಂದು ಹೇಳುವಂತೆ ಆಕ್ರೋಶದಿಂದ ಕೇಳಿದ್ದಳಂತೆ.

ಆ ಸಂದರ್ಭದಲ್ಲಿ ಮಾಂತ್ರಿಕ ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ, ಆದರೆ ಸತ್ತ ನನ್ನ ಮಗ ನನ್ನ ರಕ್ಷಣೆ ಮಾಡಿದ ಎಂದು ಹೇಳಿರುವ ಮಹಿಳೆ, ಅಂದಿನಿಂದ ಪ್ರತಿ ರಾತ್ರಿ ತನ್ನ ಕನಸಿನಲ್ಲಿ ಬರುವ ಮಾಂತ್ರಿಕ ಅತ್ಯಾಚಾರ ನಡೆಸುತ್ತಿದ್ದಾನೆ ಎಂದು ಆರೋಪಿಸಿದ್ದಾಳೆ.
ದೂರು ಪಡೆದ ಪೊಲೀಸರು ಪ್ರಶಾಂತ್ ಚತುರ್ವೇದಿಯನ್ನು ವಿಚಾರಣೆ ನಡೆಸಿದಾಗ ಆ ಮಹಿಳೆಯ ಪರಿಚಯವೇ ಇಲ್ಲ ಎಂದು ಹೇಳಿದ್ದಾನೆ. ಇನ್ನು ಆತನ ವಿರುದ್ಧ ಯಾವುದೇ ಸಾಕ್ಷಿ ಇಲ್ಲದ ಕಾರಣ ಪೊಲೀಸರು ಆತನನ್ನು ಬಿಟ್ಟು ಕಳುಹಿಸಿದ್ದಾರೆ.
ಆಗಿದ್ದೇನೆಂದರೆ ದೂರು ನೀಡಿರುವ ಮಹಿಳೆಯ ಪುತ್ರನಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಈ ಬಗ್ಗೆ ಮಾಟಗಾರನನ್ನು ಸಂಪರ್ಕಿಸಲು ಯಾರೋ ನೀಡಿದ ಸಲಹೆ ಮೇರೆಗೆ ಮಹಿಳೆ ಪ್ರಶಾಂತ್ ಚತುರ್ವೇದಿ ಎಂಬ ಮಾಟಗಾರನನ್ನು ಸಂಪರ್ಕಿಸಿದ್ದಾಳೆ. ಆತ ಅನಾರೋಗ್ಯ ಪೀಡಿತ ಪುತ್ರನಿಗೆ ಕೆಲವು ಮಂತ್ರ ಜಪಿಸುವಂತೆ ಹೇಳಿದ್ದಾನೆ. ಆದ್ರೆ ಮುಂದೆ ಕೆಲ ದಿನಗಳಲ್ಲಿ ಆಕೆಯ ಪುತ್ರ ಸಾವನ್ನಪ್ಪಿದ್ದಾನೆ.
ಇದೇ ವಿಷಯ ಮಂತ್ರವಾದಿಗೆ ತಿಳಿಸಲು ಹೋದಾಗ ಆತ ಕಾಳಿಕಾ ದೇವಸ್ಥಾನಕ್ಕೆ ಬರಲು ಹೇಳಿದ್ದಾನೆ. ಅಲ್ಲಿ ಹೋದಾಗ ಆ ಮಾಟಗಾರ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಇದರಿಂದ ಜರ್ಜರಿತಳಾದ ಮಹಿಳೆಯ ಕನಸಲ್ಲಿ ಅದೇ ದೃಶ್ಯ ಕಾಣುತ್ತಿದೆ.
ಈ ಬಗ್ಗೆ ಮಹಿಳೆ ಪೊಲೀಸರ ಬಳಿ ಅವಲತ್ತುಕೊಂಡ ನಂತರ ವಿಚಾರಣೆ ನಡೆಸಿದ ಪೊಲೀಸರು ಮಾಟಗಾರನನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಆದರೆ ಸಾಕ್ಷ್ಯಾಧಾರಗಳಿಲ್ಲದ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಆದರೆ ಈ ನಡುವೆ ಮಹಿಳೆಗೆ ಮತ್ತದೇ ಕನಸಿನ ಆತಂಕ ಕಡಿಮೆಯಾಗಿಲ್ಲ ಎನ್ನಲಾಗಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications